ಇನ್ನು ರ್‍ಯಾಪಿಡೋ, ರೆಡ್ ಬಸ್‌ ಸೇರಿದಂತೆ 9 ಡಿಜಿಟಲ್ ಕಾಮರ್ಸ್ ಆ್ಯಪ್‌ಗಳಲ್ಲೂ ಮೆಟ್ರೋ ಟಿಕೆಟ್ ಲಭ್ಯ

Date:

ಡಿಜಿಟಲ್ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ದೃಷ್ಟಿಯಿಂದ, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) ತನ್ನ ಸೇವೆಗಳಲ್ಲಿ ಮಹತ್ವಪೂರ್ಣ ನಿರ್ಧಾರ ಕೈಗೊಂಡಿದ್ದು, ಓಪನ್ ನೆಟ್ವರ್ಕ್ ಫಾರ್ ಡಿಜಿಟಲ್ ಕಾಮರ್ಸ್ (ಓಎನ್‌ಡಿಸಿ) ಮೂಲಕ ಕ್ಯೂಆರ್ ಟಿಕೆಟ್ ಸೇವೆ ನೀಡಲು ಚಾಲನೆ ನೀಡಿದೆ.

ಈ ಹೊಸ ಸೌಲಭ್ಯದಿಂದಾಗಿ ಮೆಟ್ರೋ ಪ್ರಯಾಣಿಕರು ಇನ್ನು ಮುಂದೆ, ಈಜ್ ಮೈ ಟ್ರಿಪ್ (EaseMyTrip), ಹೈವೇ ಡಿಲೈಟ್ (Highway Delite), ಮೈಲ್ಸ್ ಆಂಡ್ ಕಿಲೋ ಮೀಟರ್ಸ್‌ (Miles & Kilometres via Telegram), ನಮ್ಮ ಯಾತ್ರಿ (Namma Yatri), ವನ್ ಟಿಕೆಟ್ (OneTicket), ರ್‍ಯಾಪಿಡೋ (Rapido), ರೆಡ್‌ ಬಸ್ (Redbus), ಟಮ್ಮಾಕ್ (Tummoc) ಮತ್ತು ಯಾತ್ರಿ – ಸಿಟಿ ಟ್ರಾವೆಲ್ ಗೈಡ್ (Yatri – City Travel Guide) ಎಂಬ ಒಂಬತ್ತು ಜನಪ್ರಿಯ ಅಪ್ಲಿಕೇಶನ್‌ಗಳ ಮೂಲಕ ಮೆಟ್ರೋ ಕ್ಯೂಆರ್ ಟಿಕೆಟ್‌ಗಳನ್ನು ಖರೀದಿಸಬಹುದಾಗಿದೆ.

ಈ ಹೊಸ ಆಯ್ಕೆಗಳು ಈಗಾಗಲೇ ಲಭ್ಯವಿರುವ ಟಿಕೆಟ್ ಬುಕ್ಕಿಂಗ್ ಆಯ್ದ ಮಾರ್ಗಗಳಾದ ನಮ್ಮ ಮೆಟ್ರೋ ಮೊಬೈಲ್ ಆಪ್ , ಬಿಎಂಆರ್‌ಸಿಎಲ್ ವಾಟ್ಸಾಪ್ ಚಾಟ್ ಬಾಟ್ (8105556677), ಪೇಟಿಎಂ (Paytm) ಆಪ್‌ಗೆ ಪೂರಕವಾಗಿ ಸೇರುತ್ತಿದ್ದು, ಡಿಜಿಟಲ್ ಬಳಕೆದಾರರಿಗೆ ಇನ್ನಷ್ಟು ಸುಲಭ, ಲಭ್ಯವಿರುವ ಮತ್ತು ಸಹಜ ಟಿಕೆಟ್ ಬುಕ್ಕಿಂಗ್ ಅನುಭವವನ್ನು ಒದಗಿಸುತ್ತವೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಕುರಿತು ಬಿಎಂಆರ್‌ಸಿಎಲ್‌ನ ವ್ಯವಸ್ಥಾಪಕ ನಿರ್ದೇಶಕರಾದ ಎಂ. ಮಹೇಶ್ವರ ರಾವ್ ಮಾತನಾಡಿ, “ಡಿಜಿಟಲ್ ಟಿಕೆಟ್ ವ್ಯವಸ್ಥೆಯ ಈ ವಿಸ್ತರಣೆಯು ಮೊದಲ ಹಂತದಿಂದ ಕೊನೆಯ ಹಂತದ ಸಂಪರ್ಕವರೆಗೆ (ಫಸ್ಟ್, ಮಿಡ್ ಮತ್ತು ಲಾಸ್ಟ್ ಮೈಲ್ ಕನೆಕ್ಟಿವಿಟಿ) ಏಕೀಕೃತಗೊಳಿಸುವ ನಮ್ಮ ದೀರ್ಘಕಾಲಿಕ ಪ್ರಯತ್ನದ ಭಾಗವಾಗಿದೆ. ಈಗಾಗಲೇ 2023ರಿಂದ ಓಎನ್‌ಡಿಸಿ ನೆಟ್ವರ್ಕಿನಲ್ಲಿ ಆಟೋ ಮತ್ತು ಟ್ಯಾಕ್ಸಿ ಸೇವೆಗಳು ಲಭ್ಯವಿರುವ ಹಿನ್ನೆಲೆಯಲ್ಲಿ, ಮೆಟ್ರೋ ಟಿಕೆಟ್‌ಗಳ ಸೇರ್ಪಡೆ ಬಹುಮಾದ್ಯಮ ಸಂಚಾರ ವ್ಯವಸ್ಥೆಯ ಪ್ರಮುಖ ಅಂಗವಾಗುತ್ತಿದೆ. ಪ್ರಯಾಣಿಕರು ಇದೀಗ ಒಂದೇ ಅಪ್ಲಿಕೇಶನ್‌ನಿಂದ ತಮ್ಮ ಮನೆಯಿಂದ ತಾವು ಪ್ರಯಾಣಿಸುವ ನಿಗದಿತ ಸ್ಥಳದವರೆಗೆ ತಮ್ಮ ಸಂಪೂರ್ಣ ಪ್ರಯಾಣವನ್ನು ಸುಲಭವಾಗಿ ಯೋಜಿಸಬಹುದಾಗಿದೆ. ಇದು ಸಮಯ ಮತ್ತು ಶ್ರಮವನ್ನು ದ್ವಿಗುಣವಾಗಿ ಉಳಿಸುತ್ತದೆ. ಬಿಎಂಆರ್‌ಸಿಎಲ್ ಈ ಮೂಲಕ ಒಂದು ಮುಕ್ತ, ಒಳಗೊಳ್ಳುವಿಕೆಯಿಂದ ಕೂಡಿದ, ತಂತ್ರಜ್ಞಾನಾಧಾರಿತ ಭವಿಷ್ಯದ ನಗದುರಹಿತ ನಗರ ಸಂಚಾರ ವ್ಯವಸ್ಥೆ ಕಡೆಗೆ ನಿರ್ಣಾಯಕ ಹೆಜ್ಜೆ ಇಡುತ್ತಿದೆ” ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಬಳಕೆದಾರರ ಗೌಪ್ಯತೆಗೆ ಆದ್ಯತೆ, ಟ್ವಿಟರ್‌ ಸಹ ಸ್ಥಾಪಕ ಜಾಕ್‌ ಡಾರ್ಸಿಯಿಂದ ಹೊಸ ಮೆಸೇಜಿಂಗ್ ಆ್ಯಪ್ ಬಿಡುಗಡೆ

ನಮ್ಮ ಮೆಟ್ರೋ ಸೇವೆಯನ್ನು ವಾರದ ದಿನಗಳಲ್ಲಿ ಪ್ರತಿ ದಿನ 8.5 ಲಕ್ಷಕ್ಕಿಂತ ಹೆಚ್ಚು ಪ್ರಯಾಣಿಕರು ಬಳಸುತ್ತಿದ್ದಾರೆ. ಅವರೆಲ್ಲರಿಗೂ ಈ ಸೇವೆಯನ್ನು ಇನ್ನಷ್ಟು ಸುಲಭವಾಗಿಸುವ ನಿಟ್ಟಿನಲ್ಲಿ 9 ಜನಪ್ರಿಯ ಅಪ್ಲಿಕೇಶನ್‌ಗಳಲ್ಲಿ ಲಭ್ಯವಿರುವಂತೆ ಬಿಎಂಆರ್‌ಸಿಎಲ್ ಮಹತ್ವದ ಹೆಜ್ಜೆಯನ್ನಿಟ್ಟಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...