ಚಾಮರಾಜನಗರ | ಮೇ. 15 ರಂದು ಚಾಮರಾಜೇಶ್ವರ ದೇವಾಲಯ ಆವರಣದಲ್ಲಿ ಮಾಕ್ ಡ್ರಿಲ್

Date:

ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಾಗರೀಕರ ರಕ್ಷಣಾ ಕಾರ್ಯ ಚಟುವಟಿಕೆಗಳ ಕುರಿತ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವ ಸಂಬಂಧ ಮಾಕ್ ಡ್ರಿಲ್ ಆಯೋಜನೆ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಮೇ. 15 ರಂದು ಮಾಕ್ ಡ್ರಿಲ್ (ಅಣಕು ಪ್ರದರ್ಶನ) ಚಾಮರಾಜೇಶ್ವರ ದೇವಾಲಯದ ಆವರಣದಲ್ಲಿ ನಡೆಸುವ ನಿರ್ಧಾರ ಕೈಗೊಂಡರು.

ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಮಾತನಾಡಿ ” ತುರ್ತು ಸಂದರ್ಭ, ಅವಘಡಗಳು ಸಂಭವಿಸಿದ ಸಮಯದಲ್ಲಿ ಜನರು ಗಾಬರಿ ಅಥವಾ ಆತಂಕಕ್ಕೆ ಒಳಗಾಗದಂತೆ ಆತ್ಮವಿಶ್ವಾಸ ತುಂಬಿ ಅರಿವು ಮೂಡಿಸುವ ಉದ್ದೇಶದಿಂದ ಅಣಕು ಪ್ರದರ್ಶನವನ್ನು (ಮಾಕ್ ಡ್ರಿಲ್) ನಡೆಸಲಾಗುತ್ತದೆ. ಇದು ಅಣಕು ಕಾರ್ಯಾಚರಣೆ ಮಾತ್ರವಾಗಿದ್ದು ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ. ಜಿಲ್ಲಾಡಳಿತದೊಂದಿಗೆ ಸಹಕಾರ ನೀಡಬೇಕು ” ಎಂದರು.

ಚಾಮರಾಜೇಶ್ವರ ದೇವಾಲಯದ ಆವರಣದಲ್ಲಿ ಅಣಕು ಕಾರ್ಯಚರಣೆ (ಮಾಕ್ ಡ್ರಿಲ್) ಪ್ರದರ್ಶನ ಕೈಗೊಂಡು ಜಾಗೃತಿ ಮೂಡಿಸಲಾಗುತ್ತದೆ. ಈ ಅಣಕು ಕಾರ್ಯಚರಣೆಗೆ ಪೊಲೀಸ್ ಇಲಾಖೆ, ಅಗ್ನಿಶಾಮಕ ದಳ, ಹೋಂ ಗಾರ್ಡ್, ವೈದ್ಯಕೀಯ ತಂಡ, ಸಾರಿಗೆ ತಂಡ, ಕಂಟ್ರೋಲ್ ರೂಂ, ಇನ್ನಿತರ ತಂಡಗಳನ್ನು ರಚಿಸಲಾಗಿದ್ದು ಸಂಬಂಧಪಟ್ಟ ಅಧಿಕಾರಿಗಳು ಕಾರ್ಯ ನಿರ್ವಹಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತುರ್ತು ಸಂದರ್ಭದಲ್ಲಿ ನಾಗರಿಕರನ್ನು ರಕ್ಷಿಸುವ ವೇಳೆ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ, ಗಾಯಗೊಂಡವರಿಗೆ ಆಸ್ಪತ್ರೆಗೆ ದಾಖಲು ಮಾಡುವ ಬಗ್ಗೆ, ಪ್ರಥಮ ಚಿಕಿತ್ಸೆ, ಅಗ್ನಿಶಾಮಕ, ಪೊಲೀಸರು, ಇನ್ನಿತರ ಅಧಿಕಾರಿಗಳ ಕರ್ತವ್ಯ ಇನ್ನಿತರ ಕಾರ್ಯ ಚಟುವಟಿಕೆಗಳನ್ನು ಅಣಕು ಪ್ರದರ್ಶನದ ಮೂಲಕ ನಡೆಸಿ ಅರಿವು ಉಂಟು ಮಾಡಲಾಗುತ್ತದೆ ಎಂದು ಹೇಳಿದರು.

ಅಣಕು ಕಾರ್ಯಾಚರಣೆಗೆ ಪೂರಕವಾಗಿರುವ ಎಲ್ಲ ಸಿದ್ದತೆಗಳನ್ನು ಅಧಿಕಾರಿಗಳು ಸಮರ್ಪಕವಾಗಿ ಕೈಗೊಳ್ಳಬೇಕು. ಅಗತ್ಯವಿರುವ ವಾಹನಗಳು, ಸಲಕರಣೆಗಳು, ಕಂಟ್ರೋಲ್ ರೂಂ, ಸಿಬ್ಬಂದಿ ನಿಯೋಜನೆ, ಆಂಬುಲೆನ್ಸ್ ಕಾರ್ಯಚರಣೆ ಸೇರಿದಂತೆ ಎಲ್ಲವನ್ನು ಪರಿಪೂರ್ಣವಾಗಿ ಸಿದ್ದ ಮಾಡಿಕೊಂಡಿರಬೇಕು. ಜನರ ರಕ್ಷಣೆಗೆ ಕೈಗೊಳ್ಳಲಾಗುವ ಸುರಕ್ಷತಾ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾಕ್ ಡ್ರಿಲ್ ಮುಖಾಂತರ ತಿಳಿವಳಿಕೆ ನೀಡಬೇಕಿದೆ. ಈ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ ಮಾತನಾಡಿ ‘ ಅಣಕು ಕಾರ್ಯಚರಣೆ ಬಗ್ಗೆ ಮಾಹಿತಿ ನೀಡಿ ಜನರನ್ನು ಜಾಗೃತಗೊಳಿಸಬೇಕು. ಅವಘಡದ ಸಂದರ್ಭದಲ್ಲಿ ಹೇಗೆ ಕಾರ್ಯಚರಣೆ ಮಾಡಲಾಗುತ್ತದೆ. ಈ ಸಮಯದಲ್ಲಿ ಸಾರ್ವಜನಿಕರ ಪಾತ್ರ, ವಿವಿಧ ಇಲಾಖೆಗಳು ನಿರ್ವಹಿಸಬೇಕಿರುವ ಕರ್ತವ್ಯಗಳ ಬಗ್ಗೆ ಮನವರಿಕೆ ಮಾಡಿ ಆತ್ಮಸ್ತೈರ್ಯ ತುಂಬುವ ಕೆಲಸವನ್ನು ಮಾಡಬೇಕು ‘ ಎಂದರು.

ಈ ಸುದ್ದಿ ಓದಿದ್ದೀರಾ?ಕೊಡಗು | ಬುದ್ಧನ ಸಂದೇಶ ಇಡೀ ಮಾನವ ಕುಲಕ್ಕೆ ದಿಕ್ಸೂಚಿ : ವಿನಾಯಕ ನರ್ವಡೆ

ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಶಿಕುಮಾರ್, ಉಪ ವಿಭಾಗಾಧಿಕಾರಿ ಬಿ.ಆರ್. ಮಹೇಶ್, ತಹಶೀಲ್ದಾರರಾದ ಗಿರಿಜಾ, ರಮೇಶ್ ಬಾಬು, ಬಸವರಾಜು, ಗುರುಪ್ರಸಾದ್, ಜಿಲ್ಲ ಅಗ್ನಿಶಾಮಕ ಅಧಿಕಾರಿ ಕೆ.ಪಿ. ಗುರುರಾಜ್, ಜಿಲ್ಲಾ ಗೃಹ ರಕ್ಷಕ ದಳ ಸಮಾದೇಷ್ಟ ಎಸ್.ಜಿ. ಮಹಾಲಿಂಗಸ್ವಾಮಿ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...