ಬೆಳಗಾವಿ | ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವರೇ ನೂತನ ಜಿಲ್ಲಾಧಿಕಾರಿ ಮೊಹಮ್ಮದ್ ರೋಶನ್

Date:

ಬೆಳಗಾವಿ ಜಿಲ್ಲಾಧಿಕಾರಿಯಾಗಿ ಸೇವೆಯಲ್ಲಿದ್ದ ನಿತೀಶ್ ಪಾಟಿಲ್ ಅವರನ್ನು ರಾಜ್ಯ ಸರ್ಕಾರವು ಬೆಂಗಳೂರಿನ ಎಂಎಸ್ಎಂಇ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಿ, ನೂತನ ಜಿಲ್ಲಾಧಿಕಾರಿಯಾಗಿ ಮೊಹಮ್ಮದ್ ರೋಶನ್ ಅವರನ್ನು ನೇಮಕ ಮಾಡಿದೆ. ಶುಕ್ರವಾರ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಅನೇಕ ಜ್ವಲಂತ ಸಮಸ್ಯೆಗಳಿದ್ದು, ಅವುಗಳನ್ನು ಪರಿಹರಿಸುವತ್ತ ಗಮನಹರಿಸಿ ಬೇಕಾಗಿದೆ.

ಕೃಷ್ಣಾನದಿ ತೀರದ ರೈತರ ಸಮಸ್ಯೆ

ಬೆಳಗಾವಿ ಮತ್ತು ಚಿಕ್ಕೋಡಿ ಕ್ಷೇತ್ರಗಳ ಗ್ರಾಮಗಳು ಮತ್ತು ಪಟ್ಟಣಗಳು ​​ಬರ ಮತ್ತು ಪ್ರವಾಹದ ಎರಡು ಸಮಸ್ಯೆಗಳಿಂದ ಬಳಲುತ್ತಿವೆ. ಕೃಷ್ಣಾ ಮತ್ತು ಅದರ ಉಪನದಿಗಳ ಮೇಲಿನ ಅಣೆಕಟ್ಟುಗಳ ವೈಜ್ಞಾನಿಕ ಮತ್ತು ಪಾರದರ್ಶಕ ನಿರ್ವಹಣೆಯಿಂದ ಈ ಎರಡೂ ಪರಿಸ್ಥಿತಿಗಳನ್ನು ಪರಿಹರಿಸಬಹುದಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೃಷ್ಣಾ ಮತ್ತು ಅದರ ಐದು ಉಪನದಿಗಳಲ್ಲಿ ಮಹಾರಾಷ್ಟ್ರದ ಗಡಿಯಿಂದ ಬಾಗಲಕೋಟೆ ಜಿಲ್ಲೆಯ ಆಲಮಟ್ಟಿ ಅಣೆಕಟ್ಟಿನವರೆಗೆ ಕನಿಷ್ಠ 11 ಅಣೆಕಟ್ಟುಗಳಿವೆ. ಅವುಗಳನ್ನು ಸಮರ್ಪಕವಾಗಿ ನಿರ್ವಹಿಸಿ ಬೆಳೆ ನಷ್ಟ ಹಾಗೂ ಇತರೆ ಸಮಸ್ಯೆಗಳನ್ನು ಎದುರಿಸಬಹುದು.

ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಶನ್

ಕೃಷ್ಣಾ ಜಲಾನಯನ ಪ್ರದೇಶದಲ್ಲಿನ ಪ್ರವಾಹದಿಂದಾಗಿ ಬೆಳೆ ನಷ್ಟ ಮತ್ತು ಗ್ರಾಮಗಳ ಸ್ಥಳಾಂತರ ಹಾಗೂ ಅತಿವೃಷ್ಟಿಯಿಂದ ಮಾತ್ರವಲ್ಲದೆ, ಮಹಾರಾಷ್ಟ್ರದ ಅಣೆಕಟ್ಟುಗಳಿಂದ ಅನಿರೀಕ್ಷಿತವಾಗಿ ನೀರನ್ನು ಬಿಡುಗಡೆ ಮಾಡುವುದರಿಂದಲೂ ಪ್ರವಾಹ ಉಂಟಾಗುತ್ತಿದೆ. ನೂತನ ಜಿಲ್ಲಾಧಿಕಾರಿಗಳು ಪ್ರವಾಹ ಪ್ರದೇಶದ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕಿದೆ.

ಬೇಸಿಗೆಯಲ್ಲಿ ನದಿ ಪಾತ್ರ ಬತ್ತದ ಹಾಗೆ ಮತ್ತು ಮಳೆಗಾಲದಲ್ಲಿ ಪ್ರವಾಹಕ್ಕೆ ಕಾರಣವಾಗದಂತೆ ಅಣೆಕಟ್ಟುಗಳನ್ನು ಸ್ವಯಂಚಾಲಿತಗೊಳಿಸಬೇಕು ಹಾಗೂ ನೀರಾವರಿ ಪ್ರದೇಶಗಳ ಕೃಷಿ ಭೂಮಿಗಳು ಜವಳು ಹೆಚ್ಚಳದ ಕಾರಣ ಫಲವತ್ತತೆಯ ಕೊರತೆಯಿಂದ ಆ ಭಾಗದ ಈ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಬೇಕಿದೆ. ಅದಕ್ಕಾಗಿ ಜಮೀನುಗಳಲ್ಲಿ ಅಡ್ಡ ಕಾಲುವೆಗಳನ್ನು ನಿರ್ಮಿಸಿ ಈ ಸಮಸ್ಯೆಗಳಿಗೆ ಪರಿಹಾರ ನೀಡಬೇಕು.

ಒಣದ್ರಾಕ್ಷಿ ಸಂರಕ್ಷಣಾ ಘಟಕ ಸ್ಥಾಪನೆ

ಚಿಕ್ಕೋಡಿ ಭಾಗದಲ್ಲಿ ರೈತರು ಹೆಚ್ಚಾಗಿ ದ್ರಾಕ್ಷಿ ಬೆಳೆಯುತ್ತಾರೆ. ಒಣ ದ್ರಾಕ್ಷಿಯನ್ನು ರಕ್ಷಿಸಲು ದ್ರಾಕ್ಷಿ ಸಂಸ್ಕರಣಾ ಘಟಕಗಳು ಸ್ಥಾಪಿಸಿದರೆ ದ್ರಾಕ್ಷಿ ಬೆಳೆಯುವ ರೈತರಿಗೆ ಅನುಕೂಲವಾಗಲಿದೆ.

ಗ್ರಾಮ ಪಂಚಾಯತ್‌ಗಳಲ್ಲಿನ ಭ್ರಷ್ಟಾಚಾರಕ್ಕೆ ಕಡಿವಾಣ ಬೀಳಬಹುದೇ?

ರಾಮದುರ್ಗ ತಾಲೂಕು ಪಂಚಾಯತ್ ವ್ಯಾಪ್ತಿ ಒಂದರಲ್ಲಿಯೇ ಕೋಟ್ಯಂತರ ರೂಪಾಯಿಗಳ ಅವ್ಯವಹಾರ ಆರೋಪ ಸಾಬೀತಾಗಿದ್ದು, ಇನ್ನೂ ಕೂಡ ಆರೋಪಿಗಳ ವಿರುದ್ಧ ಕ್ರಮವಾಗಿಲ್ಲ. ಗ್ರಾಮ ಪಂಚಾಯತ್ ಮಟ್ಟದಲ್ಲೇ ಭ್ರಷ್ಟಾಚಾರ ನಡೆಯುತ್ತಿರುವ ಬಗ್ಗೆ ಆಗಾಗ್ಗೆ ಆರೋಪಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ. ಇದಕ್ಕೆ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಕಡಿವಾಣ ಹಾಕಬೇಕಾದ ಅನಿವಾರ್ಯತೆ ಇದೆ.

ಕೂಲಿ ನೇಕಾರ ಸಮುದಾಯಕ್ಕೆ ಬೇಕಿದೆ ಸರ್ಕಾರದ ಸಹಾಯ

ಬೆಳಗಾವಿ ಜಿಲ್ಲೆಯಲ್ಲಿ ನೇಕಾರಿಕೆ ಮಾಡಿಕೊಂಡು ಬದುಕುತ್ತಿರುವ ಕೂಲಿ ನೇಕಾರರು ಅತಿಯಾದ ಸಾಲದಿಂದ ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಕೂಲಿ ನೇಕಾರರಿಗೆ ಸರ್ಕಾರದಿಂದ ವಸತಿ ಸೌಲಭ್ಯ ಸೇರಿದಂತೆ ಅವರ ಮಕ್ಕಳ ಶಿಕ್ಷಣಕ್ಕೆ ಸಹಾಯ ಮಾಡಬೇಕು ಎಂಬ ಕೂಗು ಹಲವು ವರ್ಷಗಳಿಂದ ಕೇಳಿಬರುತ್ತಿದೆ. ಇದಕ್ಕೆ ಪರಿಹಾರ ನೀಡುವ ನಿಟ್ಟಿನಲ್ಲಿ ನೂತನ ಜಿಲ್ಲಾಧಿಕಾರಿಗಳು ಗಮನ ಸೆಳೆಯಲಿದ್ದಾರೆಯೇ ಎಂಬುದು ಕಾದು ನೋಡಬೇಕಿದೆ.

ಬೆಳಗಾವಿ ಮಿಲಿಟರಿ ದಂಡು ಪ್ರದೇಶದ ಅಭಿವೃದ್ಧಿ

ಬೆಳಗಾವಿಯ ಮಿಲಿಟರಿ ದಂಡು ಪ್ರದೇಶ ನಗರ ಪಾಲಿಕೆಯ ವ್ಯಾಪ್ತಿಗೆ ಬರಲಿದೆ. ಅದನ್ನು ನಗರದ ಉಪನಗರ ವನ್ನಾಗಿ, ಅಭಿವೃದ್ಧಿಪಡಿಸಬೇಕಿದೆ. ಇಲ್ಲಿ ಸುಮಾರು ಒಂದು ಸಾವಿರದ ನೂರು ಎಕರೆ ಪ್ರದೇಶದಲ್ಲಿ 200 ದೊಡ್ಡ ಬಂಗಲೆಗಳು ಇದ್ದು, ಇವುಗಳನ್ನು ಉಳಿಸಿಕೊಳ್ಳಬೇಕಿದೆ. ನೂರಾರು ಎಕರೆ ಪ್ರದೇಶದಲ್ಲಿ ಮಿಲಿಟರಿ ಫಾರ್ಮ್ ಇದೆ. ಅದನ್ನು ಕೃಷಿ ಕಾಲೇಜು ಆಗಿ ಪರಿರ್ವರ್ತನೆ ಮಾಡಿದರೆ ಅನುಕೂಲವಾಗಲಿದೆ ಎಂಬುದು ಇಲ್ಲಿನ ಜನರ ಅಭಿಪ್ರಾಯ.

ಜಿಲ್ಲೆಯ ಪ್ರವಾಸಿ ಹಾಗೂ ಐತಿಹಾಸಿಕ ತಾಣಗಳ ಅಭಿವೃದ್ಧಿ

ಭಾರತದ ನಯಾಗಾರ ಜಲಪಾತ ಎಂದು ಕರೆಯಲ್ಪಡುವ ಗೋಕಾಕ ಫಾಲ್ಸ್ ಬಳಿ ಇರುವ 201 ಮೀಟರ್ ಉದ್ದದ ತೂಗು ಸೇತುವೆ ಸುಮಾರು ವರ್ಷಗಳಿಂದ ದುಸ್ಥಿತಿಯಲ್ಲಿದೆ. ಇದನ್ನು ಸರಿಪಡಿಸುವಂತೆ ಪ್ರವಾಸಿಗರಿಂದ ಬೇಡಿಕೆ ಇದೆಯಾದರೂ ಈವರೆಗೆ ಸೂಕ್ತ ಕ್ರಮ ಆಗಿಲ್ಲ ಹಾಗೂ ನಾಗರಾಳಿ ಅರಣ್ಯ ಪ್ರದೇಶದಲ್ಲಿ ವನ್ಯಜೀವಿಗಳ ಬೇಟೆಯಾಡುವುದನ್ನು ನಿಲ್ಲಿಸಿ ವನ್ಯಜೀವಿಗಳ ರಕ್ಷಣೆಗೆ ಕ್ರಮ ವಹಿಸಬೇಕು ಎಂಬ ಕೂಗು ಕೇಳಿಬಂದಿದೆ.

ಕಿತ್ತೂರು ರಾಣಿ ಚನ್ನಮ್ಮ ಕೋಟೆ ಸೇರಿದಂತೆ ಕಿತ್ತೂರು ನಾಡಿನ ಐತಿಹಾಸಿಕ ಸ್ಥಳಗಳನ್ನು ಅಭಿವೃದ್ಧಿಪಡಿಸಿ ಕಿತ್ತೂರು ಕ್ರಾಂತಿಯ ಇತಿಹಾಸವನ್ನು ಮುಂದಿನ ಪೀಳಿಗೆಗೆ ಉಳಿಸುವ ಕಾರ್ಯವನ್ನು ಜಿಲ್ಲಾಧಿಕಾರಿಗಳು ಮಾಡಬೇಕಿದೆ. ರಾಜ್ಯದಲ್ಲಿಯೇ ಅತಿ ಹೆಚ್ಚು ಜನ ಭೇಟಿ ನಿಡುವ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ಸರಿಯಾದ ಮೂಲಭೂತ ಸೌಕರ್ಯಗಳಿಲ್ಲ. ನೂತನ ಜಿಲ್ಲಾಧಿಕಾರಿಗಳು ಈ ಕಡೆ ಗಮನಹರಿಸಬೇಕಿದೆ.

ಬೆಳಗಾವಿಯಲ್ಲಿ 2 ವರ್ಷಗಳ ಹಿಂದೆ ಖಾಸಗಿ ಮಾರುಕಟ್ಟೆಯೊಂದು ನಿರ್ಮಾಣವಾಗಿದೆ. ಇದರಿಂದಾಗಿ ಸರ್ಕಾರವು ಕೋಟ್ಯಂತರ ರೂಪಾಯಿ ಖರ್ಚು ಮಾಡಿ ನಿರ್ಮಾಣ ಮಾಡಿದ್ದ ಎಪಿಎಂಸಿ ಮಾರುಕಟ್ಟೆಯಲ್ಲಿ ವ್ಯಾಪಾರವೇ ಇಲ್ಲದಂತಾಗಿರವುದರಿಂದ ಎಪಿಎಂಸಿ ವರ್ತಕರು ಸಂಕಷ್ಟಕ್ಕೀಡಾಗುವಂತಾಗಿದೆ.

ಬೆಳಗಾವಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಅಧಿಕಾರ ಸ್ವೀಕರಿಸಿದ ಮೊಹಮ್ಮದ್ ರೋಶನ್ ಅವರು ಬೆಳಗಾವಿ ಜಿಲ್ಲೆಯ ಈ ಎಲ್ಲ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವರೇ ಎಂದು ಮುಂದಿನ ದಿನಗಳಲ್ಲಿ ಕಾದು ನೋಡಬೇಕಿದೆ.

ಸುನಿಲ್ ಹಂಪನ್ನವರ್,

ಬೆಳಗಾವಿ ಜಿಲ್ಲಾ ಕೋ-ಆರ್ಡಿನೆಟರ್

WhatsApp Image 2025 11 17 at 5.27.06 PM
ಸುನಿಲ್ ಹಂಪನ್ನವರ
+ posts

ಬೆಳಗಾವಿ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಸುನಿಲ್ ಹಂಪನ್ನವರ
ಸುನಿಲ್ ಹಂಪನ್ನವರ
ಬೆಳಗಾವಿ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...