‘ಸ್ವಚ್ಛ ಮೈಸೂರು’ ಜಾಗೃತಿಗಾಗಿ ಬೃಹತ್ ಸೈಕಲ್ ಜಾಥಾ

Date:

ಸ್ವಚ್ಛ ಮೈಸೂರು ಜಾಗೃತಿಗಾಗಿ ನಡೆದ ಬೃಹತ್ ಸೈಕಲ್ ಜಾಥಾ ಯಶಸ್ವಿಯಾಗಿ ನಡೆಯಿತು. ‘ನಾಳಿನ ಉತ್ತಮ ಪರಿಸರಕ್ಕಾಗಿ, ಇಂದೇ ಏರೋಣ ಸೈಕಲ್ ಸವಾರಿ’ ಎಂಬ ಘೋಷವಾಕ್ಯದೊಂದಿಗೆ ನಡೆದ ಅಭಿಯಾನದಲ್ಲಿ 350ಕ್ಕೂ ಹೆಚ್ಚು ನಾಗರಿಕರು ಹಾಗೂ ಕ್ರೀಡಾಪಟುಗಳು ಪಾಲ್ಗೊಂಡಿದ್ದರು.

ಶನಿವಾರ ಬೆಳಗ್ಗೆ 6-30ಕ್ಕೆ ಮೈಸೂರಿನ ಶ್ರೀ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಸೈಕಲ್ ಜಾಥಾಕ್ಕೆ ಚಾಲನೆ ನೀಡಲಾಯಿತು. ಅಲ್ಲಿಂದ ಆರಂಭವಾದ ಜಾಥಾವು ಕೆ.ಆರ್ ವೃತ್ತ, ದೇವರಾಜು ಅರಸ್ ರಸ್ತೆ, ಬಾಬು ಜಗಜೀವನ್ ರಾಮ್ ವೃತ್ತ, ಆಯುರ್ವೇದಿಕ್ ವೃತ್ತ, ಹೈವೇ ಸರ್ಕಲ್, ಎಲ್.ಐ.ಸಿ ವೃತ್ತ ಮತ್ತು ಜೆ.ಎಸ್.ಎಸ್ ಮೆಡಿಕಲ್ ಕಾಲೇಜು ಮಾರ್ಗವಾಗಿ ಸಾಗಿ, ಸಯ್ಯಾಜಿ ರಾವ್ ರಸ್ತೆ ಮೂಲಕ ಅಂತಿಮವಾಗಿ ಪುನಃ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಸಮಾರೋಪಗೊಂಡಿತು.

ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾದ ಶೇಖ್ ತನ್ವೀರ್ ಆಸೀಫ್ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ, ಪಾಲಿಕೆಯ ಉಪ ಆಯುಕ್ತರಾದ ಮಂಜು ಸಿ.ಎಸ್ (ಅಭಿವೃದ್ಧಿ), ಸೋಮಶೇಖರ್ ಕೆ.ಜಿ.ಎಸ್. (ಕಂದಾಯ), ಕಾರ್ಯಪಾಲಕ ಎಂಜಿನಿಯರ್ ದೀಪಕ್, ಹಾಗೂ ಪಾಲಿಕೆಯ ಆರೋಗ್ಯಾಧಿಕಾರಿಗಳಾದ ಮೃತ್ಯುಂಜಯ ಕೆ.ಎಸ್ ಭಾಗವಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೈಕಲ್ ಜಾಥಾದಲ್ಲಿ ರಾಯಲ್ ರೈಡರ್ಸ್ ಮೈಸೂರು, ಸೈಕ್ಲೋಪೀಡಿಯಾ, ಮೈಸೂರು ಜಿಲ್ಲಾ ಅಮೆಚೂರ್ ಸೈಕ್ಲಿಂಗ್ ಅಸೋಸಿಯೇಷನ್, ಮೈಸೂರು ಅಥ್ಲೆಟ್ಸ್ ಕ್ಲಬ್, ಮೈಸೂರು ಸೈಕ್ಲಿಂಗ್ ತಂಡದ ಸದಸ್ಯರು, ಪ್ಯಾರಾಮೌಂಟ್, ಮೈ ಬೈಕ್, ಅರ್ನಾಲ್ಡ್ ಫಿಟ್ನೆಸ್ ಮತ್ತು ಕಾಂಗರೂ ಕೇರ್ ಸಂಸ್ಥೆಗಳ ಪ್ರತಿನಿಧಿಗಳು ಬೃಹತ್ ಜಾಥಾಕ್ಕೆ ಸಾಥ್ ನೀಡಿದರು. ನಗರದ ಸ್ವಚ್ಛತೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಹಮ್ಮಿಕೊಂಡಿದ್ದ ಈ ಸೈಕಲ್ ಜಾಥಾವು ಪರಿಸರ ಸಂರಕ್ಷಣೆಯ ಮಹತ್ವವನ್ನು ಸಾರುವಲ್ಲಿ ಯಶಸ್ವಿಯಾಯಿತು.

ಈ ಸುದ್ದಿ ಓದಿದ್ದೀರಾ? ಮೈಸೂರು | ಎಐ ತಂತ್ರಜ್ಞಾನ ಆಧಾರಿತ ‘ವೈಟಲ್ ವೀವ್ಸ್’ ಬಿಡುಗಡೆ

ಮೈಸೂರು ಮಹಾನಗರ ಪಾಲಿಕೆಯ ಆಯುಕ್ತ ಶೇಖ್ ತನ್ವೀರ್ ಆಸೀಫ್, ಪಾಲಿಕೆಯ ಉಪ ಆಯುಕ್ತ ಮಂಜು ಸಿ.ಎಸ್ (ಅಭಿವೃದ್ಧಿ), ಸೋಮಶೇಖರ್ ಕೆ.ಜಿ.ಎಸ್ (ಕಂದಾಯ), ಕಾರ್ಯಪಾಲಕ ಎಂಜಿನಿಯರ್ ದೀಪಕ್, ಪಾಲಿಕೆ ಆರೋಗ್ಯಾಧಿಕಾರಿ ಮೃತ್ಯುಂಜಯ ಕೆ.ಎಸ್, ವಲಯ ಆಯುಕ್ತ ಪ್ರತಿಭಾ, ರಮೇಶ್, ಮಂಜುನಾಥ್ ರೆಡ್ಡಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಭಾಸ್ಕರ್ ನಾಯಕ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಚೇತನ, ಮಧುಕರ್ ಸೇರಿದಂತೆ ಪಾಲಿಕೆಯ ಪರಿಸರ ಎಂಜಿನಿಯರ್ಗಳು ಹಾಗೂ ಆರೋಗ್ಯ ನಿರೀಕ್ಷಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...