ಪ್ರಧಾನಮಂತ್ರಿ ಗ್ರಾಮೀಣ ಅವಾಸ್ ಯೋಜನೆಗೆ ವಾರದಲ್ಲಿ ಫಲಾನುಭವಿಗಳ ಪಟ್ಟಿ ಕೊಡಲು ಸಚಿವ ಜಮೀರ್ ಸೂಚನೆ

Date:

  • ಗ್ರಾಮಸಭೆ, ಶಾಸಕರ ಸಮಿತಿಯಿಂದ 2.90 ಲಕ್ಷ ಫಲಾನುಭವಿಗಳ ಆಯ್ಕೆ ಆಗಬೇಕಿದೆ
  • ಜುಲೈ 20 ಕ್ಕೆ ಫಲಾನುಭವಿಗಳ ಪಟ್ಟಿ ಅಂತಿಮಗೊಳಿಸಲು ಡೆಡ್ ಲೈನ್ ನೀಡಲಾಗಿದೆ

ಪ್ರಧಾನಮಂತ್ರಿ ಗ್ರಾಮೀಣ ಅವಾಜ್ ಯೋಜನೆಯಡಿ ಗ್ರಾಮೀಣ ಭಾಗದ ವಸತಿ ರಹಿತರಿಗೆ ಮನೆ ಕಟ್ಟಿಸಿಕೊಡುವ ಯೋಜನೆಗೆ ಗ್ರಾಮಸಭೆಗಳಿಂದ ಒಂದು ವಾರದಲ್ಲಿ ಫಲಾನುಭವಿಗಳ ಪಟ್ಟಿ ಅಂತಿಮಗೊಳಿಸಿ ಕಳುಹಿಸುವಂತೆ ವಸತಿ ಸಚಿವ ಜಮೀರ್ ಅಹಮದ್ ಖಾನ್ ನಿರ್ದೇಶನ ನೀಡಿದ್ದಾರೆ.

ಕೇಂದ್ರ ಪುರಸ್ಕೃತ ಯೋಜನೆಯಡಿಯಲ್ಲಿ ರಾಜ್ಯಕ್ಕೆ 1.41 ಲಕ್ಷ ಮನೆ ಹಂಚಿಕೆಯಾಗಿದ್ದು ಇದುವರೆಗೂ 63 ಸಾವಿರ ಮನೆಗೆ ಫಲಾನುಭವಿಗಳ ಆಯ್ಕೆಯಾಗಿದ್ದು ಉಳಿದ 78 ಸಾವಿರ ಮನೆಗಳಿಗೆ ಫಲಾನುಭವಿಗಳ ಆಯ್ಕೆ ಮಾಡಬೇಕಾಗಿದೆ. ಸಂಬಂಧಪಟ್ಟ ಶಾಸಕರು ಈ ಬಗ್ಗೆ ಗಮನಹರಿಸಿ ತಕ್ಷಣ ಗ್ರಾಮ ಸಭೆಗಳಿಂದ ಫಲಾನುಭವಿಗಳ ಪಟ್ಟಿ ಅಂತಿಮಗೊಳಿಸಲು ಖುದ್ದು ಆಸಕ್ತಿ ವಹಿಸಬೇಕು ಎಂದು ಹೇಳಿದ್ದಾರೆ.

ಈಗಾಗಲೇ ಯೋಜನೆಯ ಫಲಾನುಭವಿಗಳ ಆಯ್ಕೆಗೆ ಎರಡು ಬಾರಿ ಗಡುವು ವಿಸ್ತರಣೆ ಮಾಡಿದ್ದರೂ ಪಟ್ಟಿ ನೀಡಿಲ್ಲ. ಇದೀಗ ಜುಲೈ 20 ಕ್ಕೆ ಪಟ್ಟಿ ಅಂತಿಮಗೊಳಿಸಲು ಡೆಡ್ ಲೈನ್ ನೀಡಲಾಗಿದೆ. ಹೀಗಾಗಿ ಇದುವರೆಗೆ ಪಟ್ಟಿ ಅಂತಿಮಗೊಳಿಸದ ಶಾಸಕರು ಕೂಡಲೇ ಕ್ರಮ ವಹಿಸಬೇಕು. ಇಲ್ಲದಿದ್ದರೆ ಯೋಜನೆ ಕೇಂದ್ರಕ್ಕೆ ವಾಪಸ್ ಹೋಗಲಿದೆ ಎಂದು ಸಚಿವರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿ ಎಂಬ ಗ್ರೇಟ್ ಇಂಡಿಯನ್ ವಾಶಿಂಗ್ ಮಶೀನ್!

ಗ್ರಾಮೀಣ ಭಾಗದಲ್ಲಿ ವಸತಿ ರಹಿತರ ಪಟ್ಟಿ ಸಿದ್ದಪಡಿಸಿ ಯೋಜನೆಗೆ ಅರ್ಹತೆ ಪಡೆದಿರುವವರನ್ನು ಗುರುತಿಸಲಾಗಿದೆ. ಅ ಪಟ್ಟಿಯಲ್ಲಿ ಹಂಚಿಕೆಗೆ ನಿಗದಿಯಾಗಿರುವ ಮನೆಗಳ ಸಂಖ್ಯೆಯಷ್ಟು ಫಲಾನುಭವಿಗಳ ಆಯ್ಕೆ ಆಗಬೇಕಾಗಿದೆ. ಗ್ರಾಮಸಭೆಗಳಿಗೆ ಈ ಕುರಿತು ಶಾಸಕರು ಸೂಚನೆ ನೀಡಿ ಒಂದು ವಾರದಲ್ಲಿ ಪಟ್ಟಿ ಅಂತಿಮಗೊಳಿಸಿದರೆ ಯೋಜನೆಯ ಲಾಭ ರಾಜ್ಯದ ವಸತಿ ರಹಿತರಿಗೆ ಸಿಗುತ್ತದೆ. ಆನ್ ಲೈನ್ ಮೂಲಕವೇ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ಸಚಿವರು ಹೇಳಿದ್ದಾರೆ.

ಈ ಯೋಜನೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ 60:40 ಅನುದಾನ ನೀಡಲಿದೆ. ಸಾಮಾನ್ಯ ವರ್ಗಕ್ಕೆ ಒಂದು ಲಕ್ಷದ ಮೂರು ಸಾವಿರ ರೂ. ಎಸ್ಸಿ ಎಸ್ಟಿ ಸಮುದಾಯಕ್ಕೆ ಒಂದು ಲಕ್ಷ ಇಪ್ಪತ್ತು ಸಾವಿರ ರೂ. ಸಬ್ಸಿಡಿ ಸಿಗಲಿದ್ದು, 150 ರಿಂದ 700 ಚದರಡಿವರೆಗೆ ವೈಯಕ್ತಿಕ ಮನೆ ನಿರ್ಮಾಣ ಮಾಡಿ ಕೊಡಲಾಗುವುದು ಎಂದು ಸಚಿವ ಜಮೀರ್ ಅಹಮದ್ ಖಾನ್ ಮಾಹಿತಿ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...