ಉಡುಪಿ | ಶಿಕ್ಷಣಕ್ಕೆ ಬದುಕಿನ ಪಾಠ: ಮಕ್ಕಳ ಸಂತೆಯ ಮೂಲಕ ಅನುಭವಾಧಾರಿತ ಕಲಿಕೆ

Date:

ಉಡುಪಿ ಜಿಲ್ಲೆಯ ಕೋಟ ಮಣೂರು ಪಡುಕರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾದ ಮಕ್ಕಳ ಸಂತೆ ಕಾರ್ಯಕ್ರಮ ಮಕ್ಕಳ ವ್ಯಾಪಾರ ಚತುರತೆ, ಆತ್ಮವಿಶ್ವಾಸ ಮತ್ತು ಕೌಶಲ್ಯಾಭಿವೃದ್ಧಿಯ ಮೂಲಕ ಎಲ್ಲರ ಗಮನ ಸೆಳೆಯಿತು. ಮಂಗಳವಾರ ಶಾಲಾ ಮೈದಾನದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಗೀತಾನಂದ ಫೌಂಡೇಶನ್ ಮಣೂರು ಹಾಗೂ ಸಮುದ್ಯತಾ ಗ್ರೂಪ್ಸ್ ಕೋಟ ಅವರ ಆಶ್ರಯದಲ್ಲಿ ಈ ವಿನೂತನ ಕಾರ್ಯಕ್ರಮ ನಡೆಯಿತು.

1009445954

ಮಕ್ಕಳ ಸಾಮಾನ್ಯ ಜ್ಞಾನ, ಸಂವಹನ ಕೌಶಲ್ಯ ಹಾಗೂ ಉದ್ಯಮಶೀಲ ಮನೋಭಾವ ಬೆಳೆಸುವ ಉದ್ದೇಶದಿಂದ ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದದ ಮುಂದಾಳತ್ವದಲ್ಲಿ ಈ ಮಕ್ಕಳ ಸಂತೆ ಆಯೋಜಿಸಲಾಯಿತು. ಖಾಸಗಿ ಶಾಲೆಗಳ ಪೈಪೋಟಿಯ ನಡುವೆ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಲ್ಲೂ ವ್ಯಾಪಾರ ಜಾಣ್ಮೆ ಮತ್ತು ಆತ್ಮಸ್ಥೈರ್ಯ ಬೆಳೆಯಬಹುದು ಎಂಬುದಕ್ಕೆ ಈ ಕಾರ್ಯಕ್ರಮ ಸ್ಪಷ್ಟ ಸಾಕ್ಷಿಯಾಯಿತು.

1009445960

ಗ್ರಾಮೀಣ ಹಾಗೂ ನಗರ ಪ್ರದೇಶಗಳ ವಾರದ ಸಂತೆಯ ಅನುಭವವನ್ನು ಮಕ್ಕಳೇ ಮರುಸೃಷ್ಟಿಸಿದಂತಿತ್ತು. ತರಕಾರಿ, ದಿನಸಿ, ಹಣ್ಣು-ಹಂಪಲುಗಳ ಅಂಗಡಿಗಳ ಮುಂದೆ ದರಪಟ್ಟಿ, ವಸ್ತುಗಳ ಪ್ರದರ್ಶನ, ಗ್ರಾಹಕರನ್ನು ಸೆಳೆಯುವ ಮಾತಿನ ಜಾಣ್ಮೆ ಎಲ್ಲವೂ ಗಮನ ಸೆಳೆಯಿತು. “ಹೊಯ್ ಇಲ್ ಬನಿಯೇ… ದರು ಕಡ್ಮಿ ಇತ್ತೆ…” ಎಂಬ ಮಕ್ಕಳ ಕೂಗು ಸಂತೆಯ ವಾತಾವರಣಕ್ಕೆ ಜೀವ ತುಂಬಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಕ್ಕಳ ಸಂತೆಯಲ್ಲಿ ಬದನೆಕಾಯಿ, ಕುಂಬಳಕಾಯಿ, ಬೀನ್ಸ್, ಕ್ಯಾರೆಟ್, ತೊಂಡೆ, ಬಟಾಟೆ, ವಿವಿಧ ಸೊಪ್ಪುಗಳು, ಸೆಬು, ಮುಸುಂಬಿ, ದ್ರಾಕ್ಷಿ, ದಾಳಿಂಬೆ, ಕಲ್ಲಂಗಡಿ, ಗ್ರಾಮೀಣ ಹಣ್ಣುಗಳು, ಕಡುಬಿನ ಕೊಟ್ಟೆ ಸೇರಿದಂತೆ ಅನೇಕ ವಸ್ತುಗಳು ವ್ಯಾಪಾರದ ಕೇಂದ್ರವಾಗಿದ್ದವು. ಪೋಷಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮಕ್ಕಳನ್ನು ಪ್ರೋತ್ಸಾಹಿಸಿದರು.

1009445957

ಕಾರ್ಯಕ್ರಮಕ್ಕೆ ಜಿಲ್ಲೆಯ ಶೈಕ್ಷಣಿಕ ಪ್ರೋತ್ಸಾಹಕರಾದ ಗೀತಾನಂದ ಟ್ರಸ್ಟ್‌ನ ಪ್ರವರ್ತಕ ಆನಂದ್ ಸಿ. ಕುಂದರ್ ಚಾಲನೆ ನೀಡಿದರು. ಕೋಟದ ಹೋಟೆಲ್ ಉದ್ಯಮಿ ಕೆ. ವೆಂಕಟೇಶ ಪ್ರಭು ರಿಬ್ಬನ್ ಕತ್ತರಿಸುವ ಮೂಲಕ ಸಂತೆ ವಹಿವಾಟಿಗೆ ಅಧಿಕೃತ ಆರಂಭ ನೀಡಿದರು.

1009445959

ಈ ಸಂದರ್ಭದಲ್ಲಿ ವಾಹಿನಿ ಯುವಕ ಮಂಡಲದ ಅಧ್ಯಕ್ಷ ರಮೇಶ್ ಹೆಚ್. ಕುಂದರ್, ಲಕ್ಷ್ಮೀ ಸೋಮಬಂಗೇರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ರಾಜೇಂದ್ರ ಎಸ್. ನಾಯಕ, ಗೀತಾನಂದ ಟ್ರಸ್ಟ್‌ನ ನಿರ್ದೇಶಕಿ ದಿವ್ಯಲಕ್ಷ್ಮೀ ಪ್ರಶಾಂತ್ ಕುಂದರ್, ಸಂಯುಕ್ತ ಪ್ರೌಢಶಾಲಾ ಮುಖ್ಯ ಶಿಕ್ಷಕ ವಿವೇಕಾನಂದ ಗಾವಂಕರ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಮಂಜುನಾಥ್ ಹೊಳ್ಳ, ಕೋಟ ಪಂಚಾಯತ್ ಸದಸ್ಯ ಎಂ. ಜಯರಾಮ ಶೆಟ್ಟಿ, ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ನಾಗರಾಜ್ ಹಾಗೂ ಶಿಕ್ಷಕ ವೃಂದ ಉಪಸ್ಥಿತರಿದ್ದರು. ಗೀತಾನಂದ ಸಮಾಜಕಾರ್ಯ ವಿಭಾಗದ ರವಿಕಿರಣ್ ಕೋಟ ಸಹಕರಿಸಿದರು. ಗೀತಾನಂದ ಟ್ರಸ್ಟ್ ಸದಸ್ಯೆ ವೈಷ್ಣವಿ ರಕ್ಷಿತ್ ಕುಂದರ್ ಕಾರ್ಯಕ್ರಮ ಸಂಯೋಜಿಸಿದರು.

1009445956

ಮಕ್ಕಳ ಪ್ರತಿಭೆ, ಪರಿಶ್ರಮ ಮತ್ತು ಉತ್ಸಾಹದ ಮೂಲಕ ಸರ್ಕಾರಿ ಶಾಲೆಯೊಂದು ಮಾದರಿ ಕಾರ್ಯಕ್ರಮ ರೂಪಿಸಿದ್ದು, ಮಕ್ಕಳ ಸಂತೆ ಎಲ್ಲರ ಮನಗೆದ್ದಿತು.

1009445952
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...