ಗುಬ್ಬಿ ರೈಲ್ವೆ ನಿಲ್ದಾಣ ಮೇಲ್ದರ್ಜೆಗೇರಿಸಲು ಪರಿಶೀಲಿಸಿದ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ

Date:

ಗುಬ್ಬಿ ಪಟ್ಟಣದ ನಾಗರೀಕರ ಮನವಿ ಮೇರೆಗೆ ರೈಲ್ವೆ ನಿಲ್ದಾಣ ಮೇಲ್ದರ್ಜೆಗೇರಿಸಲು ಹಾಗೂ ಅತ್ಯವಶ್ಯ ಮೇಲ್ಸೇತುವೆ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ ನಡೆಸಿದ ಕೇಂದ್ರದ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಶೀಘ್ರದಲ್ಲಿ ಎಲ್ಲಾ ಬೇಡಿಕೆಗೆ ಅನುಗುಣವಾಗಿ ಅಭಿವೃದ್ದಿ ಕೆಲಸ ಮಾಡುವುದಾಗಿ ಭರವಸೆ ನೀಡಿದರು.

ಸಂಜೆ ರಾಷ್ಟ್ರೀಯ ಹೆದ್ದಾರಿ ಸರ್ವೀಸ್ ರಸ್ತೆ ಕಾಮಗಾರಿ ವೀಕ್ಷಿಸಿ ನಂತರ ಗುಬ್ಬಿ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ಅತ್ಯಾಧುನಿಕ ನಿಲ್ದಾಣ ಮರು ನಿರ್ಮಾಣ ಮಾಡಲು ಉನ್ನತೀಕರಣಕ್ಕಾಗಿಯೇ ವಿಶೇಷ ಅನುದಾನ ಅಂದಾಜು 35 ಕೋಟಿ ವ್ಯಯ ಮಾಡಿ ನಿಲ್ದಾಣಕ್ಕೆ ಶ್ರೀ ಚನ್ನಬಸವೇಶ್ವರ ಸ್ವಾಮಿ ಹೆಸರು ನಾಮಕರಣ ಮಾಡುವುದಾಗಿ ತಿಳಿಸಿದರು.

ಪಟ್ಟಣದಿಂದ ಚೇಳೂರು ರಸ್ತೆ ಮಾರ್ಗ ಸೇರಲು ಅಂಡರ್ ಪಾಸ್ ರಸ್ತೆ ನಾಗರೀಕರ ಶಾಪಕ್ಕೆ ಗುರಿಯಾಗಿತ್ತು. ಈ ಹಿನ್ನಲೆ ಫ್ಲೈ ಓವರ್ ರಸ್ತೆ ನಿರ್ಮಾಣಕ್ಕೆ ಅಧಿಕಾರಿಗಳಿಗೆ ಸೂಚಿಸಿದ್ದೆ. ರೈಲ್ವೆ ಬೋರ್ಡ್ ಅಧಿಕಾರಿಗಳು ನಿಯಮಾನುಸಾರ 5.5 ಮೀಟರ್ ರಸ್ತೆಗೆ ನಕ್ಷೆ ತಯಾರಿಸಿದ್ದಾರೆ. ಆದರೆ ಸಾರ್ವಜನಿಕರ ಹಿತಕ್ಕೆ 7.5 ಮೀಟರ್ ರಸ್ತೆ ಸೇತುವೆ ನಿರ್ಮಾಣಕ್ಕೆ ಸೂಚಿಸಿದ್ದು ವರ್ಷದಲ್ಲಿ ಈ ಕೆಲಸ ಪೂರ್ಣ ಮಾಡಿಕೊಡುವ ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾಲ್ಕು ತಿಂಗಳಲ್ಲಿ ಸಾಕಷ್ಟು ಕೆಲಸ ಮಾಡಿದ್ದೇನೆ. ಪ್ರಧಾನಮಂತ್ರಿ ರೋಜಗಾರ್ ಯೋಜನೆಯಡಿ ಕೆಲಸಗಳು ಜಿಲ್ಲೆಯಲ್ಲಿ ನಡೆಸುತ್ತೇನೆ. ಹೆದ್ದಾರಿ ಅಭಿವೃದ್ಧಿ ಬಗ್ಗೆ ಕೇಂದ್ರದಲ್ಲಿ ಗಟ್ಕರಿ ಅವರೊಂದಿಗೆ ಚರ್ಚಿಸುತ್ತೇನೆ. ಗಣಿಬಾಧಿತ ಪ್ರದೇಶ ಅಭಿವೃದ್ಧಿಗೆ ಮೀಸಲಿನ ಅನುದಾನ ಬಳಕೆ ಹಾಗೂ ನರೇಗಾ ಯೋಜನೆ ಹೀಗೆ ಎಲ್ಲಾ ಅನುದಾನ ಬಳಕೆ ಮಾಡಿ ವರ್ಷದಲ್ಲಿ ನನ್ನ ಹೆಜ್ಜೆ ಗುರುತು ಕೆಲಸದ ಮೂಲಕ ಲೆಕ್ಕ ನೀಡುತ್ತೇನೆ ಎಂದ ಅವರು ಸ್ಥಳೀಯ ತೊರೇಹಳ್ಳಿ ಗ್ರಾಮದ ಅಣೆ ರಸ್ತೆಗೆ ಅವಶ್ಯ ಸೇತುವೆ ನಿರ್ಮಾಣಕ್ಕೆ ಗ್ರಾಮಸ್ಥರಿಂದ ಅರ್ಜಿ ಬಂದಿದೆ. ಈ ಕಾರ್ಯ ಕೂಡಾ ಶೀಘ್ರ ಮಾಡಿಸುವ ಭರವಸೆ ನೀಡಿದರು.

ತುಮಕೂರು ನಗರದಿಂದ ಗುಬ್ಬಿಗೆ ಬರುವ ಮಾರ್ಗ ಮಧ್ಯೆ ಕಳ್ಳಿಪಾಳ್ಯ ಗ್ರಾಮಸ್ಥರು ಹೆದ್ದಾರಿ ಪಕ್ಕದಲ್ಲಿ ಗ್ರಾಮ ಸಂಪರ್ಕ ರಸ್ತೆ ನಿರ್ಮಾಣಕ್ಕೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಾಜಿ ಸಂಸದ ಜಿ.ಎಸ್.ಬಸವರಾಜು, ಮುಖಂಡರಾದ ಎಸ್. ಡಿ.ದಿಲೀಪ್ ಕುಮಾರ್, ಜಿ.ಎನ್.ಬೆಟ್ಟಸ್ವಾಮಿ, ಬಿ.ಎಸ್.ನಾಗರಾಜು, ಪಿ.ಬಿ.ಚಂದ್ರಶೇಖರ್ ಬಾಬು, ಎನ್.ಸಿ.ಪ್ರಕಾಶ್, ಜಿ.ಆರ್.ಶಿವಕುಮಾರ್, ಹಿತೇಶ್, ಸುರೇಶ್ ಗೌಡ, ರೈಲ್ವೆ ಉನ್ನತ ಅಧಿಕಾರಿಗಳಾದ ತ್ರಿನೇತ್ರ, ರಾಜುಶರ್ಮ, ಹರೀಶ್ ಗುಪ್ತಾ, ಗುಲ್ ಅಶ್ರಫ್ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...