ಕೋಲಾರ | ಮಾರ್ಪಡಿಸಿದ್ದ ಬೈಕ್ ಸೈಲೆನ್ಸರ್‌ಗಳನ್ನು ರೋಡ್ ರೋಲರ್ ಬಳಸಿ ಪುಡಿ ಮಾಡಿದ ಪೊಲೀಸರು

Date:

ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಮುಂದಾಗಿರುವ ಕೋಲಾರ ಪೊಲೀಸರು, ಮಾರ್ಪಡಿಸಿದ ಸೈಲೆನ್ಸರ್‌ಗಳನ್ನು ಬಳಸುತ್ತಿದ್ದ ದ್ವಿಚಕ್ರ ವಾಹನಗಳನ್ನು ಹಿಡಿದು, ವಶಕ್ಕೆ ಪಡೆದುಕೊಂಡಿದ್ದಾರೆ. ಅಂತಹ 126 ಸೈಲೆನ್ಸರ್‌ಗಳನ್ನು ರೋಡ್‌ ರೋಲರ್ ಮೂಲಕ ಪುಡಿ ಮಾಡಿದ್ದಾರೆ.

ಕೋಲಾರದ ಅಮ್ಮಾವರಪೇಟೆಯಲ್ಲಿ ಕೋಲಾರ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ ಅವರ ಸಮ್ಮುಖದಲ್ಲಿ ರೋಡ್ ರೋಲರ್ ಬಳಸಿ ಸೈಲೆನ್ಸರ್‌ಗಳನ್ನು ಪುಡಿ ಮಾಡಿದ್ದಾರೆ. ಸೈಲೆನ್ಸರ್‌ಗಳನ್ನು ಪುಡಿ ಮಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

“ಮಾರ್ಪಡಿಸಿದ ಸೈಲೆನ್ಸರ್‌ಗಳನ್ನು ಬಳಸುತ್ತಿದ್ದ ದ್ವಿಚಕ್ರ ವಾಹನಗಳ ಮಾಲೀಕರಿಗೂ ಪೊಲೀಸರು ದಂಡ ವಿಧಿಸಿದ್ದಾರೆ. ಮಾರ್ಪಡಿಸಿದ್ದ ಸೈಲೆನ್ಸರ್‌ಗಳನ್ನು ಗುರುತಿಸುವ ಕ್ರಮಗಳನ್ನು ಮುಂದುವರೆಸಲಾಗಿದೆ” ಎಂದು ನಿಖಿಲ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬೈಕ್‌ನಲ್ಲಿ ವ್ಹೀಲಿಂಗ್‌ ಮಾಡುವವರಿಗೆ ದಂಡ ವಿಧಿಸಲಾಗಿದೆ. ಬೆಂಗಳೂರು-ಚೆನ್ನೈ ರಾಷ್ಟ್ರೀಯ ಹೆದ್ದಾರಿ ಹಾಗೂ ರಾಜ್ಯ ಹೆದ್ದಾರಿಗಳಲ್ಲಿ ವ್ಹೀಲಿಂಗ್ ಮಾಡುವ ವ್ಯಕ್ತಿಗಳ ಬಗ್ಗೆ ನಿಗಾ ವಹಿಸುವಂತೆ ಪೊಲೀಸ್ ಸಿಬ್ಬಂದಿಗಳು ಮತ್ತು ಗಸ್ತು ತಂಡಗಳಿಗೆ ಸೂಚನೆ ನೀಡಲಾಗಿದೆ. ಅಂತವರ ವಾಹನಗಳನ್ನು ವಶಕ್ಕೆ ಪಡೆಯುವುದರ ಜೊತೆಗೆ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ” ಎಂದು ಅವರು ವಿವರಿಸಿದ್ದಾರೆ.

ಈ ವರದಿ ಓದಿದ್ದೀರಾ?: ಕೇಂದ್ರ ಬಜೆಟ್ | ಚುನಾವಣಾ ಫಲಿತಾಂಶಗಳು ಮತ್ತು ಆರ್ಥಿಕ ವಾಸ್ತವಗಳೇ ಆಧಾರ

“ಹೆಚ್ಚು ಶಬ್ದ ಮಾಡಿಕೊಂಡು ಅಡ್ಡಾಡುವ ವಾಹನಗಳು ಕಂಡುಬಂದರೆ ಸಾರ್ವಜನಿಕರು ಪೊಲೀಸರಿಗೆ ತಿಳಿಸಬಹುದು. ಇದರಿಂದ ವಾಹನಗಳನ್ನು ತಕ್ಷಣವೇ ಪತ್ತೆಹಚ್ಚಲು ಸಹಾಯವಾಗುತ್ತದೆ” ಎಂದು ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...