ರಾಜ್ಯ ಬಜೆಟ್ | ಶಿಕ್ಷಣ ಕ್ಷೇತ್ರದಲ್ಲಿ ಹಲವು ಮಾರ್ಪಾಡು; ಸ್ವಾಗತಾರ್ಹ ಬಜೆಟ್ ಎಂದ ಎಐಡಿಎಸ್‌ಒ

Date:

ರಾಜ್ಯ ಬಜೆಟ್‌ನಲ್ಲಿ ಸಾರ್ವಜನಿಕ ಶಿಕ್ಷಣ ಸಂಸ್ಥೆಗಳನ್ನು ಬಲಪಡಿಸಲು ಕಟ್ಟಡ ದುರಸ್ತಿ ಸೇರಿದಂತೆ ಇತರ ಸೌಲಭ್ಯಗಳ ಅಭಿವೃದ್ಧಿಗಾಗಿ ಅನುದಾನ ಘೋಷಿಸಲಾಗಿದೆ. ತಜ್ಞರ ಸಮಿತಿ ನೇಮಕ ಮಾಡಿ ಪಠ್ಯಪುಸ್ತಕ ಪರಿಷ್ಕರಣೆ ಮಾಡುವುದಾಗಿ ಹಾಗೂ ಹೊಸ ಶಿಕ್ಷಣ ನೀತಿ-2020 (ಎನ್‌ಇಪಿ) ಕೈಬಿಟ್ಟು ರಾಜ್ಯಕ್ಕೆ ಪ್ರತ್ಯೇಕ ನೀತಿಯನ್ನು ಜಾರಿಗೊಳಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಅನುದಾನವನ್ನು ಹೆಚ್ಚಿಸಲಾಗಿದೆ. ಸರ್ಕಾರದ ಈ ನಿರ್ಧಾರಗಳು ಸ್ವಾಗತಾರ್ಹವಾಗಿವೆ ಎಂದು ಎಐಡಿಎಸ್ಒ ಹೇಳಿದೆ.

ಬಜೆಟ್‌ ಕುರಿತು ಪ್ರತಿಕ್ರಿಯೆ ನೀಡಿದರುವ ಧಾರವಾಡ ಎಐಡಿಎಸ್‌ಒ ಜಿಲ್ಲಾಧ್ಯಕ್ಷ ಮಹಾಂತೇಶ್ ಬಿಳೂರ್, “ಪಠ್ಯಪುಸ್ತಕ ಪರಿಷ್ಕರಣೆ ಹಾಗೂ ಸಾರ್ವಜನಿಕ ಶಿಕ್ಷಣದ ಉಳಿವಿಗಾಗಿ ಎನ್‌ಇಪಿ ವಿರೋಧಿಸಿ ರಾಜ್ಯದಲ್ಲಿ ಬೆಳೆದ ವಿದ್ಯಾರ್ಥಿ ಹಾಗೂ ಜನ ಚಳುವಳಿಗೆ ಸಂದ ಜಯವಾಗಿದೆ. ರಾಜ್ಯದಲ್ಲಿ ರೂಪಿಸಲಾಗುವ ಹೊಸ ಶಿಕ್ಷಣ ನೀತಿಯು ಶಿಕ್ಷಣದ ಖಾಸಗೀಕರಣ, ವ್ಯಾಪಾರೀಕರಣ, ಕೋಮುವಾದೀಕರಣಕ್ಕೆ ಅವಕಾಶಕೊಡದೆ, ಪ್ರಜತಾಂತ್ರಿಕವಾಗಿಯೂ, ಧರ್ಮನಿರಪೇಕ್ಷವಾಗಿಯೂ ಇರಬೇಕು. ನೀತಿಯನ್ನು ರೂಪಿಸುವಾಗ ಸರ್ಕಾರವು ಏಕಪಕ್ಷಿಯವಾಗಿ ನಿರ್ಧಾರ ತೆಗೆದುಕೊಳ್ಳದೆ, ರಾಜ್ಯದ ಶಿಕ್ಷಣ ತಜ್ಞರು, ಪಾಲಕರು ಹಾಗೂ ವಿದ್ಯಾರ್ಥಿ ಸಂಘಟನೆಗಳನ್ನು ಒಳಗೊಂಡ ಪ್ರಜಾತಾಂತ್ರಿಕ ಪ್ರಕ್ರಿಯೆಯ ಮೂಲಕ ನಡೆಸಬೇಕು” ಎಂದಿದ್ದಾರೆ.

“ವಿದ್ಯಾರ್ಥಿಗಳಿಗೆ ಅನುಕೂಲಕರವಾಗಿದ್ದ ಲ್ಯಾಪ್‌ಟಾಪ್, ಸೈಕಲ್ ವಿತರಣೆಯಂತಹ ಕಲ್ಯಾಣ ಯೋಜನೆಗಳಿಗೆ ಅನುದಾನ ಘೋಷಣೆ ಆಗಿಲ್ಲ. ಹಿಂದಿನ ಸರ್ಕಾರದ ಬಜೆಟ್‌ಗಿಂತ ಈ ಬಜೆಟ್‌ನಲ್ಲಿ ಶಿಕ್ಷಣಕ್ಕೆ ಶೇಕಡಾ ಒಂದರಷ್ಟು ಅನುದಾನ ಕಡಿತಗೊಳಿಸಿರುವುದರ ಬಗ್ಗೆ ಮುಂದಿನ ದಿನಗಳಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಬೇಕೆಂಬುದು ವಿದ್ಯಾರ್ಥಿ ಸಮುದಾಯದ ಬಹುದಿನಗಳ ಅಪೇಕ್ಷಿಯಾಗಿತ್ತು. ಹಿಂದುಳಿದ ಮತ್ತು ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವ ವಿದ್ಯಾರ್ಥಿಗಳ ಸೌಲಭ್ಯಗಳಿಗೂ ಅನುದಾನದ ಕೊರತೆಯಿದೆ. ವಿದ್ಯಾರ್ಥಿಗಳ ಅವಶ್ಯಕತೆಗಳನ್ನು ಪೂರೈಸಲು ಬಜೆಟ್ಟಿನ ಹೊರತಾಗಿಯೂ ಸರ್ಕಾರವು ಅನುದಾನ ನೀಡಬೇಕು” ಎಂದು ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...