ಉಡುಪಿ | ಕಲ್ಯಾಣಪುರ ಮಿಲಾಗ್ರಿಸ್ ಕಾಥೆಡ್ರಲ್ ಚರ್ಚಿನಲ್ಲಿ ಸಕಲ ಸಂತರ ಮಹೋತ್ಸವ

Date:

ಕಲ್ಯಾಣಪುರ ಮಿಲಾಗ್ರಿಸ್ ಕಾಥೆಡ್ರಲ್‌ನಲ್ಲಿ ಸಕಲ ಸಂತರ ಮಹೋತ್ಸವದ ಅಂಗವಾಗಿ ಮಕ್ಕಳು ಹಾಗೂ ಯುವಜನರಿಗಾಗಿ ಸಂತರ ಅಲಂಕಾರ ಉಡುಗೆ ಸ್ಪರ್ಧೆ ಅತ್ಯಂತ ಉತ್ಸಾಹಭರಿತವಾಗಿ ಆಯೋಜಿಸಲಾಯಿತು. ಧಾರ್ಮಿಕ ಭಾವನೆ ಮತ್ತು ಸಾಂಸ್ಕೃತಿಕ ಪ್ರತಿಭೆ ಒಂದೇ ವೇದಿಕೆಯಲ್ಲಿ ಬೆರೆತ ಈ ಕಾರ್ಯಕ್ರಮವು ಚರ್ಚ್‌ನಲ್ಲಿ ಭಕ್ತಿಭಾವದ ವಾತಾವರಣವನ್ನು ನಿರ್ಮಿಸಿತು.

ಸಕಲ ಸಂತರ ಹಬ್ಬದ ಪ್ರಯುಕ್ತ ಚರ್ಚ್‌ನ 28 ಮಕ್ಕಳು ಹಾಗೂ ಯುವಜನರು ಭಾಗವಹಿಸಿ ತಾವು ಆಯ್ದ ಸಂತರ ಜೀವನದ ಪ್ರೇರಣಾದಾಯಕ ಘಟನೆಗಳು ಮತ್ತು ಧಾರ್ಮಿಕ ಸಂದೇಶಗಳನ್ನು ಸಂಕ್ಷಿಪ್ತವಾಗಿ ವಿವರಿಸಿದರು. ವಿಭಿನ್ನ ಸಂತರ ಜೀವನಶೈಲಿ, ಅವರ ದೈವಭಕ್ತಿ ಮತ್ತು ತ್ಯಾಗದ ಮನೋಭಾವವನ್ನು ಪ್ರತಿಬಿಂಬಿಸುವ ಉಡುಪು ಹಾಗೂ ಅಲಂಕಾರ ಧರಿಸಿ ಮಕ್ಕಳು ಸಂತರಂತೆಯೇ ವೇಷಧಾರಣೆ ಮಾಡಿ ಅದ್ಭುತವಾಗಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಧರ್ಮಗುರು ಮೊನ್ಸಿಞ್ಜೊರ್ ಫರ್ಡಿನಾಂಡ್ ಗೊನ್ಸಾಲ್ವಿಸ್ ಮಾತನಾಡುತ್ತಾ, “ಸಂತರ ಜೀವನ ಹಾಗೂ ದೈವಭಕ್ತಿ ನಮ್ಮೆಲ್ಲರಿಗೂ ಮಾದರಿ. ಸಂತರ ಜೀವನದ ಮಾರ್ಗವನ್ನು ಅನುಸರಿಸುವ ಮೂಲಕ ನಾವೂ ಪವಿತ್ರತೆಯ ಹಾದಿಯಲ್ಲಿ ನಡೆಯಬೇಕು. ನಮ್ಮ ನಡೆ-ನುಡಿ ಮತ್ತು ವರ್ತನೆ ಸಂತರನ್ನೇ ಪ್ರತಿಬಿಂಬಿಸುವಂತಿರಲಿ,” ಎಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಹಾಯಕ ಗುರು ರೆವ್. ಫಾ. ಪ್ರದೀಪ್ ಕಾರ್ಡೋಜ ಮಾತನಾಡುತ್ತಾ, “ನಾವೆಲ್ಲರೂ ಸಂತರಾಗಲು ಸಿದ್ಧರಾಗಬೇಕು. ಸಂತರಾಗಲು ನಮ್ಮ ಆಲೋಚನೆ, ಮಾತು ಮತ್ತು ಹೃದಯ ಶುದ್ಧವಾಗಿರಬೇಕು. ದೇವರ ಮಾರ್ಗದಲ್ಲಿ ನಡೆಯುವ ಪರಿಪೂರ್ಣ ಸಂತ ಜೀವನವನ್ನು ಅಳವಡಿಸಿಕೊಳ್ಳುವುದು ಪ್ರತಿಯೊಬ್ಬರ ಧಾರ್ಮಿಕ ಕರ್ತವ್ಯ,” ಎಂದು ಪ್ರೇರಣಾದಾಯಕ ಸಂದೇಶ ನೀಡಿದರು.

ಕಾರ್ಯಕ್ರಮದಲ್ಲಿ ವಂ. ಗುರು ಸ್ಟೀವನ್ ಫರ್ನಾಂಡಿಸ್ ಮತ್ತು ವಂ. ಗುರು ಜೋಕಿಮ್ ಡಿಸೋಜ ತೀರ್ಪುಗಾರರಾಗಿ ಸೇವೆ ಸಲ್ಲಿಸಿದರು. ಅವರು ಮಕ್ಕಳು ತೋರಿಸಿದ ಪ್ರತಿಭೆ ಮತ್ತು ಭಕ್ತಿಭಾವವನ್ನು ಮೆಚ್ಚಿ ಶ್ಲಾಘಿಸಿದರು.

ಈ ಸಂದರ್ಭದಲ್ಲಿ ಸ್ಪರ್ಧೆಯಲ್ಲಿ ಭಾಗವಹಿಸಿದ 28 ಮಕ್ಕಳು ಹಾಗೂ ಯುವಜನರನ್ನು ಅಭಿನಂದಿಸಿ ಶುಭಾಶಯವನ್ನು ಕೋರಲಾಯಿತು

ಕಾರ್ಯಕ್ರಮವನ್ನು ಯುವಜನ ಆಯೋಗದ ಸದಸ್ಯೆ ರೇಚೆಲ್ ಲುವಿಸ್ ಸೊಗಸಾಗಿ ನಿರೂಪಿಸಿದರು. ಚರ್ಚ್ ಪಾಲನಾ ಸಮಿತಿಯ ಕಾರ್ಯದರ್ಶಿ ಎವ್ಜಿನ್ ರೆಬೆಲ್ಲೊ, ಆಯೋಗ ಸಂಯೋಜಕಿ ಪ್ರೇಮ ಲುವಿಸ್, ಸುವಾರ್ತಾ ಪ್ರಸಾರ ಆಯೋಗದ ಸಚೇತಕಿ ಶ್ರೀಮತಿ ಜ್ಯೋತಿ ಲುವಿಸ್ ಸರ್ವರನ್ನು ವಂದಿಸಿದರು. ಅನೇಕ ಪೋಷಕರು ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...