ಮೈಸೂರು | ಕಬ್ಬು ಬೆಳೆಗಾರರ ಸಮಸ್ಯೆ ಆಲಿಸಿದ ಉಸ್ತುವಾರಿ ಸಚಿವ ಡಾ ಹೆಚ್ ಸಿ ಮಹದೇವಪ್ಪ

Date:

ಮೈಸೂರಿನ ಜಲದರ್ಶನಿ ಅತಿಥಿಗೃಹದಲ್ಲಿ ಮೈಸೂರು ಹಾಗೂ ಚಾಮರಾಜನಗರ ಭಾಗದ ಕಬ್ಬು ಬೆಳೆಗಾರರೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್ ಸಿ ಮಹದೇವಪ್ಪ ಸಭೆ ನಡೆಸಿ, ಕಬ್ಬು ಬೆಳೆಗಾರರ ಸಮಸ್ಯೆ ಆಲಿಸಿ, ಅಹವಾಲು ಸ್ವೀಕರಿಸಿದರು.

ಇದೇ ವೇಳೆ ಮಾತನಾಡಿದ ಸಚಿವರು, “ರೈತರ ಸಮಸ್ಯೆಗಳನ್ನು ಬಗೆಹರಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಅದರಂತೆ ಕಬ್ಬು ಬೆಳೆಗಾರರ ಹಿತದೃಷ್ಟಿಯಿಂದ ಸಭೆಯಲ್ಲಿ ತಿಳಿಸಿರುವ ಬೇಡಿಕೆಗಳಿಗೆ ಸರ್ಕಾರವು ಪ್ರಾಮಾಣಿಕವಾಗಿ ಸ್ಪಂದಿಸುವ ಕೆಲಸ ಮಾಡಲಿದೆ” ಎಂದು ಭರವಸೆ ನೀಡಿದರು.

ಕೆ ಆರ್ ನಗರ ಬಳಿಯ ಚುಂಚನ ಕಟ್ಟೆ ಶ್ರೀರಾಮ ಸಕ್ಕರೆ ಕಾರ್ಖಾನೆ ಪ್ರಾರಂಭಿಸುವ ಕುರಿತಾಗಿ ಮಾತನಾಡಿ, ಸರ್ಕಾರ ಹಾಗೂ ಸಂಸ್ಥೆ ನಡುವ ಒಡಂಬಡಿಕೆಯಾಗಿದ್ದು ಕಾರ್ಖಾನೆ ಪ್ರಾರಂಭಿಸಿ ಕಬ್ಬು ಬೆಳೆಯುವ ರೈತರಿಗೆ ಅನುಕೂಲ ಮಾಡಿಕೊಡುವ ನಿಲುವಿನಲ್ಲಿದೆ. ಸರ್ಕಾರ ಕಾರ್ಖಾನೆ ಪ್ರಾರಂಭಿಸುವ ಬಗ್ಗೆ ಸಂಬಂಧಿಸಿದವರೊಟ್ಟಿಗೆ
ಸದ್ಯಲ್ಲಿಯೇ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ರೈತ ಸಂಘ1

ಅಚ್ಚುಕಟ್ಟು ಪ್ರದೇಶದಲ್ಲಿರುವ ಎಲ್ಲ ರೈತರ ಜಮೀನಿಗೆ ನೀರು ತಲುಪಿಸಲು ನೀರಾವರಿ ಯೋಜನೆ ರೂಪಿಸಲಾಗಿದೆ. ಈ ನಡುವೆ ನಾಲೆಗಳಿಂದ ಮೋಟಾರ್ ಮೂಲಕ ನೀರು ಪಡೆಯುವವರ ಮೇಲೆ ಕ್ರಮ ಜರುಗಿಸಲಾಗುತ್ತಿರುವ ಬಗ್ಗೆ ದೂರು ಬರುತ್ತಿದ್ದು, ಇದರ ಮಾರ್ಪಾಡಿಗೆ ರೈತರು ನೀಡುವ ಸಲಹೆಗಳನ್ನು ಸರ್ಕಾರ ಪರಿಗಣಿಸಲಿದೆ ಎಂದು ಸಭೆಗೆ ತಿಳಿಸಿದರು.

ಬ್ಯಾಂಕುಗಳಲ್ಲಿ ರೈತರಿಗೆ ಅಸಹಕಾರ ನೀಡುತ್ತಿದ್ದಾರೆ ಎಂಬ ರೈತರ ಮಾತಿಗೆ ಪ್ರತಿಕ್ರಿಯಿಸಿದ ಸಚಿವರು, ಶೀಘ್ರದಲ್ಲೇ ಬ್ಯಾಂಕ್ ಅಧಿಕಾರಿಗಳ ಸಭೆ ಕರೆದು ಚರ್ಚಿಸಿ ರೈತರನ್ನು ಶೋಷಣೆ ಮಾಡದಂತೆ ಸೂಚನೆ ನೀಡಲಾಗುವುದು ಎಂದು ಭರವಸೆ ನೀಡಿದರು.

ರೈತರು ತಾವು ಬೆಳೆದ ಬೆಳೆ ಸಾಗಿಸಲು ಅನುಕೂಲವಾಗುವ ‘ನಮ್ಮ ಹೊಲ, ನಮ್ಮ ರಸ್ತೆಯನ್ನು’ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಅಭಿವೃದ್ಧಿಪಡಿಸಲು ಅಧಿಕಾರಿಗಳಿಗೆ ಸೂಚಿಸಲಾಗುವುದು. ಜನರು ಕೂಡ ಪ್ರಜಾಪ್ರಭುತ್ವದ ಪ್ರಮುಖ ವೇದಿಕೆಯಾದ ಗ್ರಾಮಸಭೆಗಳಲ್ಲಿ ಭಾಗವಹಿಸಿ ಗ್ರಾಮಕ್ಕೆ ಅಗತ್ಯವಿರುವ ಮೂಲಸೌಕರ್ಯದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಬೆಂಬಲ ಕೋರಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ, ನಗರ ಪೊಲೀಸ್ ಅಧೀಕ್ಷಕಿ ಸೀಮಾ ಲಾಟ್ಕರ್, ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ರೈತ ಸಂಘದ ಮುಖಂಡರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...