ಕೊಡಗು ಜಿಲ್ಲೆ, ಮಡಿಕೇರಿ ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದ ಗುಡ್ಡೆಮನೆ ಅಪ್ಪಯ್ಯ ಗೌಡರ ಪ್ರತಿಮೆ ಬಳಿಯ ನಗರಸಭಾ ಉದ್ಯಾನವನದ ಜಾಗದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ಶಾಸಕರಾದ ಡಾ. ಮಂತರ್ ಗೌಡ ಭೂಮಿ ಪೂಜೆ ನೆರವೇರಿಸಿದರು.
ದಶಕಗಳ ಹೋರಾಟದ ಬಳಿಕ ಜಿಲ್ಲಾ ಕೇಂದ್ರದಲ್ಲಿ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆ ನಿರ್ಮಾಣವಾಗುತ್ತಿದೆ. ಪ್ರತಿಮೆ ನಿರ್ಮಾಣಕ್ಕೆ ₹44 ಲಕ್ಷ ರೂಪಾಯಿ ವೆಚ್ಚವಾಗಲಿದ್ದು, ನಗರಸಭೆಯಿಂದ ₹20 ಲಕ್ಷ ರೂಪಾಯಿ ನೀಡಲಾಗುತ್ತಿದೆ. ಜೊತೆಗೆ ಶಾಸಕರ ನಿಧಿಯಿಂದ ಅನುದಾನ ಭರಿಸಲಾಗುವುದು. ದಾನಿಗಳು ಸಹ ಸ್ವಯಂ ಪ್ರೇರಣೆಯಿಂದ ಅಗತ್ಯ ಸಹಕಾರ ನೀಡುವಂತೆ ಮನವಿ ಮಾಡಿದರು.
ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಕಾಮಗಾರಿಯನ್ನು ಶೀಘ್ರವೇ ಪ್ರಾರಂಬಿಸಿ ಏಪ್ರಿಲ್ 14 ರಂದು ಉದ್ಘಾಟಿಸುವಂತಾಗಬೇಕು. ಆ ನಿಟ್ಟಿನಲ್ಲಿ ಎಂಜಿನಿಯರ್ ಗಳು ಕ್ರಮವಹಿಸುವಂತೆ ತಿಳಿಸಿದರು. ಎಲ್ಲರೂ ಸಂಘಟಿತರಾದಾಗ ಮಾತ್ರ ಅಭಿವೃದ್ಧಿ ಸಾಧ್ಯ. ಆ ದಿಸೆಯಲ್ಲಿ ಪ್ರತಿಮೆ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದರು.
ನಗರಸಭೆ ಅಧ್ಯಕ್ಷೆ ಪಿ. ಕಲಾವತಿ ಮಾತನಾಡಿ, ಅಂಬೇಡ್ಕರ್ ಅವರ ಬರಹ ಹಾಗೂ ಭಾಷಣಗಳ ಅಧ್ಯಯನ ಮಾಡಬೇಕು. ಅಧ್ಯಯನದಿಂದ ದೂರದೃಷ್ಟಿಯನ್ನು ತಿಳಿಯುವಂತಾಗಬೇಕು ಎಂದರು. ನಗರಸಭೆ ಉಪಾಧ್ಯಕ್ಷ ಮಹೇಶ್ ಜೈನಿ ಮಾತನಾಡಿ ಡಾ. ಬಿ.ಆರ್. ಅಂಬೇಡ್ಕರ್ ಅವರು ದೇಶದ ಆಸ್ತಿಯಾಗಿದ್ದು, ಅವರು ರಾಷ್ಟ್ರಕ್ಕೆ ನೀಡಿರುವ ಸಂವಿಧಾನ, ಕಾರ್ಮಿಕರು ಮತ್ತು ಮಹಿಳೆಯರಿಗೆ ನೀಡಿರುವ ಹಕ್ಕುಗಳ ಕೊಡುಗೆ ಅಪಾರ ಎಂದರು.
ಈ ಸುದ್ದಿ ಓದಿದ್ದೀರಾ? ಇ-ಗಸ್ತು ತಂತ್ರಾಂಶದಲ್ಲಿ ಅರಣ್ಯ ಗಸ್ತು ನಿಗಾಕ್ಕೆ ಸಚಿವ ಈಶ್ವರ್ ಬಿ. ಖಂಡ್ರೆ ಸೂಚನೆ
ಕಾರ್ಯಕ್ರಮದಲ್ಲಿ ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಜೇಶ್ ಯಲ್ಲಪ್ಪ, ನಗರಸಭೆ ಸದಸ್ಯರಾದ ಅನಿತಾ ಪೂವಯ್ಯ, ಕೆ.ಎಸ್.ರಮೇಶ್, ಎಸ್.ಸಿ. ಸತೀಶ್, ಚಿತ್ರಾವತಿ, ಉಮೇಶ್ ಸುಬ್ರಮಣಿ, ಅಮಿನ್ ಮೊಹಿಸಿನ್, ಮಂಜುಳಾ, ಉಷಾ ಕಾವೇರಪ್ಪ, ಚಂದ್ರಶೇಖರ, ಶಾರದ ನಾಗರಾಜು, ಜಗದೀಶ್, ಜುಲೇಕಾಬಿ, ಮುತ್ತುರಾಜ್, ಚಂದ್ರಶೇಖರ್, ಸದಾ ಮುದ್ದಪ್ಪ, ಟಿ.ಪಿ. ರಮೇಶ್, ಎಚ್.ಎಲ್. ದಿವಾಕರ, ಪ್ರತಿಮೆ ನಿರ್ಮಾಣ ಸಮಿತಿ ಅಧ್ಯಕ್ಷರಾದ ಜಯಪ್ಪ ಹಾನಗಲ್, ಅಂಬೆಕಲ್ಲು ಕುಶಾಲಪ್ಪ, ಅಂಬೆಕಲ್ಲು ನವೀನ್, ಮೋಹನ್ ಮೌರ್ಯ, ಬಿ.ಬಿ. ಭಾರತೀಶ್, ಚುಮ್ಮಿ ದೇವಯ್ಯ, ವಿ.ಕೆ. ಲೋಕೇಶ್, ಹಂಸ, ನಿರ್ವಾಣಪ್ಪ, ಗಾಯತ್ರಿ ನರಸಿಂಹ, ಪ್ರೇಮ, ಪ್ರಕಾಶ್ ಆಚಾರ್ಯ, ಬೇಕಲ್ ರಾಮನಾಥ್, ಪ್ರೇಮಕುಮಾರ್, ವೀರಭದ್ರಯ್ಯ, ಈರಪ್ಪ, ಕೂಡಿಗೆ ಅಣ್ಣಯ್ಯ, ಪೌರಾಯುಕ್ತ ಎಚ್.ಆರ್. ರಮೇಶ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಶೇಖರ್, ಎಂಜಿನಿಯರ್ ಗಳಾದ ಪ್ರಮೋದ್, ಸತೀಶ್ ಸೇರಿದಂತೆ ಹಲವರು ಇದ್ದರು.





