ರಾಯಚೂರು | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆ.26ರಂದು ರೈತರ ಪ್ರತಿಭಟನೆ

Date:

  • ರಾಜ್ಯದಲ್ಲಿ 124 ತಾಲೂಕಗಳು ಬರದ ಪರಸ್ಥಿತಿ ಎದುರಿಸಿತ್ತಿದ್ದರೂ ರಾಜ್ಯ ಸರ್ಕಾರ ಬರ ಘೋಷಿಸುತ್ತಿಲ್ಲ.
  • ಜಲಸಂಪನ್ಮೂಲ ಸಚಿವರು ರೈತರ ಸಮಸ್ಯೆಗಳನ್ನು ಆಲಿಸುತ್ತಿಲ್ಲ ಎಂದು ರೈತರ ಆಕ್ರೋಶ

ನಾರಾಯಣಪುರ ಬಲದಂಡೆ ಸೇರಿದಂತೆ ಕೃಷ್ಣ ಅಚ್ಚುಕಟ್ಟು ವ್ಯಾಪ್ತಿಯ ಕಾಲುವೆಗಳಿಗೆ ನೀರಾವರಿ ಸಲಹಾ ಸಮಿತಿ ಕೈಗೊಂಡ ಚಾಲು ಬಂದ್ ವಾರಾಬಂಧಿ ಅವೈಜ್ಞಾನಿಕವಾಗಿದ್ದು, ಪುನರ್ ಪರಿಶೀಲನೆ ಮಾಡದೇ ಇದ್ದರೆ ಆ.26 ರಂದು ದೇವದುರ್ಗದಲ್ಲಿ ರೈತ ಸಂಘದಿಂದ ಬೃಹತ್ ಪ್ರತಿಭಟನೆ ನಡೆಸುವುದಾಗಿ ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸ ಮಾಲಿಪಾಟೀಲ್ ಹೇಳಿದರು.

ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, “ಕೃಷ್ಣ ಅಚ್ಚುಕಟ್ಟು ಪ್ರಾಧಿಕಾರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ರೈತರ ಅಭಿಪ್ರಾಯಗಳನ್ನು ಆಲಿಸದೇ ಏಕಪಕ್ಷೀಯವಾಗಿ ನೀರು ಹರಿಸಲು ನಿರ್ಧರಿಸಲಾಗಿದೆ. ಜಲಾಶಯದಲ್ಲಿ ಒಂದು ಬೆಳೆಗೆ ಬೇಕಾಗುವಷ್ಟು ನೀರಿನ ಸಂಗ್ರಹವಿದ್ದರೂ ವಾರಾಬಂಧಿ ನಿಗದಿಪಡಿಸಲಾಗಿದೆ. ಅಚ್ಚುಕಟ್ಟು ವ್ಯಾಪ್ತಿಯಲ್ಲಿ ಭತ್ತ, ಮೆಣಸಿನಕಾಯಿ ಸಸಿ ನೆಡುವ ಪ್ರಕ್ರಿಯೆ ನಡೆಯುತ್ತಿದೆ. ಹತ್ತು ದಿನ ನೀರು ಹರಿಸುವದನ್ನು ಸ್ಥಗಿತಗೊಳಿಸಿದರೆ ಬೆಳೆ ಬೆಳೆಯಲು ಸಾಧ್ಯವಾಗುವುದಿಲ್ಲ. ಬಂದ್ ಮಾಡಿ ನೀರು ಪುನಃ ಹರಿಸಿದರೆ ಕೊನೆ ಭಾಗದ ರೈತರಿಗೆ ನೀರು ತಲುಪದೆ ಬೆಳೆ ಒಣಗಿ ಹೋಗುವ ಆತಂಕ ಎದುರಾಗಿದೆ” ಎಂದು ಹೇಳಿದರು.

“14 ದಿನ ನೀರು ಕೊಟ್ಟು 10 ದಿನ ಸ್ಥಗಿತಗೊಳಿಸುವ ನಿರ್ಧಾರದಿಂದ ಬೆಳೆ ಮೇಲೆ ವ್ಯತಿರಿಕ್ತ ಪರಿಣಾಮವಾಗುತ್ತಿದ್ದು, ಕೂಡಲೇ ಪುನರ್ ಪರಿಶೀಲಿಸಬೇಕು. ನೀರಾವರಿ ಸಲಹಾ ಸಮಿತಿಯಲ್ಲಿ ಸಚಿವ ಆರ್.ಬಿ.ತಿಮ್ಮಾಪುರು ರೈತರ ಸಮಸ್ಯೆಗಳನು ತಿಳಿಯಲು ಮುಂದಾಗಿಲ್ಲ. ದೇವದುರ್ಗ ಶಾಸಕಿ ಕರೆಮ್ಮ ಅವರ ಗಮನಕ್ಕೆ ತಂದರೂ ಸ್ಪಂದಿಸಿಲ್ಲ. ಕೂಡಲೇ ನೀರಾವರಿ ಸಲಹಾ ಸಮಿತಿ ಸಭೆ ನಿರ್ಣಯವನ್ನು ಪುನರ್ ಪರಿಶೀಲಿಸಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜಲಸಂಪನ್ಮೂಲ ಸಚಿವರು ರೈತರ ಸಮಸ್ಯೆಗಳನ್ನು ಆಲಿಸಲು ಸಿದ್ದವಿಲ್ಲ. ಎಲ್ಲಾ ನೀರಾವರಿ ಯೋಜನೆಗಳ ಕುರಿತು ಚರ್ಚಿಸಲು ಸಭೆ ಕರೆಯುವಂತೆ ಅವರ ಕಚೇರಿಗೆ ಪತ್ರ ನೀಡಲಾಗಿದೆ. ಆದರೆ ಪತ್ರವೇ ಕಚೇರಿಯಲ್ಲಿ ಇಲ್ಲವಂತೆ. ಅವರು ಲೋಕಸಭಾ ಚುನಾವಣಾ ಗುಂಗಿನಲ್ಲಿದ್ದಾರೆ. ಕೂಡಲೇ ಅವರನ್ನು ಜಲಸಂಪನ್ಮೂಲ ಸಚಿವ ಸ್ಥಾನದಿಂದ ಮುಕ್ತಗೊಳಿಸಬೇಕು. ಈ ಕುರಿತು ಸಿಎಂ ಗಮನಕ್ಕೆ ತರಲಾಗುವುದು” ಎಂದು ಹೇಳಿದರು.

“ರಾಜ್ಯದಲ್ಲಿ 124 ತಾಲೂಕಗಳು ಬರದ ಪರಸ್ಥಿತಿ ಎದುರಿಸುತ್ತಿವೆ. ಆದರೆ ರಾಜ್ಯ ಸರ್ಕಾರ ಬರ ಘೋಷಣೆ ಮಾಡುತ್ತಿಲ್ಲ. ಕೇಂದ್ರ ಸರ್ಕಾರ ಬರ ಘೋಷಣೆ ರೂಪಿಸಿರುವ ಮಾನದಂಡಗಳು ಬದಲಾಗಬೇಕಿದೆ. ಪ್ರದೇಶದಿಂದ ಪ್ರದೇಶಕ್ಕೆ ಬೆಳೆ ಪರಸ್ಥಿತಿ ಬದಲಾಗುತ್ತದೆ. ಆದರೆ ಶೇ.60% ಬೆಳೆ ಹಾನಿಯಾದರೆ ಪರಿಹಾರ ನೀಡುವುದಾಗಿ ಸರ್ಕಾರ ಹೇಳುತ್ತಿರುವುದು ಅವೈಜ್ಞಾನಿಕ ಕ್ರಮವಾಗಿದೆ” ಎಂದರು.

“ರಾಷ್ಟಿಯ ಫಸಲ್ ಭೀಮ್ ಯೋಜನೆಯಡಿ ನಡೆದಿರುವ ಅಕ್ರಮದ ತನಿಖೆಗೆ ಜೆಡಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಜಂಟಿ ನಿರ್ದೇಶಕರ ಲೋಪವೇ ಕಾರಣವಾಗಿದ್ದು, ಅವರ ಸಹದ್ಯೋಗಿಯೊಬ್ಬರಿಂದ ತನಿಖೆ ನಡೆಸಲು ಸಾಧ್ಯವಿಲ್ಲ. ತುಂಗಭದ್ರ ಎಡದಂಡೆ ಕಾಲುವೆಯಲ್ಲಿ ನೀರಿನ ಕಳ್ಳತನ ಕಡಿವಾಣ ಹಾಕುತ್ತಿಲ್ಲ. ಶೀಘ್ರದಲ್ಲಿ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ರೈತ ಸಭೆ ನಿಗದಿಯಾಗಿದೆ” ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಪ್ರಭಾಕರಪಾಟೀಲ್ ಇಂಗಳದಾಳ, ಮಲ್ಲಣ್ಣ ದಿನ್ನಿ, ದೇವರಾಜ ನಾಯಕ, ಚೆನ್ನನಗೌಡ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...