ಔರಾದ್‌ ತಾಲ್ಲೂಕಿನ ವಿವಿಧೆಡೆ ಬಿತ್ತನೆ ಬೀಜ ವಿತರಣೆಗೆ ಶಾಸಕ ಪ್ರಭು ಚವ್ಹಾಣ ಚಾಲನೆ

Date:

ಔರಾದ್ ತಾಲ್ಲೂಕಿನ ಚಿಂತಾಕಿ, ಸಂತಪೂರ ಹಾಗೂ ಔರಾದ(ಬಿ) ನಲ್ಲಿ 2025-26ನೇ ಸಾಲಿನ ಮುಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆ ಕಾರ್ಯಕ್ರಮಕ್ಕೆ ಶುಕ್ರವಾರ ಶಾಸಕ ಪ್ರಭು ಚವ್ಹಾಣ ಅವರು ಚಾಲನೆ ನೀಡಿದರು.

ಬಳಿಕ ಶಾಸಕ ಪ್ರಭು ಚವ್ಹಾಣ ಅವರು ಮಾತನಾಡಿ, ʼನಾಡಿಗೆ ಅನ್ನ ನೀಡಿ ಪೋಷಿಸುವ ರೈತರ ಏಳಿಗೆಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಎಲ್ಲ ಯೋಜನೆಗಳ ಲಾಭ ಅರ್ಹ ರೈತರಿಗೆ ತಲುಪಿಸಬೇಕು. ರೈತರಿಗೆ ಅನ್ಯಾಯವಾದರೆ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲʼ ಎಂದರು.

ʼಮುಂಗಾರು ಹಂಗಾಮು ಆರಂಭವಾಗಲಿದ್ದು, ರೈತರು ಸಕಾಲಕ್ಕೆ ಬಿತ್ತನೆ ಮಾಡಲು ಅನುಕೂಲವಾಗಲಿ ಎಂಬ ಕಾರಣಕ್ಕೆ ಮುಂಚಿತವಾಗಿಯೇ ಬಿತ್ತನೆ ಬೀಜ ವಿತರಣೆಗೆ ಚಾಲನೆ ನೀಡಲಾಗಿದೆ. ಬಿತ್ತನೆ ವೇಳೆಗೆ ರೈತರಿಗೆ ಬಿತ್ತನೆ ಬೀಜ ಮತ್ತು ರಸಗೊಬ್ಬರ ತಲುಪಬೇಕು. ಈ ದಿಶೆಯಲ್ಲಿ ಅಧಿಕಾರಿಗಳು ಹೆಚ್ಚಿನ ಶ್ರಮ ವಹಿಸಬೇಕು. ರೈತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕೆಲಸ ಮಾಡಬೇಕುʼ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼನಮ್ಮ ಭಾಗದಲ್ಲಿ ಹೆಚ್ಚು ಮಳೆಯಾದರೂ, ಕಡಿಮೆ ಮಳೆಯಾದರೂ ಬೆಳೆ ನಷ್ಟವಾಗುತ್ತದೆ. ಇಳುವರಿ ಹೆಚ್ಚಾಗಬೇಕು ಮತ್ತು ನಷ್ಟ ಕಡಿಮೆಯಾಗುವ ರೀತಿಯಲ್ಲಿ ಇಲಾಖೆ ಅಧಿಕಾರಿಗಳು ರೈತರಿಗೆ ಕಾಲಕಾಲಕ್ಕೆ ಸೂಕ್ತ ಸಲಹೆಗಳನ್ನು ನೀಡಬೇಕು. ಕೃಷಿ ಸಿಂಚಾಯಿ, ಕಿಸಾನ್ ಸಮ್ಮಾನ್ ಯೋಜನೆ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ, ಮಣ್ಣಿನ ಪರೀಕ್ಷೆ, ಪಾರಂಪರಿಕ ಕೃಷಿ, ಕೃಷಿ ಭಾಗ್ಯದಂತಹ ಇಲಾಖೆಯ ಎಲ್ಲ ಯೋಜನೆಗಳ ಬಗ್ಗೆ ಹೆಚ್ಷಿನ ಪ್ರಚಾರ ನೀಡಬೇಕು. ನಿಜವಾದ ರೈತರಿಗೆ ಯೋಜನೆಗಳ ಲಾಭ ಸಿಗುವಂತೆ ಮಾಡಬೇಕುʼ ಎಂದರು.

ಬೆಳೆ ವಿಮೆ ಕಂಪನಿಗಳು ಕೆಲ ದಿನಗಳಿಂದ ರೈತರಿಗೆ ವಂಚಿಸುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಬರುತ್ತಿವೆ. ದಾಬಕಾ, ಸಂತಪೂರ ಹಾಗೂ ಮತ್ತಿತರೆ ಕಡೆಗಳಲ್ಲಿ ನಿಜವಾದ ರೈತರನ್ನು ಬಿಟ್ಟು ರೈತರಲ್ಲದವರಿಗೆ ಬೆಳೆ ವಿಮೆ ಸೌಲಭ್ಯ ಸಿಕ್ಕಿರುವ ಬಗ್ಗೆ ರೈತರು ತಿಳಿಸಿದ್ದಾರೆ. ಈ ಬಗ್ಗೆ ಇಲಾಖೆಯ ಎಲ್ಲ ಹಂತದ ಅಧಿಕಾರಿಗಳು ಮತ್ತು ಸಂಬಂಧಿಸಿದ ಸಚಿವರ ಗಮನಕ್ಕೂ ತಂದಿದ್ದೇನೆ. ಸಹಾಯಕ ನಿರ್ದೇಶಕರು ಈ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು. ಕ್ಷೇತ್ರದ ಯಾರೊಬ್ಬ ರೈತನಿಗೂ ಅನ್ಯಾಯವಾಗದಂತೆ ನೋಡಿಕೊಳ್ಳಬೇಕುʼ ಎಂದು ಅಧಿಕಾರಿಗಳಿಗೆ ತಿಳಿಸಿದರು.

ʼಸಣ್ಣ-ಪುಟ್ಟ ಗ್ರಾಮದವರಿಗೆ ಒಂದು ದಿನದಲ್ಲಿ ಬಿತ್ತನೆ ಬೀಜ ವಿತರಿಸಬಹುದು. ದೊಡ್ಡ ಗ್ರಾಮಗಳಿಗೆ ಕನಿಷ್ಠ ಎರಡು ದಿನಗಳ ಅವಕಾಶ ನೀಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಗಡಿ ಭಾಗದ ಕೆಲ ರೈತರು ಬಿತ್ತನೆಗಾಗಿ ಪಡೆದ ಬೀಜಗಳನ್ನು ಪಕ್ಕದ ಮಹಾರಾಷ್ಟç ಮತ್ತು ತೆಲಂಗಾಣದಲ್ಲಿರುವ ಸಂಬಂಧಿಕರು ಮತ್ತು ಪರಿಚಯಸ್ಥರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಗಮನಕ್ಕೆ ಬಂದಿದೆ. ಸರ್ಕಾರವು ನಮ್ಮ ರೈತರಿಗೆ ಅನುಕೂಲವಾಗಲಿ ಎಂಬ ಕಾರಣಕ್ಕೆ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜಗಳನ್ನು ನೀಡುತ್ತಿದೆ. ಇದನ್ನು ಸ್ವಂತಕ್ಕಾಗಿ ಬಳಸಬೇಕೆ ವಿನಃ ಯಾವುದೇ ಕಾರಣಕ್ಕೂ ಅನ್ಯರಿಗೆ ಮಾರುವಂತಿಲ್ಲ. ಇಂಥವುಗಳಿಗೆ ರೈತರು ಅವಕಾಶ ಮಾಡಿಕೊಡಬಾರದುʼ ಎಂದರು.

ಸಹಾಯಕ ಕೃಷಿ ನಿರ್ದೇಶಕರಾದ ಧೂಳಪ್ಪ ಅವರು ಬಿತ್ತನೆ ಬೀಜಗಳ ದರ, ಸೋಯಾ ಅವರೆ, ಉದ್ದು, ಹೆಸರು ಬೆಳೆಗಳ ಬಿತ್ತನೆಯ ವೈಜ್ಞಾನಿಕ ವಿಧಾನಗಳು, ರಸಗೊಬ್ಬರ ಬಳಕೆ, ಬಿತ್ತನೆ ವೇಳೆ ರೈತರು ಅನುಸರಿಸಬೇಕಾದ ಕ್ರಮಗಳ ಬಗ್ಗೆ ರೈತರಿಗೆ ಮನವರಿಕೆ ಮಾಡಿಕೊಟ್ಟರು.

ಗ್ರಾಮ ಪಂಚಾಯಿತಿವಾರು ಬಿತ್ತನೆ ಬೀಜ ವಿತರಣೆ ದಿನಾಂಕಗಳನ್ನು ಲಾಟರಿ ಮೂಲಕ ನಿಗದಿಪಡಿಸಲಾಯಿತು.

ಇದನ್ನೂ ಓದಿ : 18 ಶಾಸಕರ ಅಮಾನತು ವಾಪಸು ಸಂಸದೀಯ ವಿರೋಧಿ ನಡೆಯೇ?

ಮುಖಂಡರಾದ ಮಾರುತಿ ಚವ್ಹಾಣ, ಧೊಂಡಿಬಾ ನರೋಟೆ, ರಾಮಶೆಟ್ಟಿ ಪನ್ನಾಳೆ, ಶಿವರಾಜ ಅಲ್ಮಾಜೆ, ದಯಾನಂದ ಘೂಳೆ, ಧೂಳಪ್ಪ, ರವೀಂದ್ರ ರೆಡ್ಡಿ, ರಾಮ ರೆಡ್ಡಿ, ಗೋವಿಂದ ರೆಡ್ಡಿ, ವಿಠಲ ರೆಡ್ಡಿ, ರೈತ ಸಂಘದ ಶ್ರೀಮಂತ ಬಿರಾದಾರ, ಪ್ರಕಾಶ ಬಾವಗೆ, ವಿಶ್ವನಾಥ ಧರಣೆ ಸೇರಿದಂತೆ ರೈತ ಮುಖಂಡರು, ಕೃಷಿ ವಿಜ್ಞಾನಿಗಳು, ಇಲಾಖೆಯ ಅಧಿಕಾರಿಗಳು, ರೈತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...