ಹುಣಸೂರಿನಲ್ಲಿ ಪ್ರಗತಿಪರ ಸಂಘಟನೆಗಳಿಂದ ಮನುಸ್ಮೃತಿ ಪ್ರತಿ ದಹನ

Date:

ಮೈಸೂರು ಜಿಲ್ಲೆ, ಹುಣಸೂರಿನ ಸಂವಿಧಾನ ವೃತ್ತದಲ್ಲಿ,ಡಾ. ಬಿ.ಆರ್. ಅಂಬೇಡ್ಕರ್ ಅವರು ಮನುಸ್ಮತಿ ಯನ್ನು ದಹಿಸಿದ ದಿನದ ಅಂಗವಾಗಿ ದಸಂಸ ಮತ್ತು ಪ್ರಗತಿಪರ ಸಂಘಟನೆಗಳ ವತಿಯಿಂದ ಮನುಸ್ಮತಿ ಪ್ರತಿಯನ್ನು ದಹಿಸಲಾಯಿತು.

ಸಂವಿಧಾನ ವೃತ್ತದಲ್ಲಿ ನೆರೆದಿದ್ದ ಪ್ರಗತಿಪರ ಸಂಘಟನೆ, ದಸಂಸ ಮುಖಂಡರು ಅಂಬೇಡ್ಕರ್ ಚಿರಾಯುವಾಗಲಿ, ಜೀವ ವಿರೋಧಿ, ಮನುಷ್ಯ ವಿರೋಧಿ, ಸಮಾನತೆಯ ವಿರೋಧಿ ಮನುಸ್ಮತಿಗೆ ದಿಕ್ಕಾರ ಕೂಗಿ, ಪ್ರಗತಿಪರ ಸಂಘಟನೆಗಳ ಹೋರಾಟಕ್ಕೆ ಜಯವಾಗಲಿ ಎಂದು ಘೋಷಣೆ ಕೂಗುತ್ತಾ ಮನುಸ್ಮತಿ ಪ್ರತಿಯನ್ನು ದಹಿಸಿದರು.

ಮುಖಂಡರಾದ ಜೆ. ಮಹದೇವು ಮಾತನಾಡಿ, “ಜಾತಿ ವ್ಯವಸ್ಥೆಗೆ ಮತ್ತು ಅಸ್ಪೃಶ್ಯತೆಗೆ ಮುನ್ನುಡಿ ಬರೆದಿದ್ದ ಮನುಸ್ಮತಿ ಬಹುಜನರಿಗೆ ಮಾರಕವಾಗಿದೆ ಎಂದು ಅರಿತ್ತಿದ್ದ ಅಂಬೇಡ್ಕರ್ ರವರು 98 ವರ್ಷಗಳ ಹಿಂದೆಯೇ ಸುಟ್ಟು ಹಾಕಿದ್ದರು. ಆದರೂ, ಇಂದಿನ ಸಮಾಜದಲ್ಲಿ ಜಾತಿ ವ್ಯವಸ್ಥೆ, ಅಸ್ಪೃಶ್ಯತೆ. ಪಾಳೇಗಾರಿಕೆ ಸಂಸ್ಕೃತಿ ಇನ್ನೂ ಜೀವಂತವಾಗಿದೆ. ಜನಪರ ಸಂಘಟನೆಗಳು ಸಂಘಟಿತರಾಗಿ ಇದನ್ನು ಹಿಮ್ಮೆಟ್ಟಿಸಬೇಕಾಗಿದೆ. ಜಾತಿ ವ್ಯವಸ್ಥೆ ವಿರುದ್ಧ ಅಂದೇ ಧ್ವನಿ ಎತ್ತಿದ್ದ ಅಂಬೇಡ್ಕರ್ ರವರು ಸಂವಿಧಾನದ ಮೂಲಕ ಸಮ ಸಮಾಜದ ಕನಸು ಕಂಡಿದ್ದರು. ಆದರೆ, ಕೋಮುವಾದಿ ಶಕ್ತಿಗಳು ಮನುಸ್ಮತಿಯನ್ನು ಮತ್ತೊಮ್ಮೆ ಸಮಾಜದ ಮೇಲೆ ಹೇರಲು ಹವಣಿಸುತ್ತಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ತಮಿಳುನಾಡು | ರೈತ ಮುಖಂಡ ಪಿ ಆರ್ ಪಾಂಡಿಯನ್ ಜೈಲಿನಿಂದ ಬಿಡುಗಡೆ: ಸ್ವಾಗತಿಸಿದ ಜಗಜಿತ್ ಸಿಂಗ್ ದಲ್ಲೆವಾಲ್

ದಸಂಸ ತಾಲ್ಲೂಕು ಸಂಚಾಲಕ ಅತ್ತಿಕುಪ್ಪೆ ರಾಮಕೃಷ್ಣ, ಸಿಪಿಐ(ಎಂ) ಮುಖಂಡ ವಿ. ಬಸವರಾಜು ಕಲ್ಕುಣಿಕೆ, ದಸಂಸ ನಗರ ಸಂಚಾಲಕ ರಾಜು ಚಿಕ್ಕಹುಣಸೂರು, ಸಂಚಾಲಕ ಮುತ್ತುರಾಯನ ಹೊಸಳ್ಳಿ ಶಿವರಾಜು, ಜಿಲ್ಲಾ ಸಂಯೋಜಕ ಪ್ರಕಾಶ್, ಖಜಾಂಚಿ ಸಿದ್ದೇಶ್ ಅತ್ತಿಕುಪ್ಪೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೀರನಹಳ್ಳಿ ಬಾಲಸುಂದರ್, ದಸಂಸ ತಾಲ್ಲೂಕು ಮಹಿಳಾ ಸಂಚಾಲಕಿ ರುಕ್ಮಿಣಿ, ಹಳೇಪುರ ಕೃಷ್ಣ, ಚಲುವರಾಜು, ಸೋಮಯ್ಯ, ತರಿಕಲ್ಲು ಕಿಟ್ಟಪ್ಪ, ಕೆಇಬಿ ರಾಜಪ್ಪ, ಪ್ರೊ. ಮಹದೇವ್, ಗಿರೀಶ್ ಬಿಳಿಕೆರೆ, ನಾರಾಯಣ, ವಕೀಲ ಅಶೋಕ್, ಪಾಸ್ಟಾರ್ ಸುರೇಶ್, ಕುಮಾರ್ ಕೆಎಂ ವಾಡಿ, ಸುಂದರ್ ಹೊಸಕೋಟೆ, ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...