ಕರಾವಳಿಯಲ್ಲಿ ಮತ್ತೆ ಅನೈತಿಕ ಪೊಲೀಸ್‌ಗಿರಿ: ಐವರು ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರ ಬಂಧನ

Date:

  • ಜು.29ರಂದು ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ
  • ವೈದ್ಯರು, ಪ್ರಾಧ್ಯಾಪಕರನ್ನು ಅಡ್ಡಗಟ್ಟಿದ್ದ ತಂಡ

ಇತ್ತೀಚೆಗೆಷ್ಟೇ ಮಂಗಳೂರಿನಲ್ಲಿ ‘ಮುಸ್ಲಿಮ್’ ಎಂದು ಭಾವಿಸಿ ಖಾಸಗಿ ಸುದ್ದಿ ಸಂಸ್ಥೆಯ ವರದಿಗಾರನೋರ್ವನಿಗೆ ನಿಂದನೆ, ಬೆದರಿಕೆ ಹಾಕಿದ್ದ ಘಟನೆ ಮಾಸುವ ಮುನ್ನವೇ ಕರಾವಳಿ ಭಾಗದಲ್ಲಿ ಮತ್ತೊಂದು ಅನೈತಿಕ ಪೊಲೀಸ್‌ಗಿರಿ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಕಾರಿನಲ್ಲಿ ಹೋಗುತ್ತಿದ್ದ ವೈದ್ಯರು ಹಾಗೂ ಪ್ರಾಧ್ಯಾಪಕರನ್ನು ತಡೆದು ಅನೈತಿಕ ಪೊಲೀಸ್‌ಗಿರಿ ನಡೆಸಿದ ಆರೋಪದಲ್ಲಿ ಹಿಂದೂ ಜಾಗರಣಾ ವೇದಿಕೆಯ ಐವರು ಕಾರ್ಯಕರ್ತರನ್ನು ಉಡುಪಿ ಜಿಲ್ಲೆಯ ಕಾರ್ಕಳ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಸಂತೋಷ್ ನಂದಳಿಕೆ, ಕಾರ್ತಿಕ್ ಪೂಜಾರಿ, ಸುನೀಲ್ ಮೂಲ್ಯ ಮಿಯ್ಯಾರು, ಸಂದೀಪ್ ಪೂಜಾರಿ ಮಿಯ್ಯಾರು, ಸುಜಿತ್ ಸಫಲಿಗ ತೆಳ್ಳಾರು ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆ ಕಳೆದ ಜು.29ರಂದು ನಡೆದಿದ್ದರೂ, ಐದು ದಿನಗಳ ಬಳಿಕ ತಡವಾಗಿ ಬೆಳಕಿಗೆ ಬಂದಿದೆ.

ಮಂಗಳೂರಿನ ಕಾಲೇಜೊಂದರ ನಾಲ್ವರು ವೈದ್ಯರು ಹಾಗೂ ಅದೇ ಕಾಲೇಜಿನ ಇಬ್ಬರು ಮಹಿಳಾ ಪ್ರೊಫೆಸರ್ ಅವರೊಂದಿಗೆ ಒಂದೇ ಕಾರಿನಲ್ಲಿ ತೆರಳುತ್ತಿದ್ದಾಗ ಬೆನ್ನಟ್ಟಿಕೊಂಡು ಬಂದು ಹಿಂಜಾವೇ ಕಾರ್ಯಕರ್ತರು, ಕಾರ್ಕಳದ ಕುಂಟಲ್ಪಾಡಿ ಎಂಬಲ್ಲಿ ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ಬೈದು ಬೆದರಿಕೆ ಹಾಕಿದ್ದಾರೆಂದು ದೂರಲಾಗಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಈ ಹತ್ಯೆಗಳಲ್ಲಿ ಮೋದಿ- ಯೋಗಿ- ಮೀಡಿಯಾ ಸಮಾನ ಪಾಲುದಾರರು

ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ್ದ ಕಾರ್ಕಳ ಡಿವೈಎಸ್ಪಿ ಅರವಿಂದ ಕಲ್ಲಗುಜ್ಜೆ, ಪೊಲೀಸ್ ವೃತ್ತ ನಿರೀಕ್ಷಕ ನಾಗರಾಜ್, ಎಸ್ಸೈ ಸಂದೀಪ್ ಶೆಟ್ಟಿ ಐವರನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ.

ಘಟನೆಯ ಸಂಬಂಧ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನೂ ನಿಲ್ಲದ ಅನೈತಿಕ ಪೊಲೀಸ್‌ಗಿರಿ
ಮಂಗಳೂರು ಸೇರಿದಂತೆ ಕರಾವಳಿ ಭಾಗದಲ್ಲಿ ಅನೈತಿಕ ಪೊಲೀಸ್‌ಗಿರಿ ನಡೆಯುವುದನ್ನು ತಡೆಯಲು ಸರ್ಕಾರ ಹಾಗೂ ಪೊಲೀಸ್ ಇಲಾಖೆ ‘ಆ್ಯಂಟಿ ಕಮ್ಯೂನಲ್ ವಿಂಗ್’ ಸ್ಥಾಪಿಸಿ ಇಂತಹ ಘಟನೆ ನಡೆಯದಂತೆ ಶ್ರಮ ವಹಿಸುತ್ತಲೇ ಇದೆ. ಆದರೆ ಇಂತಹ ಘಟನೆಗಳಿಗೆ ಬ್ರೇಕ್ ಬಿದ್ದಿಲ್ಲ ಅನ್ನುವುದು ಮಾತ್ರ ವಿಪರ್ಯಾಸ.

ಕಳೆದ ಹತ್ತು ದಿನಗಳ ಅಂತರದಲ್ಲಿ ಕರಾವಳಿ ಭಾಗದಲ್ಲಿ ವರದಿಯಾದ ಮೂರನೇ ಘಟನೆ ಇದು. ವಾರದ ಹಿಂದೆ ಪೊಲೀಸ್ ಕುಟುಂಬ ಹಾಗೂ ಆ ಬಳಿಕ ವರದಿಗಾರನೋರ್ವನಿಗೆ ನಿಂದನೆ, ಬೆದರಿಕೆ ಹಾಕಿದ್ದ ಘಟನೆ ನಡೆದಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...