‌ಅವಧಿಗೂ ಮುನ್ನ ಮೆಟ್ರೋ ಪ್ರವೇಶ ದ್ವಾರ ಕ್ಲೋಸ್; ವಿಡಿಯೋ ಹಂಚಿಕೊಂಡ ಪ್ರಯಾಣಿಕ

Date:

ಬೆಂಗಳೂರು ನಗರದ ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ಮೆಟ್ರೋ ಭದ್ರತಾ ಸಿಬ್ಬಂದಿಯ ನಿರ್ಲಕ್ಷ್ಯದಿಂದ ಪ್ರಯಾಣಿಕರು ಪರದಾಡಿದ ಘಟನೆ ನಿನ್ನೆ ರಾತ್ರಿ ನಡೆದಿದೆ. ನಿಗದಿತ ಸಮಯಕ್ಕೂ ಮುನ್ನವೇ ಪ್ರವೇಶ ದ್ವಾರವನ್ನು ಮುಚ್ಚಿದ ಭದ್ರತಾ ಸಿಬ್ಬಂದಿಯ ಜತೆ ಪ್ರಯಾಣಿಕರೊಬ್ಬರು ವಾಗ್ವಾದ ನಡೆಸಿದ್ದು, ಎಕ್ಸ್‌ ನಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ.

ರಾತ್ರಿ 10 ಗಂಟೆಯ ಸುಮಾರಿಗೆ ರಂಜಿತ್ ಎನ್ನುವ ಪ್ರಯಾಣಿಕರು ಅತ್ತಿಗುಪ್ಪೆ ಮೆಟ್ರೋದಿಂದ ಇಂದಿರಾನಗರಕ್ಕೆ ತೆರಳಬೇಕಿತ್ತು. ಆದರೆ ಮೆಟ್ರೋ ನಿಲ್ದಾಣದ ಗೇಟ್ ‘ಎ’ ಭಾಗದಲ್ಲಿ ಭದ್ರತಾ ಸಿಬ್ಬಂದಿ ಸ್ಕ್ಯಾನರ್ ತೆರವುಗೊಳಿಸಿ, ಗೇಟ್ ಮುಚ್ಚಿರುವುದರಿಂದ ಅವರಿಗೆ ಒಳಗೆ ಪ್ರವೇಶ ನಿರಾಕರಿಸಲಾಗಿದೆ. ಅವಧಿ ಮುಗಿಯುವ ಮೊದಲು ಪ್ರವೇಶ ನಿರಾಕರಣೆ ಮಾಡಿದ ಬಗ್ಗೆ ರಂಜಿತ್ ಪ್ರಶ್ನಿಸಿದಾಗ ಭದ್ರತಾ ಸಿಬ್ಬಂದಿ ತೀವ್ರವಾಗಿ ಪ್ರತಿಕ್ರಿಯಿಸಿದ್ದು, ಇಬ್ಬರ ಮಧ್ಯೆ ವಾಗ್ವಾದ ನಡೆದಿದೆ. ಸ್ಥಳದಲ್ಲಿದ್ದ ಇತರ ಪ್ರಯಾಣಿಕರೂ ಸಹ ಭದ್ರತಾ ಸಿಬ್ಬಂದಿಯ ವರ್ತನೆಗೆ ವಿರೋಧ ವ್ಯಕ್ತಪಡಿಸಿದ್ದು, ವಿಡಿಯೋ ವೈರಲ್‌ ಆಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...