ಚಿಕ್ಕಬಳ್ಳಾಪುರ | ಮೀಟರ್ ದರ ಏರಿಕೆ ಖಂಡಿಸಿ ಫೆ.24ರಂದು ಪ್ರತಿಭಟನೆ

Date:

ಮೀಟರ್‌ಗಳ ಬೆಲೆ ಏರಿಕೆ, ನೀರಾವರಿ ಪಂಪ್‌ಸೆಟ್‌ಗಳಿಗೆ ಮೂಲಸೌಲಭ್ಯ ಕಲ್ಪಿಸಲು ಹೆಚ್ಚಿನ ಬೆಲೆ ನಿಗದಿ ಮಾಡಿರುವುದು, ಗುತ್ತಿಗೆದಾರರ ಪರವಾನಗಿ ದರ ಹೆಚ್ಚಳ ಸೇರಿದಂತೆ ವಿದ್ಯುತ್‌ ಸರಬರಾಜು ಕಂಪನಿಗಳು ವಿವಿಧ ಸೌಲಭ್ಯಗಳ ಬೆಲೆ ಏರಿಕೆಯನ್ನು ಖಂಡಿಸಿ ಫೆ.24ರಂದು ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್‌ ಗುತ್ತಿಗೆದಾರರ ಸಂಘದ ಜಿಲ್ಲಾಧ್ಯಕ್ಷ ಟಿ.ಎಸ್.ಬಾಬು ಹೇಳಿದರು.

ಚಿಕ್ಕಬಳ್ಳಾಪುರ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಾವಿರ ರೂಪಾಯಿಯ ಮಾಪಕವನ್ನು ಏಕಾಏಕಿ 4998ರೂ., 2500 ರೂಪಾಯಿಯ ಮಾಪಕದ ಬೆಲೆಯನ್ನು 8800ರೂ. ಮತ್ತು 3500 ರೂ. ಇದ್ದ ಮಾಪಕದ ಬೆಲೆಯನ್ನು 28080 ರೂಪಾಯಿಗೆ ಏಕಾಏಕಿ ಬೆಲೆ ಏರಿಕೆ ಮಾಡಿದ್ದು, ಸರ್ಕಾರ ಮತ್ತು ವಿದ್ಯುತ್‌ ಸರಬರಾಜು ಕಂಪನಿಗಳು ಕೂಡಲೇ ಈ ನೀತಿಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ವಿದ್ಯುತ್‌ ಪರಿವೀಕ್ಷಣಾಲಯದಿಂದ ಗುತ್ತಿಗೆದಾರರ ಪರವಾನಗಿ ಪಡೆಯಲು ಈ ಹಿಂದೆ ಪ್ರಥಮ ದರ್ಜೆ ಪರವಾನಗಿಗೆ 3000 ರೂ. ಇತ್ತು, ಇದೀಗ 10000ಕ್ಕೆ ಏರಿಸಲಾಗಿದೆ. ಸೂಪರ್‌ ಗ್ರೇಡ್‌ ಪರವಾನಗಿ ದರವನ್ನು 5000 ದಿಂದ 50000 ರೂ.ಗೆ ಏರಿಕೆ ಮಾಡಲಾಗಿದೆ. ಇದನ್ನು ಸರ್ಕಾರ ಪುನರ್‌ ಪರಿಶೀಲನೆ ಮಾಡಬೇಕು ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೈತ ಸಂಘ ಜಿಲ್ಲಾಧ್ಯಕ್ಷ ಗೋಪಾಲ್‌ ಮಾತನಾಡಿ, ರೈತರ ನೀರಾವರಿ ಪಂಪ್‌ಸೆಟ್‌ಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸಲು ಈ ಹಿಂದೆ ಅಕ್ರಮಸಕ್ರಮ ಯೋಜನೆಯಡಿಯಲ್ಲಿ 30 ಸಾವಿರ ರೂ. ನಿಗದಿಯಾಗಿತ್ತು. ಆದರೆ, ಇದೀಗ ಇದ್ದಕ್ಕಿದ್ದಂತೆ 2 ಲಕ್ಷದಿಂದ 10 ಲಕ್ಷದವರೆಗೆ ಏರಿಕೆಯಾಗಿದ್ದು, ಇದರಿಂದ ರೈತರಿಗೆ ದೊಡ್ಡ ಹೊರೆಯಾಗಲಿದೆ ಎಂದು ಕಿಡಿಕಾರಿದರು.

ಸ್ವಯಂ ಕಾಮಗಾರಿಯಲ್ಲಿ ಅಳವಡಿಸಿರುವ 25 ಕೆವಿಎ ವಿದ್ಯುತ್‌ ಪರಿವರ್ತಕ ಚಾಲ್ತಿಗೆ ಸರ್ಕಾರ 3400 ರೂ.ಗಳಿಂದ 9500 ರೂ.ಗಳಿಗೆ ಏರಿಕೆ ಮಾಡಿರುವುದು ಖಂಡನೀಯ. ಈ ಹಿನ್ನೆಲೆಯಲ್ಲಿ ಫೆ.24ರಂದು ವಿದ್ಯುತ್‌ ಗುತ್ತಿಗೆದಾರರ ಸಂಘ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದು, ಇದಕ್ಕೆ ರೈತ ಸಂಘ ಸಂಪೂರ್ಣ ಬೆಂಬಲ ನೀಡಲಿದೆ. ಈ ಮೂಲಕ ದರ ಪರಿಶೀಲನೆಗೆ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ಹೇಳಿದರು.

ಇದನ್ನೂ ಓದಿ : ಚಿಕ್ಕಬಳ್ಳಾಪುರ | ಬಿ – ಖಾತೆ ಅಭಿಯಾನಕ್ಕೆ ಶಾಸಕ ಪ್ರದೀಪ್‌ ಈಶ್ವರ್‌ ಚಾಲನೆ; ಮೊದಲ ದಿನ 716 ಅರ್ಜಿಗಳು ಸ್ವೀಕಾರ

ಸುದ್ದಿಗೋಷ್ಠಿಯಲ್ಲಿ ವಿದ್ಯುತ್‌ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಆಂಜಿನಪ್ಪ, ಭೈರೆಡ್ಡಿ, ಮುನಿರಾಜು, ಬಸವರಾಜು, ಮಂಜುನಾಥ್‌, ಪ್ರಸಾದ್‌, ನವೀನ್‌ ಹಾಗೂ ರೈತ ಸಂಘದ ಮುಖಂಡರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...