ರಾಯಚೂರು | ಮೈಕ್ರೋ ಫೈನಾನ್ಸ್ ಕಿರುಕುಳ: ಮರುಪಾವತಿಗೆ ಕಾಲಾವಕಾಶ ನೀಡಲು ಒತ್ತಾಯ

Date:

ಮೈಕ್ರೋ ಫೈನಾನ್ಸ್ ಕಿರುಕುಳ ದಿನದಿಂದ ದಿನಕ್ಕೆ ಎಲ್ಲೆಡೆ ಹೆಚ್ಚಾಗುತ್ತಿದ್ದು, ಮಹಿಳೆಯರ ಮೇಲೆ ಮಾನಸಿಕ ದೌರ್ಜನ್ಯ ಮಾಡುತ್ತಿದ್ದಾರೆ. ಮೈಕ್ರೋ ಫೈನಾನ್ಸ್, ಸಂಘ ಸಂಸ್ಥೆಗಳಿಂದ ಹಾಗೂ ಇನ್ನಿತರ ಫೈನಾನ್ಸ್ ಕಂಪನಿಗಳಿಂದ ತೆಗೆದುಕೊಂಡ ಹಣವನ್ನು ವಾಪಸ್‌ ಮರುಪಾವತಿಸಲು ಒಂದೆರಡು ಬಾರಿ ಅವಕಾಶ ಕೊಡಬೇಕು ಎಂದು ಮಾದಿಗ ದಂಡೋರ ಮಾದಿಗ ಮೀಸಲಾತಿ ಹೋರಾಟ ( ಪಾವಗಡ ಶ್ರೀ ರಾಮ ಬಣ) ಸಮಿತಿ ವತಿಯಿಂದ ಜಿಲ್ಲಾಡಳಿತಕ್ಕೆ ಹಕ್ಕೊತ್ತಾಯ ಸಲ್ಲಿಸಿದರು.

“ಪ್ರಸ್ತುತ ಮನೆಗಳಲ್ಲಿ ಒಂದಲ್ಲಾ ಒಂದು ಸಮಸ್ಯೆಗಳು, ದುರ್ಘಟನೆಗಳು ನಡೆದಿರುತ್ತವೆ. ಇಂತಹ ಸಂದರ್ಭದಲ್ಲಿಯೂ ಫೈನಾನ್ಸ್‌ಗಳಿಂದ ನಿತ್ಯವೂ ಕಿರುಕುಳ ಹೆಚ್ಚಾಗುತ್ತಿದೆ. ಸಾಲ ವಾಪಸ್ ನೀಡುವುದಿಲ್ಲವೆಂದು ಹೇಳುವುದಿಲ್ಲ. ಸ್ವಲ್ಪ ಕಾಲಾವಕಾಶ ಕೊಡಬೇಕು” ಎಂದು ಒತ್ತಾಯಿಸಿದರು.

ರಾಯಚೂರು ಜಿಲ್ಲೆಯಾದ್ಯಂತ ಕಿರುಸಾಲ ಪಡೆದ ಮಹಿಳೆಯರ ಮನೆಗೆ ನುಗ್ಗಿ ಸಮಯದ ಪ್ರಜ್ಞೆ ಇಲ್ಲದೆ ಮನೆಯಲ್ಲಿ ಧರಣಿ ಹೂಡಿದಂತೆ ಕುಳಿತುಕೊಂಡು ಹಣ ಕಟ್ಟುವಂತೆ ಒತ್ತಾಯಿಸುತ್ತಾರೆ. ಮನೆಯಂಗಳದಲ್ಲಿ, ಓಣಿಯಲ್ಲಿ ನಿಂತು ನಮ್ಮ ಮರ್ಯಾದೆಗೆ ಧಕ್ಕೆಯುಂಟು ಮಾಡುತ್ತಿದ್ದಾರೆ” ಎಂದು ಅಳಲು ತೋಡಿಕೊಂಡರು. ಹಣ ಕಟ್ಟಲು ಕಾಲಾವಕಾಶ ಕೋರಿದರೂ ಕೂಡ ಬಾಯಿಗೆ ಬಂದಂತೆ ಅವಾಚ್ಯ ಶಬ್ಧಗಳಿಂದ ನಿಂದಿಸುತ್ತಾರೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾಲ ಪಡೆದ ಮಹಿಳೆಯರಿಗೆ ನೆಮ್ಮದಿಯಿಲ್ಲದಂತಾಗಿದೆ. ಕೆಲವು ಸೂಕ್ಷ್ಮ ಮತಿಯ ಹೆಣ್ಣು ಮಕ್ಕಳು ಇವರ ಕಿರಿಕಿರಿಯಿಂದಾಗಿ ಆತ್ಮಹತ್ಯೆಗೆ ಪ್ರಯತ್ನ ಪಟ್ಟರೆ ಇದಕ್ಕೆ ನೇರ ಹೊಣೆಗಾರರು ಮೈಕ್ರೋ ಫೈನಾನ್ಸ್ ಕಂಪನಿಗಳೇ ಆಗುತ್ತವೆ ಎಂದು ಕಿಡಿಕಾರಿದರು.

ಸರಕಾರದ ಸುತ್ತೋಲೆ ಮೂಲಕ ಕೊಟ್ಟಿರುವ ಸಾಲಗಳಿಗೆ ಒತ್ತಾಯ ಪೂರ್ವಕವಾಗಿ ಹಣ ಕಟ್ಟುವಂತೆ ಪೀಡಿಸಬಾರದು. ಒಂದೆರಡು ಬಾರಿ ಕಾಲಾವಕಾಶ ಕೊಡಬೇಕು ಎಂದು ಸಂಘಟನೆಯಿಂದ ಮನವಿ ಮಾಡಿದರು.

ಈ ವೇಳೆ ರಾಜ್ಯಾಧ್ಯಕ್ಷರು ಹೇಮರಾಜ್ ಅಸ್ಕಿಹಾಳ, ಜಿಲ್ಲಾಧ್ಯಕ್ಷ ನರಸಿಂಹಲು , ಪ್ರಭು ಮರ್ಚಟ್ಹಾಲ , ನರಸಿಂಹಲು ಪೋತಗಲ್ , ಉರುಕುಂದಪ್ಪ , ತಾಯಣ್ಣ ಗದಾರ , ಲಿಂಗಣ್ಣ ಮಾಡಗಿರಿ , ಎನ್ ಸುನೀಲ್ , ಸಿ ರಾಘವೇಂದ್ರ , ಪ್ರವೀಣ ಕುಮಾರ , ಇನ್ನಿತರರು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...