ಟ್ರಸ್ಟ್‌ಗಳ ಕಾರ್ಯನಿರ್ವಹಣೆಗೆ ಹೆಚ್ಚಿನ ಬಲ ತುಂಬುವೆ : ಸಚಿವ ಶಿವರಾಜ್ ತಂಗಡಗಿ

Date:

  • ವಿವಿಧ ಟ್ರಸ್ಟ್‌ಗಳ ಅಧ್ಯಕ್ಷರು, ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿದ ಸಚಿವರು
  • ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಯಲ್ಲಿ 24 ಟ್ರಸ್ಟ್‌ಗಳ ಕಾರ್ಯ ನಿರ್ವಹಣೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಗೆ ಬರುವ ವಿವಿಧ ಟ್ರಸ್ಟ್‌ಗಳ ಕಾರ್ಯನಿರ್ವಹಣೆಗೆ ಹೆಚ್ಚಿನ ಬಲ ತುಂಬಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ ಹೇಳಿದರು.

ಕನ್ನಡ ಭವನದಲ್ಲಿ ಶನಿವಾರ ವಿವಿಧ ಟ್ರಸ್ಟ್‌ಗಳ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳೊಂದಿಗೆ ನಡೆಸಿದ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿ, “ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಯಲ್ಲಿ 24 ಟ್ರಸ್ಟ್‌ಗಳು ಕಾರ್ಯ ನಿರ್ವಹಿಸುತ್ತಿವೆ. ಪ್ರತಿವರ್ಷ ಈ ಟ್ರಸ್ಟ್‌ಗಳ ಕಾರ್ಯ ಚಟುವಟಿಕೆಗಾಗಿ ಅನುದಾನ ಒದಗಿಸಲಾಗುತ್ತಿದೆ” ಎಂದರು.

ಗುಬ್ಬಿ ವೀರಣ್ಣ ರಂಗಮಂದಿರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಮಾಜಿ ಸಂಸದೆ ಬಿ.ಜಯಶ್ರೀ ಅವರು ಅನುದಾನ ಹೆಚ್ಚಳಕ್ಕೆ ಮನವಿ ಮಾಡಿ, ಅದರ ಕಾರ್ಯ ಚಟುವಟಿಕೆ ವೀಕ್ಷಿಸಲು ಸಚಿವರನ್ನು ಆಹ್ವಾನಿಸಿದರು. ಬೆಟಗೇರಿ ಕೃಷ್ಣಶರ್ಮರ ಮನೆಯನ್ನು ಸ್ಮಾರಕವಾಗಿಸುವುದರ ಬಗ್ಗೆ ಸಚಿವರ ಗಮನ ಸೆಳೆಯಲಾಯಿತು. ಸಚಿವರು ಅದಕ್ಕೆ ಪೂರಕವಾಗಿ ಸ್ಪಂದಿಸಿ “ಈ ಬಗ್ಗೆ ವಿವರಗಳನ್ನು ತರಿಸಿಕೊಳ್ಳುತ್ತೇನೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗಳಗನಾಥ ಮತ್ತು ರಾಜ ಪುರೋಹಿತ ಟ್ರಸ್ಟ್ ಗಳು ಕಟ್ಟಡ ನಿರ್ಮಾಣಕ್ಕೆ ಎರಡು ಕೋಟಿ ಪ್ರಸ್ತಾವನೆ ಸಲ್ಲಿಸಿರುವುದಾಗಿ ಸಚಿವರ ಗಮನಕ್ಕೆ ತರಲಾಯಿತು. ಹಾಲಬಾವಿ ಟ್ರಸ್ಟ್ ನವರು ಅವರ ಹೆಸರಿನಲ್ಲಿ ಆರ್ಟ್ ಗ್ಯಾಲರಿ ಒಂದನ್ನು ನಿರ್ಮಾಣ ಮಾಡಬೇಕು ಎಂಬ ಬೇಡಿಕೆಯನ್ನು ಸಚಿವರ ಮುಂದಿಟ್ಟರು.

ಈ ಸುದ್ದಿ ಓದಿದ್ದೀರಾ? ಇದು ನನ್ನ ಕೊನೆ ಚುನಾವಣೆ; ಸಕ್ರಿಯ ರಾಜಕಾರಣದಲ್ಲಿದ್ದು ಸೇವೆ ಮಾಡುವೆ: ಸಿಎಂ ಸಿದ್ದರಾಮಯ್ಯ

ನಿಜಲಿಂಗಪ್ಪ ಟ್ರಸ್ಟ್ ಪರವಾಗಿ ಮಾಜಿ ಸಂಸದ ಹನುಮಂತಪ್ಪ ಅವರು ಮಾತನಾಡಿ ಸರ್ಕಾರಿ ಅಧಿಕಾರಿಗಳ ನೇಮಕದ ಬಗ್ಗೆ ಪರಿಶೀಲನೆ ನಡೆಸಬೇಕೆಂದು ಕೋರಿದರು. ಕುವೆಂಪು ಟ್ರಸ್ಟ್ ನ ಕಾರ್ಯದರ್ಶಿ ಕಡಿದಾಳ್ ರಮೇಶ್ ಅವರು ಮಾತನಾಡಿ, “ಕುವೆಂಪು ಅವರ ಮನೆಯನ್ನು ರಾಷ್ಟ್ರದ ಅತ್ಯುತ್ತಮ ಕವಿಮನೆಯನ್ನಾಗಿ ಮಾಡಿದ್ದೇವೆ. ಇದು ಇಡೀ ರಾಷ್ಟ್ರದ ಗಮನ ಸೆಳೆಯುವಂತೆ ಮಾಡಲು ಗಣರಾಜ್ಯೋತ್ಸವ ಹಾಗೂ ಸ್ವಾತಂತ್ರ್ಯೋತ್ಸವದ ಸಂದರ್ಭಗಳಲ್ಲಿ ಮತ್ತು ದಸರಾ ಪ್ರದರ್ಶನಗಳಲ್ಲಿ ಕುವೆಂಪು ಅವರ ಮನೆಯ ಟ್ಯಾಬ್ಲೋ ಮಾಡಿ ಪ್ರದರ್ಶಿಸಿದರೆ ಒಳ್ಳೆಯ ಪ್ರಚಾರ ಸಿಗುತ್ತದೆ” ಎಂದರು

ಬೇಂದ್ರೆ ಟ್ರಸ್ಟ್ ವತಿಯಿಂದ ಬೇಂದ್ರೆ ಅವರ ಜನ್ಮದಿನವನ್ನು ವಿಶ್ವಕವಿ ದಿನಾಚರಣೆ ಎಂದು ಆಚರಿಸುವಂತೆ ಕೋರಲಾಯಿತು. “ಎಲ್ಲ ಟ್ರಸ್ಟ್‌ಗಳ ಮನವಿಗಳನ್ನು ತಾವು ಅತ್ಯಂತ ಸಕಾರಾತ್ಮಕ ದೃಷ್ಟಿಯಿಂದಲೇ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುತ್ತೇನೆ. ಟ್ರಸ್ಟ್ ಕಾರ್ಯನಿರ್ವಹಣೆಗೆ ಅಗತ್ಯವಾದ ಅನುದಾನ ಹೆಚ್ಚಿಸಲು ತಾವು ಮುಂಬರುವ ಆಯವ್ಯಯದಲ್ಲಿ ಹೆಚ್ಚಿನ ಅನುದಾನ ಕೊಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತೇನೆ” ಎಂದು ಸಚಿವರು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...