ಮೈಸೂರು | ಹುಲಿ ಸಂರಕ್ಷಣಾ ಸಂಭ್ರಮ ದಿನ ವಿರೋಧಿಸಿ ಆದಿವಾಸಿಗಳಿಂದ ಶೋಕ ದಿನ ಆಚರಣೆ

Date:

  • 50 ವರ್ಷ ಕಳೆದರೂ ಆದಿವಾಸಿಗಳಿಗೆ ಸಿಗದ ಸರಿಯಾದ ಪುರ್ವಸತಿ; ಬೇಸರ
  • ನಾಗರಹೊಳೆ ಉದ್ಯಾನದಿಂದ 3,418 ಕುಟುಂಬಗಳನ್ನು ಹೊರಹಾಕಲಾಗಿತ್ತು

ಹುಲಿ ಸಂರಕ್ಷಣೆ ಹೆಸರಿನಲ್ಲಿ ಅರಣ್ಯ ಇಲಾಖೆಯು ಆದಿವಾಸಿಗಳ ಹಕ್ಕನ್ನು ಮಾನ್ಯ ಮಾಡದೆ ಅತಂತ್ರಗೊಳಿಸಿದೆ ಎಂದು ಆರೋಪಿಸಿ ಹುಲಿ ಸಂರಕ್ಷಣಾ ಸಂಭ್ರಮ ದಿನಾಚರಣೆಯನ್ನು ವಿರೋಧಿಸಿ ಹುಣಸೂರಿನಲ್ಲಿ ಆದಿವಾಸಿಗಳು ‘ಶೋಕದಿನ’ ಆಚರಿಸಿದರು.

ಹುಣಸೂರು ನಗರದ ಸಂವಿಧಾನ ವೃತ್ತದಲ್ಲಿ ಜಮಾಯಿಸಿದ ಆದಿವಾಸಿ ಮುಖಂಡರು, ವನ್ಯಜೀವಿ ಸಂರಕ್ಷಣೆ ಹೆಸರಿನಲ್ಲಿ ಕಾಡನ್ನು ಕಳೆದುಕೊಂಡು ಅದರ ನೆಪದಲ್ಲೇ ಅಸುನೀಗಿದ ಹಿರಿಯರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

ಈ ವೇಳೆ ಬುಡಕಟ್ಟು ಕೃಷಿಕರ ಸಂಘದ ಅಧ್ಯಕ್ಷ ಪಿ ಕೆ ರಾಮು ಮಾತನಾಡಿ, “ಹುಲಿ ಯೋಜನೆಗೆ 50 ವರ್ಷ ತುಂಬಿರುವುದು ಅರಣ್ಯ ಇಲಾಖೆಗೆ ಸಂಭ್ರಮ. ಆದರೆ, 50 ವರ್ಷಗಳ ಹಿಂದೆ 1972ರ ವನ್ಯಜೀವಿ ಸಂರಕ್ಷಣಾ ಕಾಯ್ದೆ ಹೆಸರಿನಲ್ಲಿ ಸರ್ಕಾರವೇ ನಮ್ಮನ್ನು ಕಾಡಿನಿಂದ ಹೊರಗಟ್ಟಿದೆ. ಆದರೆ, ಈವರೆಗೂ ನಮಗೆ ಸರಿಯಾದ ಪುರ್ನವಸತಿ ಕಲ್ಪಿಸದಿರುವುದು ಚಾರಿತ್ರಿಕ ಅನ್ಯಾಯ. ಇದನ್ನು ಸರಿಪಡಿಸಲೆಂದೆ ಜಾರಿಗೆ ತಂದ ಅರಣ್ಯ ಹಕ್ಕುಮಾನ್ಯತಾ ಕಾಯ್ದೆ- 2006ನ್ನು ನ್ಯಾಯಬದ್ಧವಾಗಿ ಅನುಷ್ಠಾನಗೊಳಿಸದೆ ಅನ್ಯಾಯವಾಗಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾಗರಹೊಳೆ ಉದ್ಯಾನದಿಂದ ಹೊರಹಾಕಲ್ಪಟ್ಟ 3,418 ಕುಟುಂಬಗಳಿಗೆ ಪ್ರೊ. ಮುಜಾಫರ್‌ ಅಸ್ಸಾದಿ ವರದಿಯ ಅನ್ವಯ ಪುರ್ನವಸತಿ ಕಲ್ಪಿಸದೆ ಹೈಕೋರ್ಟ್‌ ಆದೇಶವನ್ನೇ ಉಲ್ಲಂಘಿಸಿದ್ದಾರೆ. ಈ ಸಂಬಂಧ ಮೈಸೂರಿಗೆ ಆಗಮಿಸಿದ್ದ ಪ್ರಧಾನಿಗಳಿಗೆ ಮನವರಿಕೆ ಮಾಡಿಕೊಡಲು ಅನುಮತಿ ಸಿಗಲಿಲ್ಲ. ಹೀಗಾಗಿ ಈ ದಿನವನ್ನು ಶೋಕದ ದಿನವಾಗಿ ಆಚರಿಸಲಾಗಿದ್ದು, ಕಾಡಿನ ಚಿಂತೆಯಲ್ಲೇ ಅಸುನೀಗಿದ ಹಿರಿಯರಿಗೆ ಶ್ರದ್ದಾಂಜಲಿ ಸಲ್ಲಿಸಿ ಪ್ರತಿಭಟನೆ ನಡೆಸಲಾಗಿದೆ” ಎಂದರು.

ದಲಿತ ಚಳವಳಿಯ ನವನಿರ್ಮಾಣ ವೇದಿಕೆಯ ಹರಿಹರ ಆನಂದಸ್ವಾಮಿ ಮಾತನಾಡಿ, “ಪ್ರಧಾನ ಮಂತ್ರಿಗಳು ಎಂಟು ಬಾರಿ ರಾಜ್ಯಕ್ಕೆ ಬಂದಿದ್ದರೂ ಒಮ್ಮೆಯೂ ಆದಿವಾಸಿಗಳ ಸಮಸ್ಯೆ ಕುರಿತು ಚರ್ಚಿಸಲಿಲ್ಲ. ವನ್ಯಜೀವಿ ಸಂರಕ್ಷಣೆ ಹೆಸರಿನಲ್ಲಿ ಗಿರಿಜನರು ಸಂಕಷ್ಟಕ್ಕೊಳಗಾಗಿದ್ದಾರೆ. ಆಡಳಿತ ವ್ಯವಸ್ಥೆ ಸತ್ತುಹೋಗಿದೆ. ಇನ್ನು ಮುಂದಾದರೂ ಗಂಭೀರವಾಗಿ ಪರಿಗಣಿಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ ? ತುಮಕೂರು | ದೇವಾಲಯ ಪ್ರವೇಶ ಆರೋಪ; ದಲಿತ ಯುವಕನಿಗೆ ಮಾರಣಾಂತಿಕ ಹಲ್ಲೆ

ಡೀಡ್‌ನ ಡಾ. ಎಸ್ ಶ್ರೀಕಾಂತ್ ಮಾತನಾಡಿ, “ಆದಿವಾಸಿ ಮಹಿಳೆಯನ್ನು ರಾಷ್ಟ್ರಪತಿಯನ್ನಾಗಿಸಿದ್ದಾರೆ. ಬಿರ್ಸಾಮುಂಡಾ ಜಯಂತಿ ಆಚರಣೆಗೆ ಅವಕಾಶ ಕಲ್ಪಿಸಿದ್ದಾರೆ. ಆದರೆ, ಕಳೆದ 50 ವರ್ಷಗಳಿಂದ ಆದಿವಾಸಿಗಳು ಪುನರ್ವಸತಿಗಾಗಿ ಸಾಕಷ್ಟು ಹೋರಾಟ ನಡೆಸಿದ್ದಾರೆ. ನ್ಯಾಯಾಲಯವು ಆದಿವಾಸಿಗಳ ಪರವಾಗಿ ಆದೇಶ ನೀಡಿದೆ. ಆದರೆ, ಅರಣ್ಯ ಇಲಾಖೆ, ಸರ್ಕಾರ ಅನ್ಯಾಯ ಮಾಡುತ್ತಲೇ ಬಂದಿದ್ದು, ಇನ್ನಾದರೂ ಆದಿವಾಸಿಗಳಿಗೆ ನ್ಯಾಯ ಸಿಗುವಂತಾಗಲಿ” ಎಂದು ಒತ್ತಾಯಿಸಿದರು.

ನಂತರ ತಾಲೂಕು ಕಚೇರಿ ವರೆಗೆ ಮೆರವಣಿಗೆಯಲ್ಲಿ ತೆರಳಿ ಕಂದಾಯಾಧಿಕಾರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಆದಿವಾಸಿ ಮುಖಂಡರಾದ ಜಯಪ್ಪ, ಹರ್ಷ, ಶಿವಣ್ಣ, ಪ್ರಕಾಶ್, ವಿಠಲ್, ಅರಪೇಟಯ್ಯ, ಜ್ಯೋತಿ, ಚಂದ್ರ, ಕಲ್ಲುರಯ್ಯ, ಕೀರ್ತಿ, ಚಿತ್ರ, ನಿತ್ಯ, ಮೌನ, ದರ್ಶನ್, ಕಬ್ಬಾಳಯ್ಯ, ಈರಯ್ಯ, ರಕ್ಷಿತ ಹಾಗೂ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...