ಮೇ 10 ಬರೀ ಮತದಾನ ದಿನವಲ್ಲ; ಭ್ರಷ್ಟಾಚಾರ ನಿರ್ಮೂಲನಾ ದಿನ: ಡಿ ಕೆ ಶಿವಕುಮಾರ್‌

Date:

  • ʼ40 ಪರ್ಸೆಂಟ್‌ ಕಮಿಷನ್‌ ಅಂತ್ಯ ಹಾಡುವ ದಿನ ದೂರವಿಲ್ಲʼ
  • ʼಬರಲಿದೆ ಕಾಂಗ್ರೆಸ್‌, ತರಲಿದೆ ಪ್ರಗತಿʼ : ಡಿ ಕೆ ಶಿವಕುಮಾರ್

ʼಬರಲಿದೆ ಕಾಂಗ್ರೆಸ್‌, ತರಲಿದೆ ಪ್ರಗತಿʼ ಇದು ಕಾಂಗ್ರೆಸ್‌ ಪಕ್ಷದ ಮೂಲ ಮಂತ್ರ. ರಾಜ್ಯಕ್ಕೆ ಮೇ ತಿಂಗಳಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ಈ ಭ್ರಷ್ಟ ಸರ್ಕಾರ ಹೋಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ತಿಳಿಸಿದರು.

ರಾಜ್ಯ ವಿಧಾನಸಭಾ ಚುನಾವನೆಗೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.

“ಮೇ 10ಕ್ಕೆ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಬಹಳ ಹಿಂದೆಯೇ ನೀತಿ ಸಂಹಿತೆ ಜಾರಿಗೆ ಬರಬೇಕಿತ್ತು. ಆದರೆ, ಈ ಕೇಂದ್ರ ಮತ್ತು ರಾಜ್ಯ ಸರ್ಕಾರ ಎಷ್ಟು ಸಾಧ್ಯವೋ ಅಷ್ಟು ಅಧಿಕಾರ ದುರುಪಯೋಗ ಮಾಡಿಕೊಂಡಿವೆ. ಈಗಲಾದರೂ ನೀತಿ ಸಂಹಿತೆ ಜಾರಿಗೆ ಬಂತಲ್ಲಾ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮೇ 10 ಬರೀ ಮತದಾನದ ದಿನವಲ್ಲ. ರಾಜ್ಯದ ಭ್ರಷ್ಟಾಚಾರವನ್ನು ತೊಡೆದು ಹಾಕುವ ದಿನ, 40 ಪರ್ಸೆಂಟ್‌ ಕಮಿಷನ್‌ ಅಂತ್ಯ ಹಾಡುವ ದಿನ,  ಹೊಸ ನಾಡನ್ನು ಕಟ್ಟವ ದಿನ, ನವ ಕರ್ನಾಟಕಕ್ಕೆ ಒಂದು ಹೊಸ ದಿಕ್ಕನ್ನು ತೋರುವ ದಿನ. ಇಡೀ ದೇಶದ ಜನ ಕರ್ನಾಟಕ ಜನತೆ ಏನು ತೀರ್ಮಾನ ಕೊಡಲಿದ್ದಾರೆ ಎಂದು ಕಾತುರದಿಂದ ಕಾಯುತ್ತಿದ್ದಾರೆ. ಈ ಡಬಲ್‌ ಎಂಜಿನ್‌ ಸರ್ಕಾರ ಹೇಗೆ ವಿಫಲವಾಗಿದೆ ಎಂಬುದು ಅಂದು ತಿಳಿಯಲಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಕಾಂಗ್ರೆಸ್ ಕಟ್ಟಿಹಾಕಲು ಚುನಾವಣಾ ಕಾರ್ಯಕ್ಕೆ ಐಟಿ ಅಧಿಕಾರಿಗಳ ನೇಮಕ: ಸಿದ್ದರಾಮಯ್ಯ ಆರೋಪ

“ಒಂದೇ ಹಂತದ ಚುನಾವಣೆಯನ್ನು ನಾವು ಸ್ವಾಗತ ಮಾಡುತ್ತೇವೆ. ಚುನಾವಣೆ ಆಯೋಗ ಒಂದಿಷ್ಟು ಹೊಸ ತಿದ್ದುಪಡಿ ತಂದಿದೆ. ಆ ಬಗ್ಗೆ ನಂತರದ ದಿನಗಳಲ್ಲಿ ಮಾತನಾಡುವೆ. ಆಡಳಿತ ಪಕ್ಷಕ್ಕೆ ಯಾರು ತಲೆ ಬಾಗುವುದಿಲ್ಲ ಎಂಬ ಅಚಲ ನಂಬಿಕೆ ನನಗಿದೆ. ರಾಜ್ಯದ ಜನತೆ ಬಿಜೆಪಿಯ ಆಡಳಿತಕ್ಕೆ ಕೊನೆ ಹಾಡಲಿದ್ದಾರೆ” ಎಂದರು.

“ನಾವೇ ಅಧಿಕಾರಕ್ಕೆ ಬರಲಿದ್ದೇವೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರಲ್ಲ ಎಂದು ಪತ್ರಕರ್ತರು ಪ್ರಶ್ನಿಸಿದಾಗ, “ಅವರಿಗೆ ಗೆಲ್ಲುವ ಭರವಸೆ ಇದ್ದಿದ್ದರೆ ಮೋದಿ ಮತ್ತು ಅಮಿತ್‌ ಶಾ ಯಾಕೆ ವಾರಕ್ಕೊಮ್ಮೆ ಬರುತ್ತಿದ್ದರು? ಸೋಲುವ ಹತಾಶೆ ಬಿಜೆಪಿಯವರ ಮುಖದಲ್ಲೇ ಎದ್ದು ಕಾಣುತ್ತಿದೆ” ಎಂದು ಕುಟುಕಿದರು.

“ಗುಜರಾತ್‌ ನಲ್ಲಿ ಬಳಸಿದ ಇವಿಎಂ ಮತ್ತು ವಿವಿ ಪ್ಯಾಟ್ ಗಳನ್ನು ರಾಜ್ಯಕ್ಕೆ ತರಬೇಡಿ ಎಂದು ನಾವು ಚುನಾವಣೆ ಆಯೋಗಕ್ಕೆ ಮನವಿ ಸಲ್ಲಿಸಿದ್ದೆವು. ಕಾರಣ ಅವುಗಳಿಗೆ ಪೋಗ್ರಾಮಿಂಗ್‌ ಮಾಡಿದ್ದಾರೆ ಎನ್ನುವ ಆತಂಕ ಇದೆ. ಹೊಸ ಇವಿಎಂ ಮತ್ತು ವಿವಿ ಪ್ಯಾಟ್ ಗಳನ್ನು ತಂದಿರುವುದಾಗಿ ಚುನಾವಣೆ ಆಯೋಗ ಹೇಳಿದೆ. ಹಾಗೆಯೇ 50 ಜನರಿಂದ ಅವುಗಳನ್ನು ಟ್ರಯಲ್‌ ಮಾಡುತ್ತಾರೆ ಎಂದು ನಮಗೆ ತಿಳಿಸಿದೆ. ನಾವು ಟ್ರಯಲ್‌ ಮಾಡಿ, ಆ ಬಗ್ಗೆ ನಂತರ ಮಾತನಾಡುತ್ತೇನೆ” ಎಂದು ಹೇಳಿದರು.‌

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...