ಮಡಿಕೇರಿ | ಕಬಡಗೇರಿ ನೂತನ ಬಡಾವಣೆಗೆ ಡಾ ಬಿ ಆರ್ ಅಂಬೇಡ್ಕರ್ ಹೆಸರಿಡುವಂತೆ ಶಾಸಕ ಮಂತರ್ ಗೌಡ ಸೂಚನೆ

Date:

ಕೊಡಗು ಜಿಲ್ಲೆ, ಮಡಿಕೇರಿ ತಾಲ್ಲೂಕಿನ ಹೊದ್ದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಡಬಗೇರಿಯಲ್ಲಿ ನಿವೇಶನ ರಹಿತರಿಗೆ ನೀಡಲಾದ ನೂತನ ಬಡಾವಣೆಗೆ ಡಾ. ಮಂತರ್ ಗೌಡ ಬಡಾವಣೆ ಎಂದು ನಾಮಕರಣ ಮಾಡಲು ಫಲಾನುಭವಿಗಳು ಕೋರಿದ್ದನ್ನು ಶಾಸಕರು ನಿರಾಕರಿಸಿದ್ದು, ಬದಲಿಗೆ ಡಾ ಬಿ.ಆರ್. ಅಂಬೇಡ್ಕರ್ ಹೆಸರಿಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕೊಡಗು ಜಿಲ್ಲಾಡಳಿತ ಹಾಗೂ ಹೊದ್ದೂರು ಗ್ರಾಮ ಪಂಚಾಯ್ತಿ ಸಹಯೋಗದಲ್ಲಿ ಕಡಬಗೇರಿಯಲ್ಲಿ ನಡೆದ ಹಕ್ಕುಪತ್ರ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಮಂತರ್ ಗೌಡ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ರವರು ನಾವೆಲ್ಲ ಹತ್ತು ಜನ್ಮ ಎತ್ತಿದರೂ ಸಾಧಿಸಲು ಸಾಧ್ಯವಾಗದಂತಹ ಮಹಾನ್ ಸಾಧನೆಯನ್ನು ಈ ದೇಶದ ಜನತೆಗಾಗಿ ಮಾಡಿದ್ದಾರೆ. ಅಂತಹ ಮಹಾನ್ ವ್ಯಕ್ತಿಯ ಹೆಸರನ್ನು ಬಡಾವಣೆಗೆ ನಾಮಕರಣ ಮಾಡುವುದು ಸೂಕ್ತ ಎಂದರು. ಒಟ್ಟು 60 ಜನ ಅರ್ಹ ಮತ್ತು ಆಯ್ದ ಫಲಾನುಭವಿಗಳನ್ನು ಗುರುತಿಸಿ ನಿವೇಶನ ನೀಡಲಾಗಿದ್ದು, ಸದ್ಯದಲ್ಲಿ ಮನೆ ನಿರ್ಮಿಸಿಕೊಡುವುದಾಗಿ ಭರವಸೆ ನೀಡಿದರು. ಈ ನಿವೇಶನಗಳು ಸರ್ಕಾರದ ಯೋಜನೆ ಅನುಸಾರ ಉಚಿತವಾಗಿ ನೀಡಲಾಗಿದ್ದು ಯಾರಿಗೂ ಕೂಡ ಒಂದು ರೂಪಾಯಿಯನ್ನು ನೀಡಬಾರದು.
ಅಧಿಕಾರಿಗಳು ಅಥವಾ ಯಾವುದೇ ವಕ್ತಿಯಾಗಲಿ ಹಣಕ್ಕೆ ಬೇಡಿಕೆ ಇಟ್ಟಲ್ಲಿ ನೇರವಾಗಿ ಜಿಲ್ಲಾಧಿಕಾರಿಗಳಿಗೆ ದೂರು ನೀಡುವಂತೆ ಸಲಹೆ ನೀಡಿದರು. ಯಾರು ಕೂಡ ನಿವೇಶನವನ್ನು ಇತರರಿಗೆ ಮಾರಾಟ ಮಾಡಬಾರದು. ಮಾರಾಟ ಮಾಡಿದಲ್ಲಿ ಕಾನೂನು ರೀತಿ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.

ಕೊಡಗು ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಮಾತನಾಡಿ, ಶಾಸಕರ ಪ್ರಯತ್ನ ಮತ್ತು ಹೊದ್ದೂರು ಗ್ರಾಮ ಪಂಚಾಯತ್ ಸರ್ವ ಸದಸ್ಯರು, ಕಂದಾಯ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧಿಕಾರಿಗಳ ಪರಿಶ್ರಮದಿಂದ ಉತ್ತಮ ಕೆಲಸ ಆಗಿದ್ದು, ಶ್ರಮಿಸಿದ ಪ್ರತಿಯೊಬ್ಬರು ಅಭಿನಂದನಾರ್ಹರು
ಎಂದು ಶ್ಲಾಘಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೊದ್ದೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಹೆಚ್.ಎ. ಹಂಸ ಮಾತನಾಡಿ, ಡಾ. ಮಂತರ್ ಗೌಡ ರವರು ಶಾಸಕರಾಗಿ ಆಯ್ಕೆಗೊಂಡ ಎರಡೂವರೆ ವರ್ಷದಲ್ಲಿ ₹9 ಕೋಟಿ ರೂಪಾಯಿಗಳಿಗೂ ಹೆಚ್ಚಿನ ಅನುದಾನವನ್ನು ಪಂಚಾಯತ್ ವ್ಯಾಪ್ತಿಯ ಗ್ರಾಮಗಳ ಅಭಿವೃದ್ಧಿಗೆ ನೀಡಿದನ್ನು ವಿವರಿಸಿದರು. ಪಂಚಾಯತ್ ವ್ಯಾಪ್ತಿಯಲ್ಲಿ ಒಟ್ಟು 300 ಹಕ್ಕುಪತ್ರಗಳನ್ನು ಡಾ. ಮಂತರ್ ಗೌಡ ರವರ ಅವಧಿಯಲ್ಲಿ ವಿತರಿಸಿದ್ದು ಐತಿಹಾಸಿಕ ದಾಖಲೆ ಎಂದು ಬಣ್ಣಿಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಗ್ರಾಮ ಪಂಚಾಯತ್ ಸದಸ್ಯರಾದ ಪಾಲೆಮಾಡು ಮೊಣ್ಣಪ್ಪ, ಚುನಾವಣೆ ಸಂಧರ್ಭದಲ್ಲಿ ಹಕ್ಕುಪತ್ರ ನೀಡುವ ವಿಚಾರವನ್ನು ಡಾ. ಮಂತರ್ ಗೌಡ ರವರ ಮುಂದೆ ಇಟ್ಟಿದ್ದು, ಅಂದು ನೀಡಿದ ಭರವಸೆ ಈಡೇರಿಸುವ ಮೂಲಕ ನುಡಿದಂತೆ ನಡೆದಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಪಾದಯಾತ್ರೆಗೂ ಸ್ಪಂದಿಸದ ಜಿಲ್ಲಾಡಳಿತ: ಆದಿವಾಸಿಗಳ ಹಕ್ಕುಗಳನ್ನು ಕೊಲ್ಲುತ್ತಿದೆಯೇ?

ಮಡಿಕೇರಿ ತಹಶೀಲ್ದಾರ್ ಶ್ರೀಧರ್, ತಾಲ್ಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ಶೇಖರ್, ಗ್ಯಾರೆಂಟಿ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷ ಮಂದ್ರಿರ ಮೋಹನ್ ದಾಸ್, ಅಲ್ಪ ಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಹನೀಫ್, ಹೊದ್ದೂರು ಗ್ರಾಮ ಪಂಚಾಯತ್ ಪಿ.ಡಿ.ಒ ವತ್ಸಲಾ ಕುಮಾರಿ, ಹೊಸ್ಕೇರಿ ಪಿಡಿಒ ಅಬ್ದುಲ್ಲಾ, ಮುಖಂಡರಾದ ತೆನ್ನಿರ ಮೈನಾ, ವಿ.ಜಿ. ಮೋಹನ್, ಅಪ್ರು ರವೀಂದ್ರ, ಕೊಳುಮಂಡ ರಫೀಕ್, ಗ್ರಾಮ ಪಂಚಾಯತ್ ಸದಸ್ಯರಾದ ಚೌರೀರ ಅನಿತಾ, ಹಮೀದ್, ಕುಸುಮಾವತಿ, ಲಕ್ಷ್ಮೀ, ಅನುರಾಧ, ಕಡ್ಲೆರ ಟೈನಿ, ಮೊಯ್ದು, ಕೆ.ಆರ್. ಅನಿತಾ ಸೇರಿದಂತೆ ಕಂದಾಯ ಅಧಿಕಾರಿಗಳು, ಪಂಚಾಯತ್ ಸಿಬ್ಬಂದಿಗಳು,
ಫಲಾನುಭವಿ ಕುಟುಂಬದವರು ಮತ್ತು ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...