ಮಂಡ್ಯ | ಯುವಕನ ಪ್ರೀತಿಗೆ ಬಿದ್ದಿದ್ದ ಅಪ್ರಾಪ್ತೆ ಆತ್ಮಹತ್ಯೆ; ಪೋಕ್ಸೋ ಪ್ರಕರಣ ದಾಖಲು

Date:

ಇತ್ತೀಚಿನ ದಿನಗಳಲ್ಲಿ ಮಂಡ್ಯ ಜಿಲ್ಲೆ ಸುದ್ದಿಯಾಗುತ್ತಲೇ ಇದೆ. ಹೆಣ್ಣು ಭ್ರೂಣ ಹತ್ಯೆ ದಂಧೆ, ಶಿಕ್ಷಕಿಯ ಕೊಲೆ, ಶ್ರೀರಂಗಪಟ್ಟಣದಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್‌ನ ಮುಸ್ಲಿಂ ಮಹಿಳೆಯರ ವಿರುದ್ಧದ ದ್ವೇಷ ಭಾಷಣ ಹಾಗೂ ಈಗ, ಕೆರಗೋಡಿನಲ್ಲಿ ಕೇಸರಿ ಕಾರ್ಯಕರ್ತರ ದಾಂಧಲೆಯಿಂದ ಮಂಡ್ಯ ಸುದ್ದಿಯಾಗುತ್ತದೆ. ಇದೆಲ್ಲದರ ನಡುವೆ, ಕಾಮುಕ ಯುವಕನ ಪ್ರೀತಿಗೆ ಬಿದ್ದು ಅಪ್ರಾಪ್ತ ಬಾಲಕಿಯೊಬ್ಬಳು ತನ್ನ ಬದುಕನ್ನೇ ಕೆಳೆದುಕೊಂಡಿರುವ ಹೃದಯ ವಿದ್ರಾವಕ ಘಟನೆಯೂ ಮಂಡ್ಯದಲ್ಲಿ ನಡೆದಿದೆ.

ಮಂಡ್ಯದ ಖಾಸಗಿ ಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಮುಸ್ಲಿಂ ಸಮುದಾಯದ ಬಾಲಕಿಯೊಬ್ಬಳು ಯುವಕನ ಪ್ರೀತಿಗೆ ಬಿದ್ದಿದ್ದಳು. ಆಕೆಯೊಂದಿಗೆ ಯುವಕ ದೈಹಿಕ ಸಂಬಂಧ ಬೆಳೆಸಿದ್ದ. ಪರಿಣಾಮ, ಆಕೆ ಗರ್ಭಿಣಿಯಾಗಿದ್ದಳು. ವಿಷಯ ಯಾರಿಗಾದರು ತಿಳಿದಿರೆ ಅಪಮಾನವಾಗುತ್ತದೆ ಎಂದು ಆಕೆ ಆತ್ಮಹತ್ಯೆ ಮಾಡಿಕೊಂಡು, ಕೊನೆಯುಸಿರೆಳೆದಿದ್ದಾಳೆ. ಜೀವನ ಆರಂಭಕ್ಕೂ ಮುನ್ನವೇ ಅಂತ್ಯಕಂಡಿದ್ದಾಳೆ.

ಆಕೆಯ ಸಾವಿಗೆ ಕಾರಣನಾದ ಶೇಖ್ ಅಕೀಬ್ ಎಂಬಾತನ ವಿರುದ್ಧ ಕ್ರಮ ಕೈಗೊಳ್ಳಬೇಕು. ಆತನನ್ನು ಬಂಧಿಸಬೇಕು. ಮಗಳ ಸಾವಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಬಾಲಕಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೋಷಕರ ದೂರಿನ ಪ್ರಕಾರ, “ಶೇಖ್‌ ಅಕೀಬ್ ಎಂಬಾತ ತನ್ನನ್ನು ಪ್ರೀತಿಸುವಂತೆ ಕಳೆದ 10 ತಿಂಗಳಿನಿಂದ ಬಾಲಕಿಯ ಬೆನ್ನತ್ತಿದ್ದ. ಪ್ರೀತಿಸದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ. ಕೈ ಕೊಯ್ದುಕೊಳ್ಳುತ್ತೇನೆಂದು ಬೆದರಿಸಿ ತನ್ನ ಪ್ರೀತಿಗೆ ಬೀಳಿಸಿಕೊಂಡಿದ್ದ. ಅಲ್ಲದೆ, ತನ್ನ ಕಾರಿನಲ್ಲಿ ಸುತ್ತಾಡಿಸುತ್ತಿದ್ದ” ಎಂದು ಆರೋಪಿಸಲಾಗಿದೆ.

“ಅದನ್ನು ಗಮನಿಸಿ, ಯುವಕನ ಮನೆಯರನ್ನು ಕರೆದು ಆತನಿಗೆ ಬುದ್ದಿ ಹೇಳುವಂತೆ ಹೇಳಿದ್ದೆವು. ನಮ್ಮ ಮಗಳಿಂದ ದೂರ ಉಳಿಯುವಂತೆ ಬುದ್ದಿ ಹೇಳಿದ್ದೆವು. ಆದರೂ, ಆತ ತನ್ನ ದುರ್ವರ್ತನೆ ಬದಲಾಯಿಸಿಕೊಳ್ಳದೆ ನನ್ನ ಅಪ್ರಾಪ್ತ ಮಗಳನ್ನು ಪೀಡಿಸುವುದು, ಛೇಡಿಸುವುದು, ಹಲವು ಫೋನ್‌ ನಂಬರ್‌ಗಳಿಂದ ಫೋನ್‌ ಮಾಡಿ ತೊಂದರೆ ಕೊಡುತ್ತಿದ್ದ. ಈ ಬಗ್ಗೆ ಈ ಹಿಂದೆಯೂ ಪೊಲೀಸರಿಗೆ ದೂರು ನೀಡಿದ್ದೆವು” ಎಂದು ತಿಳಿಸಿದ್ದಾರೆ.

yu
ಆರೋಪಿ ಶೇಖ್‌ ಅಕೀಬ್

ಇದೆಲ್ಲದರ ನಡುವೆ, ಬಾಲಕಿಯ ತಾಯಿಗೆ ಫೋನ್‌ ಪೇ ಮೂಲಕ 10,000 ರೂ. ಹಣವನ್ನೂ ಹಾಕಿದ್ದಾನೆ. ಆ ಮೂಲಕ ತನ್ನ ಪ್ರೀತಿಗೆ ಬಾಲಕಿಯ ತಾಯಿಯ ಬೆಂಬಲವೂ ಇತ್ತೆಂಬುದನ್ನು ತೋರಿಸಲು ಕುತಂತ್ರ ಹೆಣೆದಿದ್ದಾನೆ. ಅದರೆ, ಆತ ಹಣ ಹಾಕಿದ ಮರುಕ್ಷಣವೇ ಆತನಿಗೆ ಹಣವನ್ನು ವಾಪಸ್‌ ಹಾಕಿದ್ದಾರೆ. ಪದೇ-ಪದೇ ಹಣ ಹಾಕಿ ತೊಂದರೆ ಕೊಟ್ಟಿದ್ದಾನೆ.

“ಬಾಲಕಿಯನ್ನು ಕಾರಿನಲ್ಲಿ ಸುತ್ತಾಡಿಸಿ, ಪ್ರೀತಿಯ ಹೆಸರಿನಲ್ಲಿ ಆಕೆಯ ಜೊತೆ ದೈಹಿಕ ಸಂಬಂಧವನ್ನೂ ಬೆಳೆಸಿದ್ದಾನೆ. ಆಕೆ ಗರ್ಭಿಣಿಯಾಗಿದ್ದಾನೆ. ಇತ್ತೀಚೆಗೆ, ಆಕೆಯ ಚಲನ-ವಲನ ಬದಲಾಗಿತ್ತು. ಹೀಗಾಗಿ, ಅನುಮಾನಗೊಂಡು ಪರೀಕ್ಷಿಸಿದಾಗ ಆಕೆ ಗರ್ಭಿಣಿಯಾಗಿರುವುದು ಗೊತ್ತಾಯಿತು. ತಾನು ಗರ್ಭಿಣಿಯಾಗಿದ್ದೇನೆಂದು ತಿಳಿದ ಬಾಲಕಿ ಯಾರು ಇಲ್ಲಾದಾಗ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ” ಎಂದು ಪೋಷಕರು ತಿಳಿಸಿದ್ದಾರೆ.

ತಮ್ಮ ಮಗಳ ಸಾವಿಗೆ ನ್ಯಾಯ ಬೇಕೆಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆದರೆ, ಮೊದಲಿಗೆ ದೂರು ದಾಖಲಿಸಿಕೊಳ್ಳಲು ಪೊಲೀಸರು ಹಿಂದೇಟು ಹಾಕಿದ್ದರೆಂದು ಆರೋಪಿಸಲಾಗಿದೆ. ಸದ್ಯ, ಪೊಲೀಸ್‌ ಠಾಣೆಯಲ್ಲಿ ಆರೋಪಿ ಯುವಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...