ಮಂಡ್ಯ| ಆ.20ರಂದು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮ್ಯಾರಥಾನ್

Date:

ಕರ್ನಾಟಕ ಜನಶಕ್ತಿ, ಭೂಮಿ ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ, ಮಹಿಳಾ ಮುನ್ನಡೆ, ಮಂಡ್ಯ ಜಿಲ್ಲಾ ಶ್ರಮಿಕ ನಗರ ನಿವಾಸಿಗಳ ಒಕ್ಕೂಟ ಹಾಗೂ ಶ್ರಮಿಕ ಶಕ್ತಿ ವಿದ್ಯಾರ್ಥಿ ಸಂಘಟನೆಗಳ ಆಶ್ರಯದಲ್ಲಿ ಆಗಸ್ಟ್ 20 ರಂದು ಮಂಡ್ಯದಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಂಜಯ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಮ್ಯಾರಥಾನ್ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಜನಶಕ್ತಿ ಸಂಘಟನೆ ರಾಜ್ಯ ಕಾರ್ಯದರ್ಶಿ ಪೂರ್ಣಿಮಾ ತಿಳಿಸಿದರು.

ಮಂಡ್ಯ ಪತ್ರಕರ್ತರ ಸಂಘದಲ್ಲಿ ಮ್ಯಾರಾಥಾನ್ ಹೋರಾಟದ ಪೋಸ್ಟ‌ರ್ ಬಿಡುಗಡೆ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಗಸ್ಟ್ 20 ರಂದು ದೇವರಾಜು ಅರಸು ಅವರ ಜನ್ಮದಿನದ ಅಂಗವಾಗಿ ಎಲ್ಲರಿಗೂ ಹಕ್ಕು ಸಿಗಲಿ ಎನ್ನುವ ನಿಟ್ಟಿನಲ್ಲಿ ಮ್ಯಾರಥಾನ್ ಹಮ್ಮಿಕೊಳ್ಳಲಾಗಿದೆ. ನಿವೇಶನ ರಹಿತರು ಭಾಗವಹಿಸುವಂತೆ ಮನವಿ ಮಾಡಿದರು.

ಭದ್ರತೆ ಸಿಗಬೇಕು. ಶ್ರಮಿಕ ನಗರಗಳಲ್ಲಿ ಅತ್ಯಾಚಾರ, ಹಲ್ಲೆಗಳು ನಡೆಯದ ರೀತಿಯಲ್ಲಿ ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು. ಅಲ್ಲದೆ ಸ್ಲಂಗಳ ಯುವಕರು ಮಾದಕ ವ್ಯಸನಿಗಳಾಗುತ್ತಿದ್ದು ಇದನ್ನು ತಡೆಯುವ ನಿಟ್ಟಿನಲ್ಲಿಯೂ ಕ್ರಮ ವಹಿಸಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭೂಮಿ ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ರಾಜ್ಯ ಕಾರ್ಯದರ್ಶಿ ಎಂ ಸಿದ್ದರಾಜು ಮಾತನಾಡಿ, ಮಂಡ್ಯ ಜಿಲ್ಲೆಯಲ್ಲಿ 60 ಸ್ಲಂಗಳು ಇದ್ದು ಸಾವಿರಾರು ಕುಟುಂಬಗಳು ವಾಸವಿದೆ. ಹಾಗೆಯೇ ರಾಜ್ಯದಲ್ಲಿ 6,500 ಕೊಳಚೆ ಪ್ರದೇಶಗಳು ಇದ್ದು ಅಲ್ಲಿಯೂ ಕೂಡ ಲಕ್ಷಾಂತರ ಕುಟುಂಬಗಳು ವಾಸವಿದೆ. ಆದರೆ ಅವರಿಗೆ ಹಕ್ಕುಪತ್ರ, ವಸತಿ ಮತ್ತು ನಿವೇಶನವನ್ನು ನೀಡಿಲ್ಲ. ಹಾಗಾಗಿ ಈ ಬಗ್ಗೆ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದರು.

ಮದ್ದೂರು ಪಟ್ಟಣವನ್ನು ಸೇರಿದಂತೆ ಮಂಡ್ಯದ ಇತರೆಡೆ 60 ಶ್ರಮಿಕ ನಗರಗಳಲ್ಲಿ ನಿವೇಶನ, ವಸತಿ ಹಕ್ಕು ಕಲ್ಪಿಸಿಲ್ಲ. ಆದ ಕಾರಣ ನಿವೇಶನ ಮತ್ತು ವಸತಿ ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮ್ಯಾರಥಾನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಮದ್ದೂರು ತಾಲ್ಲೂಕು ಗುಡಿಗೆರೆ ಗ್ರಾಮದ ಯುವಕರು ಮ್ಯಾರಥಾನ್‌ನಲ್ಲಿ ಭಾಗವಹಿಸುವ ಮೂಲಕ ಮಂಡ್ಯದ ಶ್ರಮಿಕರ ಹೋರಾಟಕ್ಕೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ ಎಂದು ಮಾಹಿತಿ ನೀಡಿದರು.

ಈ ಸುದ್ದಿ ಓದಿದ್ದೀರಾ? ಕೋಲಾರ | ರಸ್ತೆಗಳ ಅಭಿವೃದ್ಧಿಗಾಗಿ 15 ಕೋಟಿ ಅನುದಾನ ಬಿಡುಗಡೆ : ಕೊತ್ತೂರು ಮಂಜುನಾಥ್

ಗೋಷ್ಠಿಯಲ್ಲಿ ಮಹಿಳಾ ಮುನ್ನಡೆ ಕಾರ್ಯದರ್ಶಿ ಶಿಲ್ಪ, ಜಿಲ್ಲಾ ಸಮಿಕ ನಗರ ನಿವಾಸಿಗಳ ಒಕ್ಕೂಟದ ಅಧ್ಯಕ್ಷ ಪ್ರಕಾಶ್‌, ವಿದ್ಯಾರ್ಥಿ ಸಂಘಟನೆಯ ಅಂಜಲಿ, ಮುಖಂಡರಾದ ನಿಂಗಮ್ಮ, ಲತಾ, ಗಾಯಿತ್ರಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...