ಕೊಡಗು | ಶಾಸಕ ಪೊನ್ನಣ್ಣ ಅವರಿಗೆ ಮಂತ್ರಿಗಿರಿ ಲಭಿಸುವ ವಿಶ್ವಾಸವಿದೆ: ಕೆಪಿಸಿಸಿ ವಕ್ತಾರ ಟಿ.ಎಂ ಶಹೀದ್

Date:

  • ಕಾಂಗ್ರೆಸ್‌ ನೀಡಿರುವ ಐದು ಗ್ಯಾರಂಟಿಗಳು ಖಂಡಿತವಾಗಿ ಈಡೇರಲಿವೆ
  • ಕೊಡಗಿನಲ್ಲಿ ನಡೆದಿರುವ ಅವ್ಯವಹಾರಗಳ ಬಗ್ಗೆ ತನಿಖೆ ಆಗಬೇಕು

ರಾಜ್ಯ ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್‌ ನೀಡಿರುವ ಐದು ಗ್ಯಾರಂಟಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಖಂಡಿತವಾಗಿಯೂ ಈಡೇರಿಸುತ್ತೇವೆ ಎಂದು ಕೆಪಿಸಿಸಿ ವಕ್ತಾರ ಟಿ.ಎಂ ಶಹೀದ್ ಹೇಳಿದರು.

ಮಡಿಕೇರಿ ನಗರದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, “ಕೊಡಗು ಜಿಲ್ಲೆಯಲ್ಲಿ ಎ.ಎಸ್ ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ಲಭಿಸುವ ವಿಶ್ವಾಸವಿದೆ” ಎಂದರು.

“ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಲಭಿಸಿರುವ ಅಭೂತಪೂರ್ವ ಫಲಿತಾಂಶ ಮುಂಬರುವ 2024ರ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ. ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಹೆಚ್ಚು ಮಂದಿ ಕಾಂಗ್ರೆಸ್‌ ಸಂಸದರು ಆಯ್ಕೆಯಾಗಿ ಪಾರ್ಲಿಮೆಂಟ್‌ಗೆ ಹೋಗಲಿದ್ದಾರೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಲ್ಪಸಂಖ್ಯಾತ ಸಮುದಾಯದ ಯುವಕರು ಯಾರ ವಂಚನೆ ಕುತಂತ್ರಕ್ಕೆ ಬಲಿಯಾಗ ಬಾರದು. ಸಾಮಾಜಿಕ ಜಾಲತಾಣಗಳಾಸ ಫೇಸ್‌ಬುಕ್‌, ವಾಟ್ಸ್‌ ಆಪ್‌ಗಳಲ್ಲಿ ಬರುವಂತಹ, ಬರಹ, ಸಂದೇಶಗಳ ಪ್ರಚೋದನೆಗೆ ಕಿವಿಗೊಡಬಾರದು” ಎಂದು ಸಲಹೆ ನೀಡಿದರು.

“ವಿಜಯೋತ್ಸವ ಸಂಧರ್ಭದಲ್ಲಿ ವ್ಯೆಕ್ತಿಯೊಬ್ಬರು  ಇಸ್ಲಾಮೀ ಧ್ವಜವನ್ನು ಪ್ರದರ್ಶಿಸಿದಾಗ ಸಂಘಪರಿವಾರ ಅದನ್ನು ಪಾಕಿಸ್ಥಾನದ ದ್ವಜ ಎಂದು ಬಿಂಬಿಸಿ ಗಲಬೆಯ ಹುನ್ನಾರಕ್ಕೆ ಯತ್ನಿಸಿತ್ತು. ಇಂತಹದಕ್ಕೆ ಅವಕಾಶ ಮಾಡಬಾರದು” ಎಂದು ಮನವಿ ಮಾಡಿದರು.

“ಮುಸ್ಲಿಂ ಸಮುದಾಯದಲ್ಲಿ ಕೂಡ ಕೆಲವು ಕೋಮುವಾದಿ ಗಳಿದ್ದಾರೆ. ಇದನ್ನು ಅರಿತು ಸೌಹಾರ್ದದಲ್ಲಿ  ಬದುಕಬೇಕು. ಕೋಮು ಸಂಘರ್ಷದ ವಾತಾವರಣವನ್ನು ಸೃಷ್ಟಿಸುವ ಮೂಲಕ ಕರ್ನಾಟಕದಲ್ಲಿ ಅಧಿಕಾರ ಹಿಡಿಯಲು ಹೊರಟ ಭಾರತಿಯ ಜನತಾ ಪಕ್ಷಕ್ಕೆ ಕನ್ನಡ ನಾಡಿನ ಜನತೆ ಅತ್ಯುತ್ತಮ ಗದ ಪ್ರಹಾರ ಮಾಡಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ದ. ಕನ್ನಡ | ಕಟೀಲ್‌ ಬ್ಯಾನರ್‌ಗೆ ಚಪ್ಪಲಿ ಹಾರ ಪ್ರಕರಣ; ಆರೋಪಿಗಳಿಗೆ ಥಳಿಸಿದ್ದ ಪಿಎಸ್‌ಐ, ಪೇದೆ ಅಮಾನತು

“ಕೊಡಗಿನಲ್ಲಿ ನಡೆದಿರುವ ಅವ್ಯವಹಾರಗಳ ಬಗ್ಗೆ ತನಿಖೆ ಆಗಬೇಕು. ರಾಜ್ಯದಲ್ಲಿ ನಡೆದಿರುವ ಕಾಮಗಾರಿ ಹಾಗೂ ಇತರ ಜನ ಕಲ್ಯಾಣ ಯೋಜನೆಗಳ ಅವ್ಯವಹಾರಗಳ ಬಗ್ಗೆ ಹಾಗೂ ಕೊಡಗು ಜಿಲ್ಲಾಧಿಕಾರಿ ಕಚೇರಿ ಬಳಿಯ ತಡೆಗೋಡೆ ಕಳಪೆ ಕಾಮಗಾರಿಯ ಬಗ್ಗೆ ಸೂಕ್ತ ತನಿಖೆ ಮಾಡಿಸಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಜಿಲ್ಲಾ ಅಧ್ಯಕ್ಷ ಎಂ ಎ ಉಸ್ಮಾನ್, ನಗರ ಕಾಂಗ್ರೆಸ್‌ ಉಪಾಧ್ಯಕ್ಷ ಎಂ ಎಂ ಯಾಕುಬ್, ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯ ಜಫ್ರುಲ್ಲಾ ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...