ಚಾಮರಾಜನಗರ | ಕಿತ್ತೂರು ರಾಣಿ ಚನ್ನಮ್ಮ ಶಾಲೆಗೆ ದಿಡೀರ್ ಭೇಟಿ ನೀಡಿದ ಸಚಿವ ಮಹದೇವಪ್ಪ

Date:

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ತಾಲ್ಲೂಕು ಬೇಗೂರಿನ ಕಿತ್ತೂರು ರಾಣಿ ವಸತಿ ಶಾಲೆಗೆ ಸಮಾಜ ಕಲ್ಯಾಣ ಇಲಾಖೆ ಹಾಗೂ ಮೈಸೂರು ಉಸ್ತುವಾರಿ ಸಚಿವರಾದ ಡಾ. ಹೆಚ್. ಸಿ. ಮಹದೇವಪ್ಪ ದಿಡೀರ್ ಭೇಟಿ ನೀಡಿ ಪರಿಶೀಲನೆ ಮಾಡಿದರು.

ಈ ವೇಳೆ ವಿದ್ಯಾರ್ಥಿನಿಲಯಕ್ಕೆ ತೆರಳಿದ ಸಚಿವರು, ವಿದ್ಯಾರ್ಥಿಗಳ ವಾಸದ ಕೊಠಡಿ, ಶೌಚಾಲಯ ವೀಕ್ಷಿಸಿ ನೈರ್ಮಲ್ಯ ಪರಿಶೀಲಿಸಿದ ಸಂತರ ಶಾಲೆಯಲ್ಲಿ ದೊರಕುತ್ತಿರುವ ಸೌಲಭ್ಯಗಳು ಹಾಗೂ ಬೋಧನೆ ಕುರಿತು ವಿದ್ಯಾರ್ಥಿಗಳೊಂದಿಗೆ ಚರ್ಚಿಸಿದರು.

ಶಿಕ್ಷಕರು ಉತ್ತಮವಾಗಿ ಕಲಿಸುತ್ತಿದ್ದಾರೆಯೇ? ರುಚಿಕರವಾದ ತಿಂಡಿ, ಊಟ ನೀಡುತ್ತಿದ್ದಾರಾ? ವಾಸದ ಕೊಠಡಿಯಲ್ಲಿ ಆರಾಮದಾಯಕವಾಗಿ ಇರಬಹುದಾ? ಶೌಚಾಲಯವು ಯಾವಾಗಲೂ ಶುಚಿತ್ವವಾಗಿರುತ್ತದಾ? ಏನಾದರೂ ಸಮಸ್ಯೆ ಇದಿಯಾ ಎಂದು ಮಕ್ಕಳನ್ನು ಪ್ರಶ್ನಿಸಿ, ಪ್ರತಿಕ್ರಿಯೆ ಪಡೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಳಿಕ ಭೋಜನಾಲಯಕ್ಕೆ ಭೇಟಿ ನೀಡಿ ದಾಸ್ತಾನು ಕೊಠಡಿ ಪರಿಶೀಲಿಸಿದರು‌. ಚಹಾ ಸವಿಯುತ್ತಾ ಮಾತನಾಡಿ, ಗ್ರಾಮೀಣ ಭಾಗದ ಅನೇಕ ಮಕ್ಕಳು ಕಲಿಯಲು ಇಲ್ಲಿಗೆ ಬರುತ್ತಾರೆ. ನಿಲಯಪಾಲಕರು ಪ್ರೀತಿಯಿಂದ ನೋಡಿಕೊಳ್ಳಬೇಕು. ಶಿಕ್ಷಕರು ತಮಗೆ ನೀಡಿರುವ ವಸತಿ ಗೃಹದಲ್ಲಿ ಕಡ್ಡಾಯವಾಗಿ ಇರಬೇಕು. ಮಕ್ಕಳ ಆರೋಗ್ಯದಲ್ಲಿ ಜಾಗರೂಕತೆ ವಹಿಸಬೇಕು ಎಂದು ಸೂಚಿಸಿದರು.

ಶಿಕ್ಷಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು. ಪಠ್ಯೇತರ ಚಟುವಟಿಕೆಯಲ್ಲಿ ಮಕ್ಕಳು ಹೆಚ್ಚಾಗಿ ಭಾಗವಹಿಸುವಂತೆ ಪ್ರೇರಿಪಿಸಿ, ಮೆನು ಚಾರ್ಟ್ ಪ್ರಕಾರವೇ ಮಕ್ಕಳಿಗೆ ಊಟ, ತಿಂಡಿ ವಿತರಿಸಬೇಕು. ಒಟ್ಟಾರೆ‌ ಮನೆಗಿಂತಲೂ ವಸತಿ ಶಾಲೆಯಲ್ಲಿ ಉತ್ತಮ ವಾತಾವರಣ ನಿರ್ಮಿಸಬೇಕೆಂದು ಸಲಹೆ ನೀಡಿದರು.

ವಸತಿ ಶಾಲೆಯ ಭೋಜನಾಲಯ, ಶೌಚಾಲಯಗಳು ಹಾಗೂ ಆವರಣವು ನೈರ್ಮಲ್ಯದಿಂದ ಕೂಡಿರಬೇಕು. ಪ್ರತಿದಿನ ಮುಂಜಾನೆ ಯೋಗ, ವ್ಯಾಯಾಮ, ಧ್ಯಾನವನ್ನು ಅಭ್ಯಾಸ ಮಾಡಿಸಬೇಕು. ಮಕ್ಕಳಿಗೆ ಆರೋಗ್ಯ ಕುರಿತು ಅವರಲ್ಲಿ ಜಾಗೃತಿ ಮೂಡಿಸಬೇಕು ಎಂದು ಸಂಬಂಧಿಸಿದವರಿಗೆ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಬೈಕ್, ಟ್ಯಾಕ್ಸಿ ನಿಷೇಧ ವಾಪಸ್ ಪಡೆಯುವಂತೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ

ಈ ಸಂದರ್ಭದಲ್ಲಿ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಗೋಪಾಲ್ ಹೊರೆಯಾಲ, ರವಿಕುಮಾರ್, ಆಪ್ತ ಸಹಾಯಕ ಶ್ರೀನಿವಾಸ್ ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...