ಮೈಸೂರು | ಸಾಂಸ್ಕೃತಿಕ ಚಳುವಳಿಯಾದ ಈ ಬಾರಿಯ ದಸರಾ: ಸಚಿವ ಡಾ ಹೆಚ್ ಸಿ ಮಹದೇವಪ್ಪ

Date:

ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಗರದ ಕುಪ್ಪಣ್ಣ ಉದ್ಯಾನದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ಆಯೋಜಿಸಿದ್ದ “ದಸರಾ ಫಲಪುಷ್ಪ ಪ್ರದರ್ಶನ”ದಲ್ಲಿ ಅತ್ಯುತ್ತಮ ಉದ್ಯಾನವನ ವಿನ್ಯಾಸಗೊಳಿಸಿದ ವಿಜೇತರಿಗೆ ಸಚಿವ ಡಾ ಹೆಚ್ ಸಿ ಮಹದೇವಪ್ಪ ಪ್ರಶಸ್ತಿ ವಿತರಿಸಿದರು.

ಸಂಗೀತ, ಸಾಹಿತ್ಯ, ಕಲೆ, ಕೃಷಿ, ಹೈನುಗಾರಿಗೆ, ಕ್ರೀಡೆ, ಮಹಿಳೆಯರ ಕೊಡುಗೆಗಳು, ಜನರ ಜೀವನ ಕ್ರಮ ಹಾಗೂ ಮೌಲ್ಯಗಳು ಈ ಬಾರಿಯ ದಸರಾ ಸಾಂಸ್ಕೃತಿಕ ಚಳುವಳಿಯಾಗಿ ನಡೆದಿದೆ ಎಂದರು.

1002030939

ರಾಜ್ಯದಲ್ಲಿ ಉತ್ತಮವಾಗಿ ಮಳೆಯಾದ ಕಾರಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅದ್ದೂರಿ ದಸರಾ ಆಚರಿಸುವಂತೆ ತಿಳಿಸಿದ್ದರು. ಅದರಂತೆ ಜನರಲ್ಲಿ ಸಹೋದರತೆ, ಸೌಹಾರ್ದತೆ, ಘನತೆಯ ಬದುಕನ್ನು ಬಿತ್ತುವಂತೆ ಈ ಬಾರಿಯ ದಸರಾವನ್ನು ಆಚರಿಸಲಾಗಿದೆ. ಧರ್ಮ, ಜಾತಿಗೂ ಮೀರಿದ ಸಮಾಜವನ್ನು ನಿರ್ಮಿಸುವ ಸಂದೇಶ ಸಾರಲಾಗಿದೆ ಎಂದು ಅಭಿಪ್ರಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಾರಿಯ ದಸರಾ ವಿಭಿನ್ನವಾಗಿತ್ತು ಎಂಬ ಉತ್ತಮ ಅಭಿಪ್ರಾಯ ಜನರಿಂದ ಕೇಳಿಬಂದಿದೆ. ದಸರಾ ಕಣ್ತುಂಬಿಕೊಳ್ಳಲು ಜನಸಾಗರವೇ ಹರಿದುಬಂದಿದ್ದು, ಜನರು ಕೂಡ ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದರಿಂದ ಜನರ ದಸರಾವಾಗಿ ಪರಿಣಮಿಸಿದೆ. ದಸರಾ ಯಶಸ್ಸಿಗೆ ಮೈಸೂರಿನ ಎಲ್ಲಾ ಜನತೆ ಕಾರಣೀಭೂತರಾಗಿದ್ದಾರೆ. ಈ ಯಶಸ್ವಿ ದಸರಾ ಆಚರಣೆ ಮೂಲಕ ರಾಜ್ಯ ಸರ್ಕಾರಕ್ಕೆ ಸಾಂಸ್ಕೃತಿಕ ಕಿರೀಟ ಇಟ್ಟಂತಾಗಿದೆ ಎಂದು ಹೇಳಿದರು.

1002030943

ತೋಟಗಾರಿಕೆ ಇಲಾಖೆಯಿಂದ ಫಲಪುಷ್ಟ ಪ್ರದರ್ಶನವನ್ನು ಅತ್ಯಂತ ಅಚ್ಚುಕಟ್ಟಾಗಿ ಆಯೋಜನೆ ಮಾಡಲಾಗಿದೆ. ವಿವಿಧ ಪುಷ್ಪಗಳು ಹಾಗೂ ಸಿರಿಧಾನ್ಯಗಳಿಂದ ಬಗೆಬಗೆಯ ಕಲಾ ಪ್ರಕಾರಗಳನ್ನು ರಚಿಸಿ ಜನರ ಮೆಚ್ಚುಗೆ ಗಳಿಸಲಾಗಿದೆ. ಸುಮಾರು 5 ಲಕ್ಷಕ್ಕಿಂತ ಹೆಚ್ಚು ಜನರು ವೀಕ್ಷಣೆ ಮಾಡಿರುವುದು ಸಂತೋಷದ ವಿಚಾರ ಎಂದರು.

ಗಾಜಿನಮನೆಯಲ್ಲಿ ಸಿದ್ಧಪಡಿಸಿರುವ `ಪ್ರಜಾಪ್ರಭುತ್ವ ನಡೆದು ಬಂದ ದಾರಿ’ ಎಂಬ ಪರಿಕಲ್ಪನೆಯ ವಿನ್ಯಾಸವು ಆರನೇ ಶತಮಾನದಿಂದ ಇಲ್ಲಿಯವರೆಗೆ ಪ್ರಜಾಪ್ರಭುತ್ವ ವ್ಯವಸ್ಥೆ ಹೇಗಿತ್ತು ಎಂಬುದನ್ನು ಹೇಳುತ್ತದೆ. ಬುದ್ಧರ ಕಾಲ, ಅನುಭವ ಮಂಟಪ, ಸ್ವಾತಂತ್ರ್ಯ ಚಳುವಳಿ, ಸಂವಿಧಾನ, ಸಂಸತ್ ಭವನ ಎಲ್ಲವನ್ನು ಸುಂದರವಾಗಿ ವಿನ್ಯಾಸಗೊಳಿಸುವ ಮೂಲಕ ಪ್ರಪಂಚಕ್ಕೆ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆ ಬಗ್ಗೆ ವಿವರಿಸಲಾಗಿದೆ ಎಂದು ಪ್ರಶಂಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಕೆ ಎಂ ಗಾಯಿತ್ರಿ, ತೋಟಗಾರಿಕೆ ಉಪನಿರ್ದೇಶಕ ಮಂಜುನಾಥ್, ಹಿರಿಯ ಸಹಾಯಕ ನಿರ್ದೇಶಕ ಹಬೀಬಾ ನಿಶಾತ್ ಸೇರಿದಂತೆ ಹಲವರು ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...