ಚಾಮರಾಜನಗರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಆಶ್ರಯದಲ್ಲಿ 2025-26 ನೇ ಸಾಲಿನ ಹನೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ಕ್ಷೇತ್ರದ ಶಾಸಕ ಎಂ. ಆರ್. ಮಂಜುನಾಥ್ ರವರು ಗುಂಡು ಎಸೆತದ ಮೂಲಕ ಚಾಲನೆ ನೀಡಿದರು.
ಜಿಲ್ಲೆಯಲ್ಲಿ ಅತೀ ದೊಡ್ಡ ಕ್ರೀಡಾಂಗಣವಿದೆ. ಅದು ಬಿಟ್ಟರೆ ಹನೂರು ಪಟ್ಟಣದಲ್ಲಿ 8 ಎಕರೆ ಜಾಗದಲ್ಲಿ ಕ್ರೀಡಾಂಗಣವಿದ್ದು, ಮುಂದಿನ ದಿನಗಳಲ್ಲಿ ಅಭಿವೃದ್ಧಿ ಪಡಿಸಿ ಉತ್ತಮವಾದ ಕ್ರೀಡಾಂಗಣವಾಗಿ ಹೊರ ಹೊಮ್ಮಲಿದೆ ಎಂದು ಭರವಸೆ ನೀಡಿದರು.

ಕ್ರೀಡಾಪಟುಗಳಿಗೆ ಶಿಸ್ತು ಬಹಳ ಮುಖ್ಯ. ಯುವಕ, ಯುವತಿಯರು ಜಿಲ್ಲಾ ಹಾಗೂ ರಾಜ್ಯ ಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸುತ್ತಿದ್ದೀರಿ. ರಾಷ್ಟ್ರ ಮಟ್ಟದಲ್ಲಿ ಚಿನ್ನದ ಪದಕ ತಂದರೆ ಏಳು ಲಕ್ಷ ರೂಪಾಯಿ, ಬೆಳ್ಳಿಗೆ 5 ಲಕ್ಷ, ಕಂಚಿಗೆ 3 ಲಕ್ಷ ಬಹುಮಾನ ರಾಜ್ಯ ಸರ್ಕಾರ ನೀಡುತ್ತದೆ ಎಂದು ತಿಳಿಸಿದರು.
ಮುಖ್ಯಮಂತ್ರಿಗಳು ಕೆಲ ದಿನಗಳ ಹಿಂದೆ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ದೈಹಿಕ ಶಿಕ್ಷಕರು ತಮ್ಮ ಶಾಲೆಗಳಲ್ಲಿ ಮಕ್ಕಳಿಗೆ ತಿಳಿಸಿ ಕ್ರೀಡೆಯಲ್ಲಿ ಭಾಗವಹಿಸುವಂತೆ ಯುವ ಜನತೆಗೆ ಮಾಹಿತಿ ನೀಡಬೇಕು. ಸೌಲಭ್ಯಗಳು ದೊರೆಯುತ್ತಿದ್ದು ಇದರ ಸದುಪಯೋಗ ಪಡೆದುಕೊಂಡು, ಉತ್ತಮ ಅರೋಗ್ಯಕ್ಕಾಗಿ ಯುವ ಜನತೆ ಹೆಚ್ಚಾಗಿ ಕ್ರೀಡೆಯಲ್ಲಿ ಪಾಲ್ಗೊಳ್ಳಬೇಕು ಎಂದರು.
ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಕಿಶೋರಿಯರ ಸಮಗ್ರ ಆರೋಗ್ಯ ಕಾಳಜಿಗೆ ‘ಪ್ರಾಣಸಖಿ’ ಯೋಜನೆ; ಶಿಕ್ಷಣ ಅಧಿಕಾರಿಗಳಿಗೆ ಕಾರ್ಯಾಗಾರ

ಪಟ್ಟಣ ಪಂಚಾಯತಿ ಅಧ್ಯಕ್ಷೆ ಮುಂತಾಜ್ ಬಾನು, ಉಪಾಧ್ಯಕ್ಷ ಆನಂದ್ ಕುಮಾರ್, ಗ್ಯಾರೆಂಟಿ ಯೋಜನೆ ತಾಲೂಕು ಅಧ್ಯಕ್ಷ ರಾಚಪ್ಪ, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಸುರೇಶ್, ದೈಹಿಕ ಶಿಕ್ಷಕ ಹಾಗೂ ಪರಿವೀಕ್ಷಕ ಕೆಂಪರಾಜು, ಪಟ್ಟಣ ಪಂಚಾಯತಿ ಸದಸ್ಯೆ ಪವಿತ್ರ ಪ್ರಸನ್ನ ಕುಮಾರ್, ತಾಲೂಕು ವ್ಯಾಪ್ತಿಯ ದೈಹಿಕ ಶಿಕ್ಷಕರುಗಳು, ಕ್ರೀಡಾಪಟುಗಳು ಸೇರಿದಂತೆ ಇನ್ನಿತರರು ಕ್ರೀಡಾಕೂಟ ಚಾಲನಾ ಕಾರ್ಯಕ್ರಮದಲ್ಲಿ ಇದ್ದರು.





