ರಾಯಚೂರು | ಸಹಜ ಸಾವಿಗಿಂತ ಅಧಿಕ ಮಂದಿ ರಸ್ತೆ ಅಪಘಾತದಲ್ಲಿ ಸಾಯುತ್ತಿದ್ದಾರೆ : ಎಸ್‌ಪಿ ಪುಟ್ಟಮಾದಯ್ಯ

Date:

ರಸ್ತೆ ಅಪಘಾತಗಳ ನಿಯಂತ್ರಣಕ್ಕೆ ರಸ್ತೆ ಸುರಕ್ಷತಾ ನಿಯಮಗಳನ್ನು ಅನುಸರಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಸಹಜ ಸಾವಿಗಿಂತ ದುಪ್ಪಟ್ಟು ಜನರು ರಸ್ತೆ ಅಪಘಾತದಲ್ಲಿ ಜೀವ ಕಳೆದುಕೊಳ್ಳುತ್ತಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ರಾಯಚೂರು ಪುಟ್ಟಮಾದಯ್ಯ ಹೇಳಿದರು.

ರಾಯಚೂರು ನಗರದ ಸದರ ಬಜಾರ್ ಠಾಣೆಯಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯಿಂದ ಆಯೋಜಿಸಲಾಗಿದ್ದ ರಸ್ತೆ ಸಂಚಾರ ಜಾಗೃತಿ ಮತ್ತು ಮೋಟಾರ ವಾಹನ ಕಾಯ್ದೆ ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಜನಸಂಖ್ಯೆ ಹೆಚ್ಚಳವಾದಂತೆ ವಾಹನಗಳ ಸಂಖ್ಯೆಯೂ ಹೆಚ್ಚಳವಾಗುತ್ತಿವೆ. ವಯೋಸಹಜ ಸಾವಿಗಿಂತ ದುಪ್ಪಟ್ಟು ಜನರು ರಸ್ತೆ ಅಪಘಾತದಲ್ಲಿ ಜೀವ ಕಳೆದುಕೊಳ್ಳುತ್ತಿದ್ದಾರೆ. ವಾಹನ ಚಾಲನೆ ಸುರಕ್ಷತೆ ಪಾಲಿಸುವುದು ಪ್ರತಿಷ್ಠೆಯಾಗಿಸಿಕೊಳ್ಳದೇ ನಿಯಮ ಪಾಲನೆ ಎಲ್ಲರ ಕರ್ತವ್ಯವಾಗಬೇಕಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾರಿಗೆ ಮತ್ತು ಪೊಲೀಸರ ದಂಡ ಹಾಕುವದರಿಂದ ಮಾತ್ರ ರಸ್ತೆ ಅಪಘಾತ ನಿಯಂತ್ರಿಸಲು ಸಾಧ್ಯವಾಗುವುದಿಲ್ಲ. ಪ್ರತಿಯೊಬ್ಬ ವಾಹನ ಸವಾರರು ಸಹ ನಿಯಮ ಪಾಲನೆಯನ್ನು ರೂಢಿಸಿಕೊಳ್ಳಬೇಕಿದೆ. ಆಟೋ ಚಾಲಕರು, ವಾಹನ ಚಾಲಕರು ನಿಯಮ ಪಾಲಿಸುವ ಮೂಲಕ ಪ್ರಾಣಹಾನಿಯನ್ನು ನಿಯಂತ್ರಿಸಬೇಕಿದೆ. ರಸ್ತೆ ಅಪಘಾತದಲ್ಲಿ ಜೀವ ಕಳೆದುಕೊಳ್ಳುವುದರಿಂದ ಕುಟುಂಬಕ್ಕೆ ಮಾತ್ರವಲ್ಲದೆ, ದೇಶಕ್ಕೂ ಸಮಸ್ಯೆಯಾಗುತ್ತದೆ ಎಂದು ಹೇಳಿದರು.

ನಂತರ ಮಾತನಾಡಿದ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಡಾ.ಶಿವುಕುಮಾರ್, ರಸ್ತೆ ಅಪಘಾತ ನಿಯಂತ್ರಣಕ್ಕೆ ಸಾಕಷ್ಟು ಜಾಗೃತಿ ಕಾರ್ಯಕ್ರಮಗಳನ್ನು ಇಲಾಖೆ ನಡೆಸುತ್ತಾ ಬಂದಿದೆ. ದೇಶದಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚಳವಾಗುತ್ತಿರುವುದು ಕಳವಳಕಾರಿ. ವಾಹನ ಚಾಲಕರು ಚಾಲನಾ ಪರವಾನಿಗೆ, ವಿಮೆ, ಹೆಲ್ಮೆಟ್ ಬಳಸುವುದನ್ನು ರೂಢಿಸಿಕೊಳ್ಳುವುದು ಬಹಳ ಅವಶ್ಯಕತೆ. ಇದರಿಂದ ಅಪಘಾತ ಸಮಸ್ಯೆಯಿಂದ ಉಳಿಯಬಹುದು.

ಇದನ್ನು ಓದಿದ್ದೀರಾ? ವಿಜಯನಗರ | ಹೆದ್ದಾರಿಯಲ್ಲಿ ದಾಖಲೆ ತಪಾಸಣೆ ವೇಳೆ ಅಪಘಾತ; ಚಾಲಕ ಸಾವು

ಶೇ.30ರಷ್ಟು ಪ್ರಕರಣಗಳಲ್ಲಿ ಸಮರ್ಪಕ ದಾಖಲೆಗಳಿಲ್ಲದೇ ಇರುವುದರಿಂದ ಪರಿಹಾರದಿಂದಲೂ ವಂಚಿತರಾಗುತ್ತಿದ್ದಾರೆ. ಹಿಟ್ ಆಂಡ್ ರನ್ ಪ್ರಕರಣದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆ ಸಮಿತಿಯಿಂದ 2 ಲಕ್ಷ ರೂ ಪರಿಹಾರ ಒದಗಿಸಲಾಗುತ್ತದೆ. ಗಾಯಗೊಂಡವರಿಗೆ 50 ಸಾವಿರ ರೂ ಪರಿಹಾರ ಒದಗಿಸುವ ಅವಕಾಶವಿದೆ. ಬಹುತೇಕ ಜನರಿಗೆ ಅಪಘಾತ ಪ್ರಕ್ರಿಯೆಗಳ ಮಾಹಿತಿಯ ಕೊರತೆಯಿದೆ. ಪಾಲಕರು ತಮ್ಮ ಮಕ್ಕಳಿಗೆ ವಾಹನ ಚಾಲನೆ ಬಗ್ಗೆ ಎಚ್ಚರಿಕೆ ನೀಡಿ, ಮನವರಿಕೆ ಮಾಡಿಕೊಡುವ ಮೂಲಕ ರಸ್ತೆ ಅಪಘಾತಗಳ ನಿಯಂತ್ರಣ ಮಾಡಬಹುದು ಎಂದರು.

ವೇದಿಕೆಯಲ್ಲಿ ಡಿವೈಎಸ್‌ಪಿ ಸತ್ಯನಾರಾಯಣ, ಸದರ ಬಜಾರ ಠಾಣೆ ಪಿಐ ಉಮೇಶ ಕಾಂಬ್ಳೆ, ನಾಗರಾಜ ಸೇರಿದಂತೆ ಪೊಲೀಸ್ ಅಧಿಕಾರಿಗಳು, ವಿವಿಧ ಶಾಲಾ ಮಕ್ಕಳು, ಆಟೋ ಚಾಲಕರು, ಭಾಗವಹಿಸಿದ್ದರು.

ವರದಿ : ಹಫೀಜುಲ್ಲ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...