ರಾಜ್ಯೋತ್ಸವದಂದು ಕನ್ನಡ ಶಾಲೆಗೆ ನೆರವಿನ ಹಸ್ತ ಚಾಚಿದ ‘ಸಂತೋಷ್ ಲಾಡ್ ಫೌಂಡೇಶನ್’

Date:

ಬೆಂಗಳೂರು ದಕ್ಷಿಣ ಜಿಲ್ಲೆ ಆನೇಕಲ್‌ ತಾಲೂಕಿನ ಹೆಬ್ಬಗೋಡಿಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಸಂತೋಷ್‌ ಲಾಡ್‌ ಫೌಂಡೇಶನ್‌ ವತಿಯಿಂದ ಕ್ರೀಡಾ ಪರಿಕರಗಳನ್ನು ನೀಡಲಾಗಿದೆ.

ಶಾಲೆಯಲ್ಲಿ ಕ್ರೀಡಾ ಪರಿಕರಗಳು ಇಲ್ಲದೆ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿರುವ ಶಾಲೆಯ ಹಳೆಯ ವಿದ್ಯಾರ್ಥಿಯೊಬ್ಬರು ಸಂತೋಷ್‌ ಲಾಡ್‌ ಫೌಂಡೇಶನ್‌ಗೆ ಮನವಿ ಮಾಡಿಕೊಂಡಿದ್ದರು. ಇದಕ್ಕೆ ಸ್ಪಂದಿಸಿರುವ ಫೌಂಡೇಶನ್‌ ಶಾಲೆಗೆ ಮಕ್ಕಳಿಗೆ ಅಗತ್ಯವಾಗಿ ಬೇಕಾದ ಎಲ್ಲಾ ಸಾಮಗ್ರಿಗಳನ್ನು ನೀಡಿ ಅನುಕೂಲ ಮಾಡಿಕೊಟ್ಟಿದೆ.

ನೂರು ವರ್ಷ ಹಳೆಯ ಈ ಶಾಲೆಯಲ್ಲಿ ಪ್ರತಿಭಾವಂತರ ಮಕ್ಕಳಿದ್ದು, ಕ್ರೀಡೆಯಲ್ಲೂ ಸಾಕಷ್ಟು ಚಟುವಟಿಕೆಗೆ ಹೆಸರು ಮಾಡಿತ್ತು. ಆದರೆ ವಿದ್ಯಾರ್ಥಿಗಳಿಗೆ ಕ್ರೀಡಾ ಸಾಮಗ್ರಿಗಳ ಕೊರತೆಯಿಂದ ತೊಂದರೆಯಾಗಿತ್ತು. ಇದೀಗ ಸಂತೋಷ್‌ ಲಾಡ್‌ ಫೌಂಡೇಶನ್‌ ಇವರಿಗೆ ಅನುಕೂಲ ಮಾಡಿಕೊಟ್ಟಿದೆ. ಕರ್ನಾಟಕ ರಾಜ್ಯೋತ್ಸವದ ದಿನವೇ ಕ್ರೀಡಾ ಸಾಮಗ್ರಿಗಳನ್ನು ವಿತರಿಸಿ ಶಾಲೆಯಲ್ಲಿನ ಸಂಭ್ರಮವನ್ನು ಇನ್ನಷ್ಟು ಹೆಚ್ಚಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನೂರು ವರ್ಷ ಹಳೆಯ ಈ ಶಾಲೆಯಲ್ಲಿ ಸದ್ಯ 1200 ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದಾರೆ. ಇಷ್ಟು ಮಕ್ಕಳಿದ್ದರೂ ಸರಿಯಾದ ಕ್ರೀಡಾ ಸಾಮಗ್ರಿಗಳು ಇರಲಿಲ್ಲ. ಬೆಂಗಳೂರಿನಲ್ಲೇ ಅತ್ಯುತ್ತಮ ಶಾಲೆ ಎಂಬ ಹೆಸರನ್ನೂ ಈ ಶಾಲೆ ಪಡೆದಿತ್ತು. ಇತ್ತೀಚೆಗೆ ದೈಹಿಕ ಶಿಕ್ಷಣ ಶಿಕ್ಷಕರಿಲ್ಲದೆ ಸಮಸ್ಯೆಯಾಗಿತ್ತು. ಈಗ ಶಿಕ್ಷಕರನ್ನು ನಿಯೋಜಿಸಲಾಗಿತ್ತು. ಆದರೆ ಕ್ರೀಡೆಗೆ ಪರಿಕರಗಳಿರಲಿಲ್ಲ. ಇದೀಗ ಸಂತೋಷ್‌ ಲಾಡ್‌ ಫೌಂಡೇಶನ್‌ ಇದೆಲ್ಲದಕ್ಕೆ ಪರಿಹಾರ ಒದಗಿಸಿದೆ ಎಂದು ಶಾಲಾ ಮಂಡಳಿ ಸಂತಸ ವ್ಯಕ್ತಪಡಿಸಿದೆ.

ಮಕ್ಕಳ ಸಹಾಯಕ್ಕೆ ಮುಂದಾದ ಹಳೇ ವಿದ್ಯಾರ್ಥಿ: ಈ ಶಾಲೆಯಲ್ಲಿ ಕ್ರೀಡಾ ಸಾಮಗ್ರಿಗಳು ಇಲ್ಲ ಎಂಬುದನ್ನು ತಿಳಿದ ಹಳೆಯ ವಿದ್ಯಾರ್ಥಿ ಕುಮಾರ್‌ ಎಂಬುವರು ಮಕ್ಕಳಿಗೆ ಏನಾದರೂ ಸಹಾಯ ಮಾಡಬೇಕು ಎಂದು ಯೋಚಿಸಿದರು. ಆಗ ಅವರಿಗೆ ನೆನಪಿಗೆ ಬಂದಿದ್ದೇ ಸಂತೋಷ್‌ ಲಾಡ್‌ ಫೌಂಡೇಶನ್‌. ಫೌಂಡೇಶನ್‌ ಹಲವಾರು ಸಾಮಾಜಿಕ ಸೇವಾ ಕಾರ್ಯಗಳನ್ನು ಮಾಡುವುದನ್ನು ಸಾಮಾಜಿಕ ಮಾಧ್ಯಮದ ಮೂಲಕ ತಿಳಿದ ಅವರು, ಫೌಂಡೇಶನ್‌ ಸಂಪರ್ಕ ಮಾಡಿದರು. ಸದ್ಯ ಬೆಂಗಳೂರಿನ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಕುಮಾರ್‌ ಅವರು ಈ ಶಾಲೆಯಲ್ಲಿ ಹೈಸ್ಕೂಲ್‌ ವರೆಗೆ ಓದಿದ್ದಾರೆ. ತಾನು ಓದಿದ ಶಾಲಾ ಮಕ್ಕಳಿಗೆ ಸಹಾಯ ಮಾಡಬೇಕು ಎಂಬ ಅವರ ಆಸೆಗೆ ಫೌಂಡೇಶನ್‌ ಬೆಂಬಲ ನೀಡಿತು.

ಸಾಕಷ್ಟು ಸಹಾಯ ಮತ್ತು ಒಳ್ಳೆಯದಾಯಿತು: ಸಂತೋಷ್‌ ಲಾಡ್‌ ಫೌಂಡೇಶನ್‌ ಸಂಪರ್ಕ ಮಾಡಿದಾಗ ಅವರು ಸಕಾರಾತ್ಮಕವಾಗಿ ಸ್ಪಂದಿಸಿದರು. ಮಕ್ಕಳಿಗೆ ಅತ್ಯುತ್ತಮವಾದ ಕ್ರೀಡಾ ಸಾಮಗ್ರಿಗಳು ಹಾಗೂ ಇತರೆ ಪರಿಕರಗಳನ್ನು ನೀಡಿದರು. ಇದರಿಂದ ಮಕ್ಕಳಿಗೆ ಅನುಕೂಲವಾಗಿದೆ. ಸಂತೋಷ್‌ ಲಾಡ್‌ ಫೌಂಡೇಶನ್‌ ಸಹಕಾರವನ್ನು ಎಂದೂ ಮರೆಯಲಾಗದು ಎಂದು ಕುಮಾರ್‌ ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರು | ರಾಜ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಚೇರಿಯಲ್ಲಿ 70ನೇ ಕರ್ನಾಟಕ ರಾಜ್ಯೋತ್ಸವ

ಫೌಂಡೇಶನ್‌ ನೆರವನ್ನು ಸದಾ ಸ್ಮರಿಸುತ್ತೇವೆ: ನಮ್ಮ ಶಾಲೆಯ ಮಕ್ಕಳು ಸಾಕಷ್ಟು ಪ್ರತಿಭಾವಂತರು. ಇವರಿಗೆ ಕ್ರೀಡಾ ಸಾಮಗ್ರಿಗಳ ಅವಶ್ಯಕತೆ ಇತ್ತು. ಅದನ್ನು ಹಳೇ ವಿದ್ಯಾರ್ಥಿ ಸಂಘದೊಂದಿಗೆ ಚರ್ಚೆ ಮಾಡಿದೆವು. ಅವರು ಸಂತೋಷ್‌ ಲಾಡ್‌ ಫೌಂಡೇಶನ್‌ ಬಗ್ಗೆ ತಿಳಿಸಿದರು. ಈ ಸಾಕಷ್ಟು ಸಾಮಗ್ರಿಗಳು ಬಂದಿವೆ. ಸಚಿವ ಸಂತೋಷ್‌ ಲಾಡ್‌ ಅವರಿಗೆ ಧನ್ಯವಾದಗಳು. ಈ ನೆರವನ್ನು ನಾವು ಸದಾ ಸ್ಮರಿಸುತ್ತೇವೆ ಎಂದು ಶಿಕ್ಷಕಿ ಪವಿತ್ರಾ ತಿಳಿಸಿದ್ದಾರೆ.

ಸಂತೋಷ್‌ ಲಾಡ್‌ ಫೌಂಡೇಶನ್‌ ನೆರವಿನ ವ್ಯಾಪ್ತಿ ಇನ್ನಷ್ಟು ವಿಸ್ತಾರ: ಸಂತೋಷ್‌ ಲಾಡ್‌ ಫೌಂಡೇಶನ್‌ ಹಲವಾರು ಸಾಮಾಜಿಕ ಸೇವಾ ಕಾರ್ಯಗಳನ್ನು ಮಾಡುತ್ತಾ ಬರುತ್ತಿದೆ. ಜಿಲ್ಲೆಯ ವ್ಯಾಪ್ತಿಯ ಮಿತಿಯಿಲ್ಲದೆ ರಾಜ್ಯದ ವಿವಿಧ ಭಾಗದ ವಿದ್ಯಾರ್ಥಿಗಳಿಗೆ, ಜನರಿಗೆ ನೆರವು ಒದಗಿಸುತ್ತಿದೆ. ಇದೀಗ ಆನೇಕಲ್‌ ತಾಲೂಕಿನ ಶಾಲೆಗೆ ಕ್ರೀಡಾ ಸಾಮಗ್ರಿ ಒದಗಿಸುವುದರೊಂದಿಗೆ ಫೌಂಡೇಶನ್‌ ನೆರವಿನ ವ್ಯಾಪ್ತಿ ಇನ್ನಷ್ಟು ಹೆಚ್ಚಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...