ಚಿಕ್ಕಬಳ್ಳಾಪುರ | ಜನರ ಸಮಸ್ಯೆ ಆಲಿಸಲು ʼನಮ್ಮ ಊರಿಗೆ ನಮ್ಮ ಶಾಸಕರುʼ

Date:

ಶಾಸಕರೊಂದಿಗೆ ಹಳ್ಳಿಗಳಿಗೆ ತೆರಳಿದ ಅಧಿಕಾರಿಗಳ ದಂಡು | ಅನಾಥ ಮಕ್ಕಳಿಗೆ 2 ಲಕ್ಷ ಧನಸಹಾಯ ನೀಡದ ಶಾಸಕ

ಚಿಕ್ಕಬಳ್ಳಾಪುರ ನಗರ ಶಾಸಕ ಪ್ರದೀಪ್‌ ಈಶ್ವರ್‌ ಜನರ ಸಮಸ್ಯೆಗಳನ್ನು ಆಲಿಸುವ ನಿಟ್ಟಿನಲ್ಲಿ ʼನಮ್ಮ ಊರಿಗೆ ನಮ್ಮ ಶಾಸಕರುʼ ನೂತನ ಕಾರ್ಯಕ್ರಮವನ್ನು ರೂಪಿಸಿದ್ದು, ಬುಧವಾರ ಚಿಕ್ಕಬಳ್ಳಾಪುರ ತಾಲ್ಲೂಕಿನ ಮುದ್ದೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಹಳ್ಳಿಗಳಲ್ಲಿ ಸಂಚರಿಸಿದರು.

ಘಟ್ಟಿಗಾನಹಳ್ಳಿಯಿಂದ ಆರಂಭವಾದ ಗ್ರಾಮ ಸಂಚಾರ ಕಾರ್ಯಕ್ರಮದಲ್ಲಿ ಶಾಸಕರೊಂದಿಗೆ ತಹಶೀಲ್ದಾರ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸೇರಿದಂತೆ ಆರೋಗ್ಯ, ಬೆಸ್ಕಾಂ, ಆಹಾರ, ಸರ್ವೆ ಹೀಗೆ ವಿವಿಧ ಇಲಾಖೆಗಳ ಅಧಿಕಾರಿಗಳ ದಂಡು ಬಸ್‌ನಲ್ಲಿ ಚಿಗಟೇನಹಳ್ಳಿ, ಕಳವಾರ ಸೇರಿದಂತೆ ವಿವಿಧ ಗ್ರಾಮಗಳಿಗೆ ತೆರಳಿ ಜನರ ಸಮಸ್ಯೆಗಳನ್ನು ಆಲಿಸಿ, ಅಹವಾಲುಗಳನ್ನು ಸ್ವೀಕರಿಸಿದರು.

ನುಡಿದಂತೆ ನಡೆದ ಶಾಸಕ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೆಲವು ತಿಂಗಳ ಹಿಂದೆ ಹಾಸನದ ಬಳಿ ಅಪಘಾತದಲ್ಲಿ ಚಿಗಟೇನಹಳ್ಳಿ ಗ್ರಾಮದವರು ಮೃತಪಟ್ಟಿದ್ದರು. ಅವರ ಮನೆಗೆ ಭೇಟಿ ನೀಡಿದ್ದ ಪ್ರದೀಪ್ ಈಶ್ವರ್ ಮಕ್ಕಳ ಶಿಕ್ಷಣಕ್ಕೆ ನೆರವಾಗುವುದಾಗಿ ಭರವಸೆ ನೀಡಿದ್ದರು. ಈ ಹಿನ್ನೆಲೆ ಇಂದು ಅವರ ಮನೆಗೆ ಭೇಟಿ ನೀಡಿದ ಶಾಸಕರು ಇಬ್ಬರು ಮಕ್ಕಳಿಗೆ ಎರಡು ಲಕ್ಷ ಧನ ಸಹಾಯ ನೀಡಿದರು. ಈ ಮೂಲಕ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ.

ಈ ವೇಳೆ ಮಾತನಾಡಿದ ಶಾಸಕ ಪ್ರದೀಪ್‌ ಈಶ್ವರ್‌, ಈ ಹಿಂದೆ ಮಕ್ಕಳಿಗೆ ನೆರವಾಗುವುದಾಗಿ ಹೇಳಿದ್ದೆ. ಇಂದು ಧನಸಹಾಯ ಮಾಡಿದ್ದೇನೆ. ಇದು ಅವರ ಶಿಕ್ಷಣಕ್ಕೆ ಅನುಕೂಲವಾಗಲಿದೆ. ನನಗೆ ಆಸ್ತಿ ಅಂತಸ್ತು ಮಾಡುವ ಆಸೆ ಇಲ್ಲ. ವರಮಹಾಲಕ್ಷ್ಮಿ ಹಬ್ಬದ ಸಮಯದಲ್ಲಿ ಹೆಣ್ಣು ಮಕ್ಕಳಿಗೆ ಅರಿಶಿನ ಕುಂಕುಮದ ರೂಪದಲ್ಲಿ ಸೀರೆ ನೀಡುತ್ತಿದ್ದೇನೆ. ಸರ್ಕಾರಿ ಶಾಲೆಯ 25 ಸಾವಿರ ಮಕ್ಕಳಿಗೆ ಬಟ್ಟೆ ನೀಡಿದ್ದೇವೆ. ಎಸ್ಸೆಸ್ಸೆಲ್ಸಿ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡುತ್ತಿದ್ದೇನೆ. ಆರೋಗ್ಯ ಸೇವೆಗೆ ಅಮ್ಮ ಆಂಬುಲೆನ್ಸ್ ಓಡಿಸಲಾಗುತ್ತಿದೆ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹೆಣ್ಣನ್ನು ದೇವಿಯೆಂದು ಪೂಜಿಸುವ ದೇಶದಲ್ಲಿ ದುಡಿಯವ ಹೆಣ್ಣಿನ ಡಬಲ್ ಶಿಫ್ಟ್!

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳು ಬಡವರ ಬದುಕಿಗೆ ಬೆಳಕಾಗಿದೆ. ಗೃಹಲಕ್ಷ್ಮಿ ಯೋಜನೆಯು ಮಹಿಳೆಯರಿಗೆ ಅನುಕೂಲವಾಗಿದೆ. ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಕ್ಕೆ ಅವಕಾಶವಿದೆ. ನಮ್ಮ ಸರ್ಕಾರ ಬಡವರ ಪರವಾಗಿ ಕೆಲಸ ಮಾಡುತ್ತಿದೆ ಎಂದು ಸರಕಾರದ ಯೋಜನೆಗಳನ್ನು ಬಣ್ಣಿಸಿದರು.

ಈ ವೇಳೆ ವಿವಿಧ ಇಲಾಖೆಗಳ ಅಧಿಕಾರಿಗಳು, ಕಾಂಗ್ರೆಸ್‌ ಮುಖಂಡರು, ಕಾರ್ಯಕರ್ತರು, ಪೊಲೀಸ್‌ ಸಿಬ್ಬಂದಿ ಹಾಗೂ ಗ್ರಾಮಸ್ಥರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...