ಬೆಂಗಳೂರು | ಮನೆಗೆ ಮರ ಅಡ್ಡಿ; ಬುಡಕ್ಕೆ ಆ್ಯಸಿಡ್ ಹಾಕಿದ ದುರುಳರು; ಇಬ್ಬರ ವಿರುದ್ಧ ಬಿಬಿಎಂಪಿಗೆ ಸ್ಥಳೀಯರ ದೂರು

Date:

ರಾಜಧಾನಿ ಬೆಂಗಳೂರಿಗೆ ‘ಉದ್ಯಾನನಗರಿ’ ಎಂಬ ಹೆಸರು ದೂರವಾಗುವ ಸಮಯ ಸನಿಹದಲ್ಲಿದೆ. ಅಭಿವೃದ್ಧಿ, ನಗರೀಕರಣ, ಆಧುನೀಕರಣದ ಹೆಸರಿನಲ್ಲಿ ಮರಗಳ ಮಾರಣಹೋಮ ನಡೆಯುತ್ತಲೇ ಇದೆ. ಹೀಗೀರುವಾಗ ಬೆಂಗಳೂರಲ್ಲಿ ಕೆಲವರು ಮನೆ ಮುಂಭಾಗ ಇರುವ ಮರಗಳಿಗೆ ಆ್ಯಸಿಡ್ ಹಾಕುತ್ತಿದ್ದಾರೆ.

ಮನೆ ಮುಂಭಾಗ ಮರದ ಎಲೆಗಳು ಬಿದ್ದು, ಗಲೀಜಾಗಿ ಕಾಣಿಸುತ್ತದೆ. ಮರದ ಕೊಂಬೆ ನಮ್ಮ ಮನೆಗೆ ಅಡ್ಡಲಾಗಿದೆ ಎಂದು ಮರಗಳನ್ನು ಕತ್ತರಿಸುವುದು, ಮರಕ್ಕೆ ಆ್ಯಸಿಡ್ ಹಾಕುವ ಕೆಲಸವನ್ನು ಮಾಡುತ್ತಿದ್ದಾರೆ. ಅಂಥದ್ದೇ ಘಟನೆ ಬೆಂಗಳೂರಿನ ಕೋಟೆ ಕಲಾಸಿಪಾಳ್ಯದ ಬಳಿ ಈ ದುಷ್ಟ ಕೃತ್ಯ ನಡೆದಿದ್ದು, ಮಧ್ಯರಾತ್ರಿ 1.30ರ ಸುಮಾರಿಗೆ ಮರದ ಬುಡಕ್ಕೆ ಆ್ಯಸಿಡ್ ಹಾಕುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ.

tree matter

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೋಟೆ ಕಲಾಸಿಪಾಳ್ಯದ ನಿವಾಸಿಗಳಾಗಿರುವ ವಾಸುದೇವ ರಾವ್ ಹಾಗೂ ಬಾಲಕೃಷ್ಣ ಎಂಬುವವರು ಈ ಕೃತ್ಯ ಎಸಗಿರುವುದಾಗಿ ಸ್ಥಳೀಯರು ಆರೋಪಿಸಿದ್ದು, ಸಿಸಿಟಿವಿಯನ್ನು ಪರಿಶೀಲಿಸಿದಾಗ ಇವರ ಕೃತ್ಯ ಬಯಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು(ಜ.12) ಬೆಳಗ್ಗೆ ಸ್ಥಳೀಯರು ಇವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅಲ್ಲದೇ, ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿ ದೂರು ಸಲ್ಲಿಸಿದ್ದು, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಬಿಬಿಎಂಪಿ ಅಧಿಕಾರಿಗಳು ವಿಚಾರ ತಿಳಿದ ಕೂಡಲೇ, ‘ಟ್ರೀ ಡಾಕ್ಟರ್’ ಖ್ಯಾತಿಯ ಬೆಂಗಳೂರಿನ ಪರಿಸರ ಹೋರಾಟಗಾರ ವಿಜಯ್ ನಿಶಾಂತ್ ಅವರನ್ನು ಸ್ಥಳಕ್ಕೆ ಕರೆಸಿ, ಆ್ಯಸಿಡ್ ದಾಳಿಗೊಳಗಾದ ಮರವನ್ನು ರಕ್ಷಿಸುವ ಕಾರ್ಯ ಮಾಡಿದ್ದಾರೆ.

ಘಟನೆಯ ಬಗ್ಗೆ ಈ ದಿನ.ಕಾಮ್ ಜೊತೆಗೆ ಮಾತನಾಡಿದ ಸ್ಥಳೀಯರಾದ ರಾಜು, “ಕಳೆದ ಎರಡು ಮೂರು ವರ್ಷಗಳ ಹಿಂದೆ ನಮ್ಮ ಪ್ರದೇಶದಲ್ಲಿ ಸ್ಥಳೀಯರೇ ಸೇರಿ ಸುಮಾರು 15ರಿಂದ 20 ಹೊಂಗೆ ಮರಗಳನ್ನು ನೆಟ್ಟಿದ್ದೇವೆ. ಅದಕ್ಕೆ ನೀರು ಹಾಕಿ, ತಡೆಬೇಲಿ ಹಾಕಿ ನಮ್ಮ ಮಕ್ಕಳಂತೆ ಅದನ್ನು ಪೋಷಿಸುತ್ತಿದ್ದೇವೆ. ಆದರೆ, ವಾಸುದೇವ ರಾವ್ ಹಾಗೂ ಬಾಲಕೃಷ್ಣ ಎಂಬುವವರು ರಾತ್ರಿಯ ವೇಳೆ ಬಂದು ಅದರ ಬುಡಕ್ಕೆ ಆ್ಯಸಿಡ್ ಹಾಕಿದ್ದಾರೆ. ಈ ಬಗ್ಗೆ ಅವರನ್ನು ಪ್ರಶ್ನಿಸಿದರೆ ಗೊತ್ತಿಲ್ಲ ಎನ್ನುತ್ತಿದ್ದಾರೆ. ಆದರೆ, ಅವರ ಕೃತ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಈ ಸಂಬಂಧ ಅರಣ್ಯಾಧಿಕಾರಿಗಳಿಗೆ ದೂರು ಕೊಟ್ಟಿದ್ದು, ಇಬ್ಬರ ವಿರುದ್ಧವೂ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದೇವೆ” ಎಂದು ಮಾಹಿತಿ ನೀಡಿದರು.

ಇತ್ತ ಮರಕ್ಕೆ ಮತ್ತೆ ಜೀವ ನೀಡುವ ಕೆಲಸವನ್ನು ‘ಟ್ರೀ ಡಾಕ್ಟರ್‌’ ವಿಜಯ್‌ ನಿಶಾಂತ್‌ ಮಾಡುತ್ತಿದ್ದಾರೆ. ಘಟನೆಯ ಬಗ್ಗೆ ಈ ದಿನ.ಕಾಮ್ ಜೊತೆಗೆ ಮಾತನಾಡಿದ ಅವರು, “ಎರಡು ಮರಕ್ಕೆ ಸ್ಥಳೀಯರಿಬ್ಬರು ಆ್ಯಸಿಡ್ ಹಾಕುವ ಮೂಲಕ ವಿಷವುಣಿಸಿದ್ದಾಗಿ ಮರವನ್ನು ಪೋಷಿಸುತ್ತಿರುವವರು ಆರೋಪಿಸಿದ್ದಾರೆ. ಇದೇ ರೀತಿಯ ಘಟನೆಗಳು ಈ ಹಿಂದೆ ಕೂಡ ಬೆಂಗಳೂರಿನಲ್ಲಿ ನಡೆದಿತ್ತು. ಕೆಲವನ್ನು ಈಗಾಗಲೇ ಪೋಷಣೆ ಮಾಡಿ ರಕ್ಷಿಸಿದ್ದೇವೆ. ಸಿಸಿಟಿವಿಯಲ್ಲಿ ಆ್ಯಸಿಡ್ ಹಾಕುತ್ತಿರುವುದು ದಾಖಲಾಗಿದೆ ಎಂದು ದೃಶ್ಯಗಳನ್ನು ತೋರಿಸಿದ್ದಾರೆ” ಎಂದು ತಿಳಿಸಿದರು.

vijay nishanth
‘ಟ್ರೀ ಡಾಕ್ಟರ್‌’ ವಿಜಯ್‌ ನಿಶಾಂತ್‌

“ಘಟನೆಯ ಸ್ಥಳದಲ್ಲಿ ಮಣ್ಣಿನ ಪರೀಕ್ಷೆ ನಡೆಸಿದಾಗ ಆ್ಯಸಿಡ್ ರೀತಿಯ ವಸ್ತು ಹಾಕಿರುವುದು ಪ್ರಾಥಮಿಕವಾಗಿ ತಿಳಿದುಬಂದಿದೆ. ಬುಡ ಸ್ವಲ್ಪ ಸುಟ್ಟು ಹೋದಂತಾಗಿದೆ. ಸದ್ಯ ಬುಡಕ್ಕೆ ಔಷಧಿ ಸಿಂಪಡಿಸಿ, ಬುಡಕ್ಕೆ ಮಣ್ಣು ತುಂಬಿದ್ದೇನೆ. ಮರಗಳಿಗೆ ಈ ರೀತಿಯ ದೌರ್ಜನ್ಯ ಎಸಗುವುದು ತಪ್ಪು. ಇಂತಹ ಘಟನೆ ಬೆಳಕಿಗೆ ಬಂದರೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು” ಎಂದು ‘ಟ್ರೀ ಡಾಕ್ಟರ್‌’ ವಿಜಯ್‌ ನಿಶಾಂತ್‌ ಸಾರ್ವಜನಿಕರಲ್ಲಿ ವಿನಂತಿಸಿದರು.

ಸುಮಾರು 2 ವರ್ಷದ ಹಳೆಯದಾದ ಹೊಂಗೆ ಮರದ ಬುಡಕ್ಕೆ ಆ್ಯಸಿಡ್ ಹಾಕಿ ಮರ ಒಣಗುವಂತೆ ಮಾಡಲಾಗಿದೆ. ಈ ರೀತಿ ಮರಗಳಿಗೆ ವಿಷವುಣಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸ್ಥಳೀಯರಿಂದ ಒತ್ತಾಯ ಕೇಳಿ ಬಂದಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...