ಬೆಂಗಳೂರು-ಹಾಸನ ಇಂಟರ್‌ಸಿಟಿ ರೈಲು ಸಂಚಾರ ವಿಸ್ತರಣೆಗೆ ಶಾಸಕ ಸಿಮೆಂಟ್‌ ಮಂಜು ಮನವಿ

Date:

ಬೆಂಗಳೂರು-ಹಾಸನ ಇಂಟರ್‌ಸಿಟಿ ರೈಲು ಸಂಚಾರ ವಿಸ್ತರಣೆಗೆ ಒತ್ತಾಯಿಸಿ ಶಾಸಕ ಸಿಮೆಂಟ್‌ ಮಂಜು ಅವರು ಬೆಂಗಳೂರಿನಲ್ಲಿರುವ ರೈಲ್ವೆ ಖಾತೆ ರಾಜ್ಯ ಸಚಿವ ವಿ ಸೋಮಣ್ಣ ಅವರ ಕಚೇರಿಗೆ ಭೇಟಿ ನೀಡಿ ಮನವಿ ಮಾಡಿದರು.

“ಬೆಂಗಳೂರು-ಹಾಸನ ನಡುವೆ ಸಂಚರಿಸುತ್ತಿರುವ ಇಂಟರ್‌ಸಿಟಿ ರೈಲನ್ನು ಸಕಲೇಶಪುರದವರೆಗೂ ವಿಸ್ತರಿಸಲು ಕ್ರಮ ಕೈಗೊಳ್ಳಬೇಕು. ಸಕಲೇಶಪುರ ಹಾಗೂ ಆಲೂರು ತಾಲೂಕಿನಿಂದ ನಿತ್ಯವೂ ನೂರಾರು ಜನ ವಿವಿಧ ಕಾರ್ಯಗಳಿಗಾಗಿ ಬೆಂಗಳೂರಿಗೆ ಹೋಗಿ ಬರುತ್ತಿದ್ದಾರೆ. ಕೆಲವರು ಹಾಸನದಿಂದ ರೈಲು ಮುಖಾಂತರ ಬೆಂಗಳೂರಿಗೆ ಹೋದರೆ ಕೆಲವರು ದುಬಾರಿ ಬಸ್ ದರ ತೆತ್ತು ಬೆಂಗಳೂರಿಗೆ ಹೋಗುತ್ತಿದ್ದಾರೆ. ಇಂಟರ್‌ಸಿಟಿ ರೈಲು ಸದ್ಯ ಬೆಂಗಳೂರು-ಹಾಸನ ನಡುವೆ ಸಂಚರಿಸುತ್ತಿದ್ದು, ಈ ರೈಲನ್ನು ಸಕಲೇಶಪುರದವರೆಗೂ ವಿಸ್ತರಿಸಿದರೆ ಸಕಲೇಶಪುರ ಹಾಗೂ ಆಲೂರು ತಾಲೂಕಿನ ಜನರು ನಿತ್ಯದ ಕೆಲಸ ಕಾರ್ಯಗಳಿಗೆ ಬೆಂಗಳೂರಿಗೆ ಹೋಗಿ ಅಂದೇ ಹಿಂತಿರುಗಿ ಬರಲು ಅನುಕೂಲವಾಗುತ್ತದೆ” ಎಂದು ಹೇಳಿದರು.

ಬೆಂಗಳೂರು ಹಾಸನ ರೈಲು

ಈ ಸುದ್ದಿ ಓದಿದ್ದೀರಾ? ತುಮಕೂರು | ನಗರಾಭಿವೃದ್ಧಿಗಾಗಿ 200 ಕೋಟಿ ರೂ.ಗಳ ಅನುದಾನ : ಮಾದರಿ ನಗರ ನಿರ್ಮಾಣಕ್ಕೆ ಸಚಿವ ಜಿ. ಪರಮೇಶ್ವರ ಸೂಚನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆಸ್ಪತ್ರೆ, ಸರ್ಕಾರಿ ಕೆಲಸ, ವಿದ್ಯಾಭ್ಯಾಸ ಸೇರಿದಂತೆ ಇನ್ನು ಹಲವು ಅಗತ್ಯಗಳಿಗೆ ಆಗಾಗ ಬೆಂಗಳೂರಿಗೆ ಹೋಗಲೇ ಬೇಕಾಗುತ್ತದೆ. ಜೀವನೋಪಾಯಕ್ಕಾಗಿ ಈ ಭಾಗದ ಸಾವಿರಾರು ಜನ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಇಂಟರ್‌ಸಿಟಿ ರೈಲನ್ನು ವಿಸ್ತರಿಸಿದರೆ, ಸಕಲೇಶಪುರ ಹಾಗೂ ಆಲೂರು ತಾಲೂಕಿನ ಜನಕ್ಕೆ ಬಹಳ ಅನುಕೂಲವಾಗುತ್ತದೆ. ಆಲೂರು ರೈಲು ನಿಲ್ದಾಣದಲ್ಲಿ ಎಲ್ಲ ರೈಲುಗಳ ನಿಲುಗಡೆಗೆ ಕ್ರಮ ಕೈಗೊಳ್ಳಬೇಕು” ಎಂದು ಮನವಿ ಸಲ್ಲಿಸಿದರು.

ಮನವಿಗೆ ಸ್ಪಂದಿದ ಸಚಿವರು ಕೂಡಲೇ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...