ಮೇಕೆದಾಟು | ಸಹಕಾರ ಕೋರಿ ತಮಿಳುನಾಡು ಸರ್ಕಾರಕ್ಕೆ ಮನವಿ ಮಾಡುವೆ: ಡಿಕೆ ಶಿವಕುಮಾರ್

Date:

  • ಮೇಕೆದಾಟು ಯೋಜನೆ ಎರಡು ರಾಜ್ಯಗಳ ರೈತರ ಹಿತ ಕಾಯಲಿದೆ
  • ಎಲ್ಲ ಸಮಸ್ಯೆಗಳಿಗೆ ಮೇಕೆದಾಟು ಯೋಜನೆಯೇ ಪರಿಹಾರ: ಡಿಕೆಶಿ

ಮೇಕೆದಾಟು ಯೋಜನೆ ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ರೈತರ ಹಿತ ಕಾಯಲಿದೆ. ಹೀಗಾಗಿ ನಾನು ತಮಿಳುನಾಡು ಸರ್ಕಾರ ಹಾಗೂ ನಾಯಕರಿಗೆ ಈ ವಿಚಾರದಲ್ಲಿ ಹೃದಯವೈಶಾಲ್ಯತೆ ಪ್ರದರ್ಶಿಸಿ, ಸಹಕಾರ ನೀಡುವಂತೆ ಮನವಿ ಮಾಡುತ್ತೇನೆ ಎಂದು ಡಿಕೆ ಶಿವಕುಮಾರ್‌ ತಿಳಿಸಿದರು.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, “ಎಲ್ಲ ಸಮಸ್ಯೆಗಳಿಗೆ ಮೇಕೆದಾಟು ಯೋಜನೆಯೇ ಪರಿಹಾರ. ಈ ಯೋಜನೆಯಿಂದ ನಮಗಿಂತ ಹೆಚ್ಚು ತಮಿಳುನಾಡಿಗೆ ಅನುಕೂಲವಾಗಲಿದೆ. ಕರ್ನಾಟಕ ಬಳಸಿಕೊಳ್ಳಲಾಗದ ನೀರು ತಮಿಳುನಾಡಿಗೆ ಸೇರಲಿದೆ. ಈ ನೀರನ್ನು ಸಂಕಷ್ಟದ ಸಮಯದಲ್ಲಿ ಬಳಸಿಕೊಳ್ಳಲು ಈ ಯೋಜನೆ ಅಗತ್ಯವಿದೆ” ಎಂದರು.

“ಕಾವೇರಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿ ವಾಸ್ತವಾಂಶ ನ್ಯಾಯಾಲಯದ ಮುಂದಿಟ್ಟಿದ್ದೇವೆ. ಕಾವೇರಿ ವಿಚಾರವಾಗಿ ಈಗಾಗಲೇ ನಮ್ಮ ತಂಡ ದೆಹಲಿಯಲ್ಲಿ ಕಾನೂನು ತಜ್ಞರ ಜೊತೆ ಚರ್ಚೆ ಮಾಡಿದೆ. ನಾನು ಮುಂದಿನ ದಿನಗಳಲ್ಲಿ ಮತ್ತೊಂದು ಸಭೆ ಮಾಡಲಿದ್ದೇನೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಯಾರಿಗೆ ಎಷ್ಟು ಗೌರವ ಕೊಡಬೇಕು ಎಂಬುದನ್ನು ಬಿಜೆಪಿಯಿಂದ ಕಲಿಯಬೇಕಿಲ್ಲ: ಡಿಕೆ ಶಿವಕುಮಾರ್

“ಕರ್ನಾಟಕದಲ್ಲಿ ನೀರಿದೆ. ಇದಕ್ಕಾಗಿಯೇ ನೀರು ಬಿಡುಗಡೆ ಮಾಡಿದ್ದು, ಈಗ ಸುಪ್ರೀಂ ಕೋರ್ಟ್ ಮುಂದೆ ನೀರಿಲ್ಲ ಎಂದು ಹೇಳುತ್ತಿದೆ” ಎಂಬ ತಮಿಳುನಾಡು ಪರ ವಕೀಲ ಮುಕುಲ್ ರೋಹಟಗಿ ಹೇಳಿಕೆಗೆ ಪ್ರತಿಕ್ರಿಯಿಸಿ, “ಈ ವಿಚಾರವಾಗಿ ನಾವು ಪ್ರತಿಕ್ರಿಯೆ ನೀಡುವುದಿಲ್ಲ. ವಾಸ್ತವಾಂಶವನ್ನು ನ್ಯಾಯಾಲಯದ ಮುಂದಿಟ್ಟಿದ್ದೇವೆ. ಇದು ತಾಂತ್ರಿಕ ವಿಚಾರವಾಗಿದ್ದು, ನಾವು ಅಣೆಕಟ್ಟುಗಳಲ್ಲಿನ ಒಳಹರಿವಿನ ಮಾಹಿತಿ ಹಂಚಿಕೊಂಡಿದ್ದೇವೆ” ಎಂದರು.

ಕಾವೇರಿ ವಿಚಾರವಾಗಿ ಸರ್ವಪಕ್ಷ ನಿಯೋಗ ತೆಗೆದುಕೊಂಡು ಹೋಗುತ್ತಿರುವುದು ರಾಜಕೀಯ ಮಾಡಲು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರಲ್ಲ ಎಂದು ಪತ್ರಕರ್ತರು ಪ್ರಶ್ನಿಸಿದಾಗ, “ಕೋರ್ಟ್ ಈ ವಿಚಾರದಲ್ಲಿ ಏನು ಹೇಳಬೇಕೋ ಹೇಳಿದೆ. ಅವರಿಗೆ ಕರ್ನಾಟಕ ರಾಜ್ಯದ ಬಗ್ಗೆ ಹಿತಾಸಕ್ತಿ ಇದ್ದರೆ ಅವರು ನಮ್ಮ ಜೊತೆ ಸೇರಿ ರಾಜ್ಯದ ಪರವಾಗಿ ಧ್ವನಿ ಎತ್ತಲಿ. ಇಲ್ಲದಿದ್ದರೆ ನಮ್ಮ ಕರ್ತವ್ಯ ಮಾಡುತ್ತೇವೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...