ಟಿಪ್ಪರ್ ಲಾರಿಗಳ ಹಾವಳಿ; ರೇಷ್ಮೆ ಹುಳು ರಸ್ತೆಗೆ ಸುರಿದು ರೈತರ ಪ್ರತಿಭಟನೆ

Date:

ಸಮೀಪದಲ್ಲೇ ಇರುವ ಕ್ರಷರ್‌ನಿಂದ ಜಲ್ಲಿ ಮತ್ತು ಜಲ್ಲಿ ಪುಡಿ ತುಂಬಿಕೊಂಡು ಸಂಚರಿಸುವ ಲಾರಿಗಳಿಂದಾಗಿ ಸುತ್ತಮುತ್ತ ರೈತರಿಗೆ ಸಮಸ್ಯೆಯಾಗುತ್ತಿದೆ. ಲಾರಿಗಳಿಂದ ಏಳುವ ಧೂಳು ರೇಷ್ಮೆ ಹುಳು ತಿನ್ನುವ ಹಿಪ್ಪು ನೇರಳೆ ಸೊಪ್ಪಿನ ಮೇಲೆ ತುಂಬಿಕೊಳ್ಳುತ್ತಿದೆ. ಅದನ್ನು ತಿಂದು ರೇಷ್ಮೆ ಹುಳುಗಳು ಸಾಯುತ್ತಿವೆ. ರೈತರು ನಷ್ಟ ಅನುಭವಿಸುವಂತಾಗಿದೆ ಎಂದು ರೈತರು ಆರೋಪಿಸಿದ್ದಾರೆ. ರೇಷ್ಮೆ ಹುಳುಗಳನ್ನು ರಸ್ತೆಗೆ ಸುರಿದು ಪ್ರತಿಭಟನೆ ನಡೆಸಿದ್ದಾರೆ.

ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ದಾಳಿಂಬ ಗ್ರಾಮದ ರೈತರು ರಸ್ತೆಗೆ ರೇಷ್ಮೆ ಹುಳು ಮತ್ತು ಹಿಪ್ಪು ನೇರಳೆ ಸೊಪ್ಪು ಸುರಿದು ಪ್ರತಿಭಟನೆ ನಡೆಸಿದ್ದಾರೆ. ತಮ್ಮೂರಿನ ಮಾರ್ಗದಲ್ಲಿ ಟಿಪ್ಪರ್‌ ಲಾರಿ ಸಂಚಾರವನ್ನು ನಿರ್ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.

ಗ್ರಾಮದ ಪಕ್ಕದ ಗ್ರಾಮಗಳಾದ ಸಾತನೂರು, ನರೀಪುರ ನಡುವೆ ಕ್ರಷರ್‌ಗಳಿದ್ದು, ಅಲ್ಲಿಂದ ಜಲ್ಲಿ ಮತ್ತು ಜಲ್ಲಿ ಪುಡಿಯನ್ನು ತುಂಬಿಕೊಂಡು ಟಿಪ್ಪರ್‌ ಲಾರಿಗಳು ತಮ್ಮೂರಿನ ರಸ್ತೆಯಲ್ಲಿ ಹಾದುಹೋಗುತ್ತವೆ. ಇದರಿಂದಾಗಿ ರಸ್ತೆಯ ಇಕ್ಕೆಲಗಳಲ್ಲಿರುವ ಜಮೀನುಗಳಿಗೆ ಧೂಳು ಆವರಿಸುತ್ತಿದೆ. ಜಮೀನಿನಲ್ಲಿ ಹಿಪ್ಪು ನೇರಳೆ ಸೊಪ್ಪು ಬೆಳೆಯಲಾಗಿದ್ದು, ಧೂಳು ತುಂಬಿದ ಸೊಪ್ಪು ತಿಂದು ರೇಷ್ಮೆ ಹುಳುಗಳು ಸಾಯುತ್ತಿವೆ ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಸ್ತೆಯಲ್ಲಿ ಧೂಳು ಬಾರದಂತೆ ರಸ್ತೆಗೆ ನೀರು ಸಿಂಪಡಿಸಿ ಮತ್ತು ಕಡಿಮೆ ಪ್ರಮಾಣದ ಜಲ್ಲಿ ತುಂಬಿಕೊಂಡು ಹೋಗುವಂತೆ ಹಲವು ಬಾರಿ ಮನವಿ ಮಾಡಿದ್ದೇವೆ. ಆದರೂ, ಕ್ರಷರ್ ಮಾಲೀಕರು ಮತ್ತು ಲಾರಿ ಚಾಲಕರು ನಮ್ಮ ಮಾತಿಗೆ ಕಿವಿಗೊಡುತ್ತಿಲ್ಲ. ಹೀಗಾಗಿ, ತಮ್ಮೂರಿನ ರಸ್ತೆಯಲ್ಲಿ ಟಿಪ್ಪರ್ ಲಾರಿಗಳ ಸಂಚಾರವನ್ನೇ ನಿರ್ಬಂಧಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...