ಚುನಾವಣೆ 2023 | ದಲಿತ ಸಂಘಟನೆಗಳ ಹಲವು ಮುಖಂಡರು ಕಾಂಗ್ರೆಸ್‌ಗೆ ಸೇರ್ಪಡೆ

Date:

  • ಖರ್ಗೆ ಕುಟುಂಬ ಹತ್ಯೆಗೆ ಸಂಚು; ಸೂಕ್ತ ತನಿಖೆ ನಡೆಸಿ ಕ್ರಮಕ್ಕೆ ಆಗ್ರಹ
  • ದೊಡ್ಡ ನಾಯಕರಿಗೆ ಹೀಗಾದರೆ ಹಳ್ಳಿಗಳಲ್ಲಿನ ದಲಿತರ ಪರಿಸ್ಥಿತಿ ಏನು?

ಕರ್ನಾಟಕ ಸಾಮರಸ್ಯ ಸಮಿತಿ ರಾಜ್ಯಾಧ್ಯಕ್ಷ ಕೃಷ್ಣಪ್ಪ, ಭೀಮ್ ಪ್ರಜಾಸಂಘದ ರಾಜ್ಯಾಧ್ಯಕ್ಷ ವೈಟ್ ಫೀಲ್ಡ್ ಮುರುಗೇಶ್, ಕರ್ನಾಟಕ ಸಮಗ್ರ ಸೈನಿಕ ದಳ ಮಹಿಳಾ ಅಧ್ಯಕ್ಷೆ ಕಮಲಮ್ಮ, ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಸೇರಿದಂತೆ ರಾಜ್ಯದ ಹಲವು ದಲಿತ ಸಂಘಟನೆಗಳ ಮುಖಂಡರು ಶನಿವಾರ ಕಾಂಗ್ರೆಸ್ ಸೇರ್ಪಡೆಯಾದರು.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷ ಧರ್ಮಸೇನಾ ಅವರು ದಲಿತ ಮುಖಂಡರನ್ನು ಕಾಂಗ್ರೆಸ್‌ ಸ್ವಾಗತಿಸಿದರು.

ಬಳಿಕ ಮಾತನಾಡಿದ ಧರ್ಮಸೇನಾ, “ಇಂದು ದಲಿತರೆಲ್ಲರೂ ಒಗ್ಗೂಡುವ ಪರಿಸ್ಥಿತಿ ನಿರ್ಮಾಣವಾಗಿದೆ. ದಲಿತರ ಏಳಿಗೆ, ಅಭಿವೃದ್ಧಿಗೆ ಕಂಟಕ, ಅಪಾಯ ಎದುರಾದ ಸಂದರ್ಭದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಎಐಸಿಸಿ ಅಧ್ಯಕ್ಷರನ್ನಾಗಿ ನೇಮಿಸಿ ದಲಿತರಿಗೆ ಚೈತನ್ಯ ತುಂಬಿದೆ. ಇನ್ನು ಪರಮೇಶ್ವರ್ ಅವರನ್ನು ಪ್ರಣಾಳಿಕೆ ರಚನಾ ಸಮಿತಿ ಅಧ್ಯಕ್ಷರನ್ನಾಗಿ ಮಾಡಿದೆ. ಆ ಮೂಲಕ ದಲಿತರಿಗೆ ಕಾಂಗ್ರೆಸ್‌ನಲ್ಲಿ ಉತ್ತಮ ಸ್ಥಾನಮಾನ ನೀಡಿ ಸಮುದಾಯಕ್ಕೆ ಶಕ್ತಿ ತುಂಬಲಾಗಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯದಲ್ಲಿ ಅಂಬೇಡ್ಕರ್ ಹೆಸರಿನಲ್ಲಿ ಸುಮಾರು 20 ಸಾವಿರ ಸಂಘಟನೆಗಳಿವೆ. ನಾನು ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷನಾಗಿ ನೇಮಕಗೊಂಡ ನಂತರ ದಲಿತರ ನಡೆ ಕಾಂಗ್ರೆಸ್ ಕಡೆ ಎಂಬ ಕಾರ್ಯಕ್ರಮದ ಮೂಲಕ ಸ್ಥಳೀಯ ಮಟ್ಟದಲ್ಲಿ ಒಬ್ಬರೇ ಆದರೂ ಅವರನ್ನು ನಿರ್ಲಕ್ಷಿಸದೇ ದಲಿತ ಸಮುದಾಯದವರನ್ನು ಕಾಂಗ್ರೆಸ್ ಪಕ್ಷಕ್ಕೆ ಕರೆ ತರಬೇಕು ಎಂದು ನಮ್ಮ ಘಟಕದ ಎಲ್ಲಾ ಪದಾಧಿಕಾರಿಗಳಿಗೆ ಸೂಚನೆ ನೀಡಿದೆ” ಎಂದು ಹೇಳಿದರು.

“ಕಳೆದ ಒಂದು ವರ್ಷದಿಂದ ಇದೇ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇನೆ. ದಲಿತರಿಗಾಗಿ ಕಾಂಗ್ರೆಸ್ ಈಗಾಗಲೇ 10 ವಿಶೇಷ ಕಾರ್ಯಕ್ರಮವನ್ನು ಪ್ರಕಟಿಸಿದೆ. ಇದರ ಹೊರತಾಗಿ ದಲಿತರ ಸಮಸ್ಯೆ ಏನೇ ಇದ್ದರೂ ಅದನ್ನು ಬಗೆಹರಿಸಲು ಕಾಂಗ್ರೆಸ್ ಪ್ರಾಮಾಣಿಕ ಪ್ರಯತ್ನ ಮಾಡಲಿದೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಸೇರುತ್ತಿರುವ ಎಲ್ಲರನ್ನು ಪಕ್ಷಕ್ಕೆ ತುಂಬುಹೃದಯದಿಂದ ಸ್ವಾಗತಿಸುತ್ತೇನೆ” ಎಂದರು.

ಈ ಸುದ್ದಿ ಓದಿದ್ದೀರಾ? ಬಿಜೆಪಿಯಿಂದ ಖರ್ಗೆ ಕುಟುಂಬ ಹತ್ಯೆಗೆ ಸಂಚು, ಮೋದಿ ಮೌನಕ್ಕೆ ಶರಣು : ಸುರ್ಜೇವಾಲ ಗಂಭೀರ ಆರೋಪ

ಖರ್ಗೆ ಹತ್ಯೆಗೆ ಸಂಚು : ಖಂಡನೀಯ

“ನಮ್ಮ ನೆಚ್ಚಿನ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರ ಹತ್ಯೆಗೆ ಸಂಚು ರೂಪಿಸಿರುವ ವಿಚಾರ ಬೆಳಕಿಗೆ ಬಂದಿದ್ದು, ಇನ್ನು ಡಾ. ಜಿ ಪರಮೇಶ್ವರ್ ಅವರ ತಲೆಗೆ ಕಲ್ಲೇಟು ಬಿದ್ದಿದೆ. ಈ ದಾಳಿ ಯಾರಿಂದ ಆಗಿದೆ ಎಂದು ಪತ್ತೆಹಚ್ಚಲು ಸರ್ಕಾರ ವಿಫಲವಾಗಿದೆ. ದೊಡ್ಡ ನಾಯಕರ ಪರಿಸ್ಥಿತಿ ಹೀಗಾದರೆ ಹಳ್ಳಿಗಳಲ್ಲಿರುವ ದಲಿತರ ಪರಿಸ್ಥಿತಿ ಏನು” ಎಂದು ಪ್ರಶ್ನಿಸಿದರು.

“ಖರ್ಗೆ ಅವರ ಹತ್ಯೆಗೆ ಸಂಚು ರೂಪಿಸಿರುವ ವಿಚಾರ ಖಂಡನೀಯ. ಈ ವಿಚಾರದಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಚುನಾವಣಾ ಆಯೋಗ ಈ ವಿಚಾರದಲ್ಲಿ ಸೂಕ್ತ ಕ್ರಮಕೈಗೊಂಡು ದಲಿತರ ರಕ್ಷಣೆ ಮಾಡಬೇಕು” ಎಂದು ಆಗ್ರಹಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...