ಬೀದರ್‌ | ರಾಜಕೀಯ ಲಾಭಕ್ಕಾಗಿ ಸದಾಶಿವ ಆಯೋಗ ವರದಿಗೆ ಶಾಸಕ ಪ್ರಭು ಚವ್ಹಾಣ ವಿರೋಧ: ಸುಧಾಕರ ಕೊಳ್ಳೂರ್

Date:

  • ಸದಾಶಿವ ಆಯೋಗ ವರದಿಯಿಂದ ಯಾವುದೇ ಪರಿಶಿಷ್ಟ ಜಾತಿ ಸಮುದಾಯಗಳಿಗೆ ಅನ್ಯಾಯ ಆಗುವುದಿಲ್ಲ.
  • ಸಾಮಾಜಿಕ ನ್ಯಾಯದ ಪರಿಕಲ್ಪನೆಯಲ್ಲಿ ನ್ಯಾ. ಎ.ಜೆ. ಸದಾಶಿವ ಅವರು ವರದಿ ನೀಡಿದ್ದಾರೆ.

ನ್ಯಾಯಮೂರ್ತಿ ಏ.ಜೆ. ಸದಾಶಿವ ಆಯೋಗದ ವರದಿ ಜಾರಿಯಾದರೆ ಉಗ್ರ ಹೋರಾಟ ಕೈಗೊಳ್ಳಬೇಕಾಗುತ್ತದೆ ಎಂದು ಮಾಜಿ ಸಚಿವ, ಔರಾದ ಶಾಸಕ ಪ್ರಭು ಚವ್ಹಾಣ ಹೇಳಿಕೆಗೆ ಕಾಂಗ್ರೆಸ್ ಪ್ರಚಾರ ಸಮಿತಿ ಜಿಲ್ಲಾ ಸಹ ಸಂಚಾಲಕ ಸುಧಾಕರ ಕೊಳ್ಳುರ ಅವರು ತೀವ್ರವಾಗಿ ಖಂಡಿಸಿದ್ದಾರೆ.

“ಒಳ ಮೀಸಲಾತಿ ವರ್ಗೀಕರಣ ಕುರಿತು ನ್ಯಾಯಮೂರ್ತಿ ಎಜೆ ಸದಾಶಿವ ಆಯೋಗ ಸಲ್ಲಿಸುವ ವರದಿ ಶೀಘ್ರವೇ ಜಾರಿಗೆ ಬರಲಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಅವರ ಹೇಳಿಕೆಗೆ ಔರಾದ ಶಾಸಕ ಪ್ರಭು ಚೌವ್ಹಾಣ ಅವರು ಪ್ರತಿಕ್ರಿಯಿಸಿ ಆಯೋಗದ ವರದಿ ಅವೈಜ್ಞಾನಿಕ ಹಾಗೂ ಸಂವಿಧಾನ ವಿರೋಧಿಯಾಗಿದೆ, ಹಾಗಾಗಿ ಈ ವರದಿ ತಿರಸ್ಕರಿಸಬೇಕು ಎಂದು ಹೇಳಿಕೆ ನೀಡಿರುವುದು ಖಂಡನೀಯ” ಎಂದಿದ್ದಾರೆ.

“ಸದಾಶಿವ ಆಯೋಗ ವರದಿ ಅವೈಜ್ಞಾನಿಕ ಹಾಗೂ ಸಂವಿಧಾನ ವಿರೋಧಿಯಾಗಿದ್ದರೆ ಕಳೆದ ಅವಧಿಯಲ್ಲಿ ನಿಮ್ಮದೇ ಬಿಜೆಪಿ ನೇತ್ರತ್ವದ ರಾಜ್ಯ ಸರ್ಕಾರ ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡಿ ಕೇಂದ್ರಕ್ಕೆ ಶಿಫಾರಸ್ಸು ಮಾಡಿದೀರಿ ಮತ್ತು ಈ ಶಿಫಾರಸ್ಸು ಸಮಿತಿಯಲ್ಲಿ ತಾವು ಸದಸ್ಯರಾಗಿದ್ದೀರಿ. ಅಂದು ವಿರೋಧಿಸದೇ ಒಪ್ಪಿಕೊಂಡು ಇಂದು ವಿರೋಧಿಸುತ್ತಿರುವುದು ಯಾವ ಪುರುಷಾರ್ಥಕ್ಕೆ” ಎಂದು ಸುಧಾಕರ ಕೊಳ್ಳೂರು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವರದಿ ಜಾರಿಗೊಂಡರೆ ಭೋವಿ,ಕೊರಮ ,ಕೊರಚ, ಲಂಬಾಣಿ ಹಾಗೂ ಇತರ ಸಮುದಾಯಗಳಿಗೆ ಅನ್ಯಾಯವಾಗಲಿದೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಆದರೆ ಈ ವರದಿಯಿಂದ ಯಾವುದೇ ಪರಿಶಿಷ್ಟ ಜಾತಿಗಳಲ್ಲಿನ ಸಮುದಾಯಗಳಿಗೆ ಅನ್ಯಾಯ ಆಗುವುದಿಲ್ಲ. ಸಾಮಾಜಿಕ ನ್ಯಾಯದ ಪರಿಕಲ್ಪನೆಯಲ್ಲಿ ಸಂವಿಧಾನ ಬದ್ಧವಾಗಿ ನ್ಯಾಯಮೂರ್ತಿ ಎಜೆ ಸದಾಶಿವ ಅವರು ವರದಿ ನೀಡಿದ್ದಾರೆ. ವರದಿ ಬಗ್ಗೆ ಕುಲಂಕುಶವಾಗಿ ಅಧ್ಯಯನ ಮಾಡದೆ ಕೇವಲ ರಾಜಕೀಯ ಲಾಭಕ್ಕಾಗಿ ಪ್ರಭು ಚೌವ್ಹಾಣ ಅವರು ಜನರ ದಿಕ್ಕು ತಪ್ಪಿಸುತ್ತಿದ್ದಾರೆ” ಎಂದು ಆಕ್ಷೇಪಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಸೋರುತ್ತಿದೆ ಸರ್ಕಾರಿ ಶಾಲಾ ಮಾಳಿಗೆ; ಆತಂಕದಲ್ಲಿ ಮಕ್ಕಳು

“ಶೋಷಿತ ಸಮುದಾಯಗಳ ಪ್ರಗತಿ ಕಾಣಬೇಕಾದರೆ ಸದಾಶಿವ ಆಯೋಗ ವರದಿ ಜಾರಿಯಾಗಬೇಕು. ಸದಾಶಿವ ಆಯೋಗ ವರದಿಗೆ ಪ್ರಭು ಚೌವ್ಹಾಣ ಅವರು ವಿರೋಧಿಸಿದರೆ ಅವರ ವಿರುದ್ಧ ಉಗ್ರ ಹೋರಾಟ ಮಾಡಬೇಕಾಗುತ್ತದೆ” ಎಂದು ಸುಧಾಕರ ಎಚ್ಚರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...