ಬೆಳಗಾವಿ | ಫೈನಾನ್ಸ್‌ ಕಂಪನಿಯಿಂದ ಮನೆಗೆ ಬೀಗ: ವಿಶೇಷ ಚೇತನ ಮಗುವಿನೊಂದಿಗೆ ಬೀದಿಗೆ ಬಿದ್ದ ಕುಟುಂಬ!

Date:

ಪಡೆದಿದ್ದ ಸಾಲವನ್ನು ಅವಧಿಯೊಳಗೆ ಸಂಪೂರ್ಣವಾಗಿ ಮರುಪಾವತಿಸಿಲ್ಲ ಎಂದು ಆರೋಪಿಸಿ ಮೈಕ್ರೋ ಫೈನಾನ್ಸ್‌ ಸಂಸ್ಥೆಯೊಂದು ಮನೆಗೆ ನೋಟಿಸ್ ಅಂಟಿಸಿ ಬೀಗ ಜಡಿದ ಪರಿಣಾಮ ವಿಶೇಷ ಚೇತನ ಮಗುವಿನೊಂದಿಗೆ ಕುಟುಂಬವೊಂದು ಬೀದಿಗೆ ಬಿದ್ದಿರುವ ಬೆಳವಣಿಗೆ ರಾಜ್ಯದ ಗಡಿ ಜಿಲ್ಲೆಯಾದ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆಯ ಚನ್ನಮ್ಮನ ಕಿತ್ತೂರು ತಾಲೂಕಿನ ಕುಲವಳ್ಳಿ ಗ್ರಾಮದ ದಸ್ತಗೀರಸಾಬ್ ಮುಗಟಸಾಬ್ ಕಾದ್ರೊಳ್ಳಿ ಎಂಬುವವರ ಕುಟುಂಬ ವಿಶೇಷ ಚೇತನ ಮಗುವಿನೊಂದಿಗೆ ಬೀದಿಗೆ ಬಿದ್ದಿದೆ.

ಈ ಬಗ್ಗೆ ಅಮ್ಮ ಅಳಲು ತೋಡಿಕೊಂಡಿರುವ ಕುಟುಂಬದ ಯಜಮಾನ ದಸ್ತಗೀರ್ ಸಾಬ್, “₹5 ಲಕ್ಷ ಸಾಲ ನೀಡಲಾಗಿತ್ತು. ಈ ಪೈಕಿ ₹2 ಲಕ್ಷ ಮಧ್ಯವರ್ತಿ ಪಾಲಾಗಿದೆ. ಎಲ್ಲ ಸಾಲ ಕಟ್ಟಲು ನಮಗೆ ಒತ್ತಡ ಹಾಕಲಾಗುತ್ತಿದೆ. ಮೈಕ್ರೊ ಫೈನಾನ್ಸ್ ಕಂಪನಿಯವರು ಮನೆಗೆ ವಾರದ ಹಿಂದೆ ಬೀಗ ಜಡಿದು, ನೋಟಿಸ್ ಅಂಟಿಸಿದ್ದಾರೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
belgam 2

“ನಾನು ತೆಗೆದುಕೊಂಡಿದ್ದ ₹3 ಲಕ್ಷ ಸಾಲಕ್ಕೆ, ಈಗಾಗಲೇ ₹3.30 ಲಕ್ಷ ಪಾವತಿಸಿರುವೆ. ₹2 ಲಕ್ಷ ಪಡೆದ ಮಧ್ಯವರ್ತಿಗೆ ಕೇಳಿದರೆ ನನಗೇನೂ ಸಂಬಂಧವಿಲ್ಲ ಎನ್ನುತ್ತಾರೆ. ನಿಗದಿತ ಅವಧಿಗೆ ಸಾಲದ ಕಂತು ಕಟ್ಟಿಲ್ಲ ಎಂದು ನಿಂದಿಸಿ, ಓಡಾಡುತ್ತಿದ್ದ ಬೈಕ್ ಕೂಡ ಜಪ್ತಿ ಮಾಡಿದ್ದಾರೆ” ಎಂದು ತಿಳಿಸಿದ್ದಾರೆ.

“ನನ್ನ ಕೊರಳಲ್ಲಿದ್ದ ತಾಳಿ ಗಿರವಿ ಇಟ್ಟು ಶುಕ್ರವಾರ ₹2 ಲಕ್ಷ ಹಣ ಒಟ್ಟುಗೂಡಿಸಿ ತುಂಬಲು ಹೋಗಿದ್ದೆವು. ₹2.5 ಲಕ್ಷ ಕಟ್ಟಿದರೆ ಮಾತ್ರ ಮನೆ ಬೀಗ ತೆರೆಯುತ್ತೇವೆ ಎನ್ನುತ್ತಾರೆ. ₹50 ಸಾವಿರ ನಂತರ ಕಟ್ಟುತ್ತೇವೆ ಎಂದರೂ ಕೇಳುತ್ತಿಲ್ಲ” ಎಂದು ದಸ್ತಗೀರಸಾಬ್ ಪತ್ನಿ ಶಹನಾಬಿ ಹೇಳಿಕೆ ನೀಡಿದ್ದಾರೆ.

ಇದನ್ನು ಓದಿದ್ದೀರಾ? ರಾಯಚೂರು | ಕೃಷಿ ಹೊಂಡದ ಹೆಸರಲ್ಲಿ ಕಲ್ಲು ಗಣಿಗಾರಿಕೆ: ಗ್ರಾಮಸ್ಥರ ಮನೆಯ ಗೋಡೆಯಲ್ಲಿ ಬಿರುಕು!

“ಪತಿ, ಇಬ್ಬರು ಪುತ್ರರು, ಸೊಸೆಯಂದಿರು, ಮೊಮ್ಮಕ್ಕಳು ಸೇರಿ ಒಟ್ಟು 15 ಜನ ಮನೆಯಲ್ಲಿ ವಾಸಿಸುತ್ತೇವೆ. ಮನೆಗೆ ಬೀಗ ಹಾಕಿದ್ದರಿಂದ ಮಂದಿ ಮನೆ, ಊರ ಗುಡಿ ನಮ್ಮ ಮಲಗುವ ಸ್ಥಳವಾಗಿದೆ. ಅಂಗವೈಕಲ್ಯ ಇರುವ ಬಾಲಕಿಯನ್ನು ಹೊತ್ತುಕೊಂಡು ಓಡಾಡುವ ಕೆಟ್ಟ ಪರಿಸ್ಥಿತಿಯನ್ನು ಸಾಲ ಕೊಡಿಸಿದ ಮಧ್ಯವರ್ತಿ ನಮಗೆ ತಂದಿಟ್ಟಿದ್ದಾರೆ. ನಮಗೆ ಯಾರಾದರೂ ನೆರವು ನೀಡಬೇಕು. ಸರ್ಕಾರ ನಮ್ಮಂಥವರ ನೆರವಿಗೆ ಬರಬೇಕು’ ಎಂದು ಕುಟುಂಬದ ಯಜಮಾನ ದಸ್ತಗೀರಸಾಬ್ ಅಳಲು ತೋಡಿಕೊಂಡಿದ್ದಾರೆ.

ಸುಗ್ರೀವಾಜ್ಞೆ ವಾಪಸ್ ಕಳುಹಿಸಿರುವ ರಾಜ್ಯಪಾಲ

ಸಾಲ ವಸೂಲಿ ವೇಳೆ ಮೈಕ್ರೊ ಫೈನಾನ್ಸ್‌ ಕಂಪನಿಗಳು ಮತ್ತು ಲೇವಾದೇವಿದಾರರು ಅನುಸರಿಸುವ ಕಾನೂನುಬಾಹಿರ ಕ್ರಮಗಳು ಹಾಗೂ ಕಿರುಕುಳದಿಂದ ಸಾಲಗಾರರನ್ನು ರಕ್ಷಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ರೂಪಿಸಿದ್ದ, ‘ಕರ್ನಾಟಕ ಮೈಕ್ರೊ ಫೈನಾನ್ಸ್‌ (ಬಲವಂತದ ಕ್ರಮಗಳ ತಡೆ) ಸುಗ್ರೀವಾಜ್ಞೆ–2025’ ಯನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್ ವಾಪಸ್‌ ಕಳುಹಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...