ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪುರಸ್ಕಾರಕ್ಕೆ ಮಂಜುನಾಯಕ ಚಳ್ಳೂರು, ಬಾಲ ಪುರಸ್ಕಾರಕ್ಕೆ ವಿಜಯಶ್ರೀ ಹಾಲಾಡಿ ಆಯ್ಕೆ

Date:

2023ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪುರಸ್ಕಾರಕ್ಕೆ ಕತೆಗಾರ ಮಂಜುನಾಯಕ ಚಳ್ಳೂರು ಮತ್ತು ಬಾಲ ಪುರಸ್ಕಾರಕ್ಕೆ ಕವಯಿತ್ರಿ ವಿಜಯಶ್ರೀ ಹಾಲಾಡಿ ಆಯ್ಕೆಯಾಗಿದ್ದಾರೆ.

ಯುವ ಕತೆಗಾರ ಮಂಜುನಾಯಕ ಚಳ್ಳೂರು ಅವರ ‘ಫೂ ಮತ್ತು ಇತರ ಕತೆಗಳು’ ಕಥಾ ಸಂಕಲನಕ್ಕೆ 2023ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪುರಸ್ಕಾರ ಲಭಿಸಿದೆ. ವಿಜಯಶ್ರೀ ಹಾಲಾಡಿ ಅವರ ಮಕ್ಕಳ ಕಾದಂಬರಿ ‘ಸೂರಕ್ಕಿ ಗೇಟ್’‌ ಕೃತಿಗೆ ಬಾಲ ಪುರಸ್ಕಾರ ಲಭಿಸಿದೆ.

‘ಫೂ ಮತ್ತು ಇತರ ಕತೆಗಳು’ ಕಥೆಗಾರ ಮಂಜುನಾಯಕ ಚಳ್ಳೂರು ಅವರ ಮೊದಲ ಕಥಾಸಂಕಲನವಾಗಿದೆ. ಒಟ್ಟು ಏಳು ಕಥೆಗಳು ಇಲ್ಲಿವೆ. ಪ್ರತಿ ಕಥೆಯೂ ತಾಜಾ ರೂಪಕ ಮತ್ತು ವಿಶಿಷ್ಟ ಕಥನ ಕ್ರಿಯೆಯಿಂದ ಕೂಡಿವೆ. ಕುತೂಹಲಕಾರಿ ಭಾಷಾ ಪ್ರಯೋಗ, ದೇಸಿ ನುಡಿಗಟ್ಟಿನ ಬಳಕೆಯಿಂದ ಈ ಕಥೆಗಳ ಓದು ಹೆಚ್ಚು ಆಪ್ತವಾಗುತ್ತದೆ. ಇಲ್ಲಿನ ಬಹುತೇಕ ಕಥೆಗಳು ಮನುಷ್ಯನ ಬದುಕಿನ ಶೋಧವನ್ನೇ ಕೇಂದ್ರವಾಗಿ ಹೊಂದಿದ್ದು, ಗ್ರಾಮೀಣ ಕಟ್ಟುಕಟ್ಟಳೆಗಳ ಬದುಕು ಇಲ್ಲಿನ ಕಥಾವಸ್ತುಗಳಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಂಜುನಾಯಕ ಚಳ್ಳೂರು ಹುಟ್ಟಿದ್ದು ಆಗಸ್ಟ್‌ 31, 1993ರಲ್ಲಿ. ಹುಟ್ಟೂರು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಚಳ್ಳೂರು. ಧಾರವಾಡದಲ್ಲಿ ಬಿಎಸ್ಸಿ ಪದವಿ, ಬಳಿಕ ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಉನ್ನತ ಶಿಕ್ಷಣ. ಕೆಲಕಾಲ ಪತ್ರಕರ್ತನಾಗಿ ದುಡಿಮೆ. ಪ್ರಸ್ತುತ ಕನ್ನಡ ಮನರಂಜನಾ ವಾಹಿನಿ ಕಲರ್ಸ್ ಕನ್ನಡದಲ್ಲಿ ಉದ್ಯೋಗಿ.

‘ಟೊಟೊ ಫಂಡ್ಸ್ ದಿ ಆರ್ಟ್ಸ್’ (ಟಿ.ಎಫ್.ಎ) ಸಂಸ್ಥೆ ನೀಡುವ 2018ರ ಟೊಟೊ ಪ್ರಶಸ್ತಿ ಮತ್ತು ‘ಕಾಜಾಣ ಯುವ ಪುರಸ್ಕಾರ’ ಕನ್ನಡದ ಯುವ ಬರಹಗಾರ ಮಂಜುನಾಯಕ ಚಳ್ಳೂರು ಭಾಜನರಾಗಿದ್ದರು.

ವಿಜಯಶ್ರೀ ಹಾಲಾಡಿ

ಕವಯಿತ್ರಿ ವಿಜಯಶ್ರೀ ಹಾಲಾಡಿ ಅವರು ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹಾಲಾಡಿ ಗ್ರಾಮದವರು. ತಂದೆ ಬಾಬುರಾವ್ ತಾಯಿ ಎಂ., ರತ್ನಾವತಿ. ಎಂ.ಎ., ಬಿ.ಎಡ್. ಪದವೀಧರರು.

ಕೃತಿಗಳು: ಬೀಜ ಹಸಿರಾಗುವ ಗಳಿಗೆ (ಕವನ ಸಂಕಲನ-2009), ’ಪಪ್ಪು ನಾಯಿಯ ಪ್ರೀತಿ (ಮಕ್ಕಳ ಸಾಹಿತ್ಯ ವಿಭಾಗದ ಈ ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ 2015 ರ ಪುಸ್ತಕ ಬಹುಮಾನ)

ಪ್ರಶಸ್ತಿ-ಪುರಸ್ಕಾರಗಳು: ಮುಂಬೈ ಕನ್ನಡ ಸಂಘದ ಸುಶೀಲಾ ಶೆಟ್ಟಿ ಸ್ಮಾರಕ ಪ್ರಶಸ್ತಿ, (ಹಸ್ತಪ್ರತಿಗೆ-2007), ಕನ್ನಡ ಸಾಹಿತ್ಯ ಪರಿಷತ್ತಿನಿಂದ ಶಾರದಾ ಆರ್ ರಾವ್ ದತ್ತಿ ಪ್ರಶಸ್ತಿ ಲಭಿಸಿದೆ.

ಯುವ ಪುರಸ್ಕಾರ ಆಯ್ಕೆ ಸಮಿತಿಯಲ್ಲಿ ಎಚ್‌ ಎಸ್ ರಾಘವೇಂದ್ರ ರಾವ್‌, ಡಾ. ಕೆ ಮರುಳಸಿದ್ದಪ್ಪ ಹಾಗೂ ಎಂ ಆರ್‌ ಕಮಲಾ ಮತ್ತು ಬಾಲ ಪುರಸ್ಕಾರ ಆಯ್ಕೆ ಸಮಿತಿಯಲ್ಲಿ ಡಾ. ಜಯಶ್ರೀ ಕಂಬಾರ, ಡಾ. ಆನಂದ ಪಾಟೀಲ ಹಾಗೂ ಮೂಡ್ನಾಕೂಡು ಚಿನ್ನಸ್ವಾಮಿ ಇದ್ದರು ಎಂದು ಪ್ರಕಟಣೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...