ಕಲಬುರಗಿ | ಭಾರತೀಯ ಸಂಸ್ಕೃತಿ ಉತ್ಸವ ವಿರೋಧಿಸಿ ದಲಿತ ಸಂಘಟನೆಗಳ ಬೃಹತ್‌ ಪ್ರತಿಭಟನೆ

Date:

ಕಲಬುರಗಿ ಜಿಲ್ಲೆಯ ಸೇಡಂನಲ್ಲಿ ನಡೆಯಲಿರುವ ‘ಭಾರತೀಯ ಸಂಸ್ಕೃತಿ ಉತ್ಸವ ‘ವಿರೋಧಿಸಿ ʼಕಲ್ಯಾಣ ಕರ್ನಾಟಕದಲ್ಲಿ ನಾಗಪೂರದ ನಾಝಿ ವಿಷ ಸರ್ಪಗಳು ಬರುತ್ತಿವೆ ಎಚ್ಚರ’ ಎಂಬ ಘೋಷಣೆದೊಂದಿಗೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ) ಮತ್ತು ಯಾದಗಿರಿ ಜಿಲ್ಲಾ ಸಮಿತಿಯಿಂದ ಸೋಮವಾರ ಕಲಬುರಗಿಯಲ್ಲಿ ಬೃಹತ್‌ ಪ್ರತಿಭಟನಾ ಮೆರವಣಿಗೆ ನಡೆಯಿತು.

ನಗರದ ಸರ್ದಾರ್ ವಲ್ಲಭಬಾಯಿ ಪಟೇಲ್ ವೃತ್ತದಿಂದ ಜಗತ್ ವೃತ್ತವರೆಗೆ ʼಕೋಮುವಾದದ ಭೂತ ದಹನʼ ಹಾಗೂ ನಾಗಪುರ ನಾಝಿ ವಿಷ ಸರ್ಪಗಳ ಅಣಕು ಶವಯಾತ್ರೆ ನಡೆಸಿ ಜಗತ್‌ ವೃತ್ತದಲ್ಲಿ ದಹನ ಮಾಡಲಾಯಿತು.

ದಸಂಸ ಮುಖಂಡ ಅರ್ಜುನ್ ಭದ್ರೆ ಮಾತನಾಡಿ, ʼ12ನೇಯ ಶತಮಾನದಲ್ಲಿ ಸಾಮಾಜಿಕ ಸಮಾನತೆಗಾಗಿ ಕ್ರಾಂತಿಗೈದ ಶರಣರ ಕರ್ಮಭೂಮಿ ಕಲ್ಯಾಣ ಕರ್ನಾಟಕ. ಸೂಫಿ, ಶರಣರ, ಸಂತರ ನೆಲ. ಹಿಂಸೆಯನ್ನು ಅಹಿಂಸೆಯ ಮೂಲಕ ಗೆದ್ದ ಸಾಮ್ರಾಟ್ ಅಶೋಕ ನಡೆದಾಡಿದ‌ ಈ ನೆಲದಲ್ಲಿ ನಾಗಪುರದ ನಾಝಿ ವಿಷ ಸರ್ಪಗಳು ವಿಷವನ್ನು ಹರಿಬಿಡಲು ಬರುತ್ತಿವೆ. ಅವುಗಳಿಂದ ನಾವು ಎಚ್ಚರ ವಹಿಸಬೇಕಾಗಿದೆʼ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 01 28 at 12.41.38 PM

ʼಜ.29ರಿಂದ ಫೆ.9ರವರೆಗೆ ಸೇಡಂನಲ್ಲಿ ಆಯೋಜಿಸಿರುವ ‘ಭಾರತೀಯ ಸಂಸ್ಕೃತಿ ಉತ್ಸವ’ ಕಾರ್ಯಕ್ರಮ ಸಂಘ ಪರಿವಾರದ ಕಾರ್ಯಕ್ರಮ. ಈ ಕಾರ್ಯಕ್ರಮದ ಎಲ್ಲ ವಿಚಾರ ಗೋಷ್ಠಿಗಳು ಭಾರತೀಯ ಸಂಸ್ಕೃತಿ ಹೆಸರಿನಲ್ಲಿ, ಸನಾತನವಾದ, ವೈದಿಕ ಪರಂಪರೆಯ ವರ್ಣವ್ಯವಸ್ಥೆ ಕಾಪಾಡುವ ಮತ್ತು ಅದನ್ನು ಉಳಿಸಿಕೊಳ್ಳುವ ಹುನ್ನಾರಗಳು ಅಡಗಿವೆ. ತಮ್ಮದು ಸಾಂಸ್ಕೃತಿಕ ಸಂಘಟನೆ, ದೇಶಭಕ್ತರ ಕೂಟ ಎಂದೆಲ್ಲ ಹೇಳಿಕೊಳ್ಳುವ ಆರ್‌ಎಸ್‌ಎಸ್, ಅದರ ವಿವಿಧ ಅಂಗಗಳು ದೇಶದಲ್ಲಿ ಆಶಾಂತಿ ಮೂಡಿಸುತ್ತಾ ಬಂದಿವೆ. ಅದನ್ನು ಮುಂದುವರೆಸುವ ಭಾಗವೇ ಈ ಕಾರ್ಯಕ್ರಮʼ ಎಂದು ಆರೋಪಿಸಿದ್ದಾರೆ.

ʼಆರ್‌ಎಸ್‌ಎಸ್ ತನ್ನ ವಿಭಜನೆ ಮತ್ತು ಹಿಂಸಾತ್ಮಕ ಕಾರ್ಯಾಚರಣೆಗಳಿಂದ ದಲಿತ, ಅಲ್ಪಸಂಖ್ಯಾತರ, ಹಿಂದುಳಿದ, ಮಹಿಳೆಯರ ಮತ್ತು ಕಾರ್ಮಿಕ ವರ್ಗಗಳಲ್ಲಿ ಆತಂಕ ಮೂಡಿಸುವ ವಾತಾವರಣ ಸೃಷ್ಟಿಸುತ್ತಾ ಬಂದಿದೆ. ಆರ್‌ಎಸ್‌ಎಸ್ ಸ್ಥಾಪನೆಯ ಉದ್ದೇಶವೇ ಬ್ರಾಹ್ಮಣತ್ವದ ರಕ್ಷಣೆ ಎಂಬ ಸತ್ಯವನ್ನು ಎಲ್ಲರೂ ಒಪ್ಪಿಕೊಳ್ಳುತ್ತಾರೆ. ಕಳೆದು ಹೋದ ಪೇಶ್ವೆ ಸರ್ಕಾರವನ್ನು ಮತ್ತೆ ರೂಪಿಸಿ ಚಿತ್ವಾನ್ ಅಧಿಪತ್ಯವನ್ನು ಪುನ‌ರ್ ಸ್ಥಾಪಿಸುವ ಉದ್ದೇಶದಿಂದ ಆರ್‌ಎಸ್‌ಎಸ್ ಪ್ರಾರಂಭಗೊಂಡಿದೆ. ಬುದ್ಧ, ಬಸವ ಹಾಗೂ ಅಂಬೇಡ್ಕರ್‌ ಅವರ ಆಶಯಗಳ ವಿರುದ್ಧ ತಮ್ಮ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆʼ ಎಂದು ಕಿಡಿಕಾರಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಕೋಗಿಲೆ ಕಂಠದ ಪ್ರಕೃತಿಗೆ ಬೇಕಿದೆ ಪ್ರೋತ್ಸಾಹ

ಪ್ರತಿಭಟನೆಯಲ್ಲಿ ಕದಸಂಸ ರಾಜ್ಯ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ, ರಾಜ್ಯ ಸಂಘಟನಾ ಸಂಚಾಲಕ ಮರೆಪ್ಪ ಹಳ್ಳಿ ಸೇರಿದಂತೆ ಪ್ರಮುಖರಾದ ಕೆ.ನೀಲಾ, ಮೀನಾಕ್ಷಿ ಬಾಳಿ, ಆರ್.ಕೆ.ಹುಡಗಿ, ಅಶ್ವಿನಿ ಮದನಕರ್, ಮಹಾಂತೇಶ ಬಡದಾಳ, ಮಲ್ಲಿಕಾರ್ಜುನ ಖನ್ನಾ, ಸೂರ್ಯಕಾಂತ ಅಜಾದಪೂರ, ರಾಜಕುಮಾರ ನಿಂಬಾಳ, ಶಿವಕುಮಾರ ಕೋರಳ್ಳಿ, ಪ್ರೀತಮ್ ನಾಕಮನ, ಮಹೇಶ ಕೋಕಿಲೆ, ಸುಭಾಷ ಕಲ್ಮರಿ ಚಿತ್ತಾಪೂರ, ಮಹೇಶ ಸುಲೇಕರ, ಮರೆಪ್ಪ ಮಾತಾಳ, ಸಾಯಬಣ್ಣ ಕೋಟನೂರ, ದೊಡ್ಡೇಶ ಹಾಲು, ಪರಶುರಾಮ ರಾಜಾಪೂರ, ರಾಮಣ್ಣ ಪಾಸ್ವಾನ್, ರಾಜಶೇಖರ ಹೊಸಮನಿ, ಮಲ್ಲಿಕಾರ್ಜುನ ಹಾಸನಾಳ, ಮಲ್ಲಿಕಾರ್ಜುನ ಕುರಕುಂದಿ, ಮಲ್ಲಿಕಾರ್ಜುನ ಶಾಖಾನೂರ, ಅಜೀಜಸಾಬ್ ಐಕೂರ, ಶೇಖರ ಜೀವಣಗಿ, ಬಸವರಾಜ ಶೆಳ್ಳಗಿ, ಭೀಮಣ್ಣಾ ಖ್ಯಾತನಾಳ, ಹಯ್ಯಾಳಪ್ಪ ಗಂಗನಾಳ, ನಿಂಗಪ್ಪ ಯಾದಗಿರ, ಮರಲಿಂಗಪ್ಪ ನಾಟಿಕರ ಹುಣಸಗಿ, ಬಸವರಾಜ ಗೋನಳ, ಆಂಜನೇಯ ಎಲೇರಿ, ದೀಲಿಪ್ ಕಾಯಂಕರ್, ದಿಲ್ಸಾದ್, ಮೈಲಾರಿ ದೊಡ್ಡಮನಿ, ಶಿವಶಂಕರ್ ಹೊಸಮನಿ ಸುರಪುರ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಕಾರ್ಯಕರ್ತರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...