ನಾನಾ ನಗರಗಳಿಗೆ ಏಕಮಾರ್ಗದ ವಿಶೇಷ ರೈಲುಗಳ ಸಂಚಾರ: ನೈರುತ್ಯ ರೈಲ್ವೆ

Date:

ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಕಡಿಮೆಗೊಳಿಸುವ ಸಲುವಾಗಿ ನಾನಾ ನಗರಗಳಿಗೆ ವಿಶೇಷ ರೈಲುಗಳನ್ನು ಓಡಿಸಲು ನೈರುತ್ಯ ರೈಲ್ವೆ ಇಲಾಖೆ ನಿರ್ಧರಿಸಿದೆ.

1. ಹುಬ್ಬಳ್ಳಿ- ಉತ್ತರ ಪ್ರದೇಶದ ಕಾನ್ಪುರ ನಡುವೆ ವಿಶೇಷ ರೈಲು(06557)

ಮೇ 27 ರಂದು ರಾತ್ರಿ 11:50 ಗಂಟೆಗೆ ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ನಿಲ್ದಾಣದಿಂದ ಹೊರಟು, ಮೇ 29 ರ ಬೆಳಿಗ್ಗೆ 11:10 ಗಂಟೆಗೆ ಕಾನ್ಪುರ ಸೆಂಟ್ರಲ್ ನಿಲ್ದಾಣವನ್ನು ತಲುಪಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ರೈಲು ಮಾರ್ಗದಲ್ಲಿ ಗದಗ, ಬಾದಾಮಿ, ಬಾಗಲಕೋಟೆ, ಬಸವನ ಬಾಗೇವಾಡಿ ರೋಡ್‌, ವಿಜಯಪುರ, ಸೊಲ್ಲಾಪುರ, ಕುರ್ದುವಾಡಿ, ದೌಂಡ್, ಅಹ್ಮದ್‌ನಗರ, ಕೋಪರಗಾಂವ್, ಮನ್ಮಾಡ್, ಭೂಸಾವಲ್, ಇಟಾರ್ಸಿ, ರಾಣಿ ಕಮಲಾಪತಿ, ವಿರಂಗನಾ ಲಕ್ಷ್ಮೀಬಾಯಿ ಝಾನ್ಸಿ ಮತ್ತು ಓರೈ ಈ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿವೆ.

ಈ ವಿಶೇಷ ರೈಲು (2) ಎಸಿ ತ್ರಿ ಟೈಯರ್ ಬೋಗಿ, (11) ಸೆಕೆಂಡ್ ಕ್ಲಾಸ್ ಸ್ಲೀಪರ್ ಬೋಗಿಗಳು, (6) ಜನರಲ್ ಸೆಕೆಂಡ್ ಕ್ಲಾಸ್ ಬೋಗಿಗಳು ಮತ್ತು (2) ದಿವ್ಯಾಂಗಸ್ನೇಹಿ ಕಂಪಾರ್ಟ್‌ಮೆಂಟ್‌ಗಳಿಂದ ಕೂಡಿದ ಸೆಕೆಂಡ್ ಕ್ಲಾಸ್ ಕಮ್ ಲಗೇಜ್ ಮತ್ತು ಬ್ರೇಕ್ ವ್ಯಾನ್ ಹೊಂದಿವೆ.

2. ಯಶವಂತಪುರ – ವಡೋದರಾದ ವಿಶ್ವಾಮಿತ್ರಿ ನಡುವೆ ವಿಶೇಷ ರೈಲು

ಈ ರೈಲು (06565) ಮೇ 27ರಂದು ಬೆಳಿಗ್ಗೆ 8:15 ಗಂಟೆಗೆ ಯಶವಂತಪುರ ನಿಲ್ದಾಣದಿಂದ ಹೊರಟು, ಮರುದಿನ ಸಂಜೆ 4:30 ಗಂಟೆಗೆ ವಡೋದರಾ ನಗರದ ವಿಶ್ವಾಮಿತ್ರಿ ಜಂಕ್ಷನ್‌ಗೆ ತಲುಪಲಿದೆ.

ಈ ರೈಲು ಮಾರ್ಗದಲ್ಲಿ ತುಮಕೂರು, ಅರಸೀಕೆರೆ, ಚಿಕ್ಕಜಾಜೂರ್, ದಾವಣಗೆರೆ, ಕೊಟ್ಟೂರು, ಕೊಪ್ಪಳ, ಗದಗ, ಎಸ್‌ಎಸ್‌ಎಸ್‌ ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಮೀರಜ್, ಪುಣೆ, ವಸಾಯಿ ರೋಡ್, ವಾಪಿ ಮತ್ತು ಸೂರತ್ ಈ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿವೆ.

ಈ ವಿಶೇಷ ರೈಲು (1) ಎಸಿ ತ್ರಿ ಟೈಯರ್ ಬೋಗಿ, (18) ಸೆಕೆಂಡ್ ಕ್ಲಾಸ್ ಸ್ಲೀಪರ್ ಬೋಗಿಗಳು ಮತ್ತು (2) ದಿವ್ಯಾಂಗಸ್ನೇಹಿ ಕಂಪಾರ್ಟ್‌ಮೆಂಟ್‌ಗಳಿಂದ ಕೂಡಿದ ಸೆಕೆಂಡ್ ಕ್ಲಾಸ್ ಕಮ್ ಲಗೇಜ್ ಮತ್ತು ಬ್ರೇಕ್ ವ್ಯಾನ್ ಹೊಂದಿರಲಿದೆ.

3. ಬೆಂಗಳೂರು – ಹೌರಾ ನಡುವೆ ವಿಶೇಷ ರೈಲು

ಈ ರೈಲು (06569) ಮೇ 28 ರಂದು ರಾತ್ರಿ 12:30 ಗಂಟೆಗೆ ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಿಲ್ದಾಣದಿಂದ ಹೊರಟು, ಮರುದಿನ ಬೆಳಿಗ್ಗೆ 11:45 ಗಂಟೆಗೆ ಹೌರಾ ನಿಲ್ದಾಣವನ್ನು ತಲುಪಲಿದೆ.

ಈ ರೈಲು ಮಾರ್ಗದಲ್ಲಿ ಕೃಷ್ಣರಾಜಪುರಂ, ಬಂಗಾರಪೇಟೆ, ಜೋಲಾರ್‌ಪೇಟೆ, ಕಟಪಾಡಿ, ರೇಣಿಗುಂಟಾ, ವಿಜಯವಾಡ, ರಾಜಮಂಡ್ರಿ, ದುವ್ವಾಡ, ಕೊಟ್ಟವಲಸಾ, ವಿಜಯನಗರಂ ಜಂ, ಶ್ರೀಕಾಕುಲಂ, ಪಲಾಸ, ಬ್ರಹ್ಮಪುರ, ಖುರ್ದಾ ರೋಡ್‌, ಭುವನೇಶ್ವರ, ಕಟಕ್‌, ಜಾಜ್‌ಪುರ ಕೆ. ರೋಡ್‌, ಭದ್ರಖ್, ಖರಗ್‌ಪುರ ಜಂ ಈ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿವೆ.

ಈ ವಿಶೇಷ ರೈಲು (1) ಎಸಿ ತ್ರಿ ಟೈಯರ್ ಬೋಗಿ, (14) ಸೆಕೆಂಡ್ ಕ್ಲಾಸ್ ಸ್ಲೀಪರ್ ಬೋಗಿಗಳು ಮತ್ತು (2) ದಿವ್ಯಾಂಗಸ್ನೇಹಿ ಕಂಪಾರ್ಟ್‌ಮೆಂಟ್‌ಗಳಿಂದ ಕೂಡಿದ ಸೆಕೆಂಡ್ ಕ್ಲಾಸ್ ಕಮ್ ಲಗೇಜ್ ಮತ್ತು ಬ್ರೇಕ್ ವ್ಯಾನ್ ಹೊಂದಿರಲಿವೆ.

4. ಬೆಂಗಳೂರು – ಬಿಹಾರದ ದಾನಪುರ ನಡುವೆ ವಿಶೇಷ ರೈಲು

ಈ ರೈಲು (06567) ಮೇ 30 ರಂದು ಬೆಳಿಗ್ಗೆ 6:50 ಗಂಟೆಗೆ ಯಶವಂತಪುರ ನಿಲ್ದಾಣದಿಂದ ಹೊರಟು, ಮೂರನೇ ದಿನ ಬೆಳಿಗ್ಗೆ 8 ಗಂಟೆಗೆ ದಾನಪುರ್‌ ನಿಲ್ದಾಣವನ್ನು ತಲುಪಲಿದೆ.

ಈ ಸುದ್ದಿ ಓದಿದ್ದೀರಾ? ರಣ ಬಿಸಿಲಿನ ಝಳದ ಜತೆಗೆ ಜನರಿಗೆ ಹೆಸ್ಕಾಂ ಶಾಕ್‌

ಈ ರೈಲು ಮಾರ್ಗದಲ್ಲಿ ಕೃಷ್ಣರಾಜಪುರಂ, ಜೋಲಾರ್‌ಪೆಟ್ಟೈ, ಕಟ್ಪಾಡಿ, ಅರಕ್ಕೋಣಂ, ಪೆರಂಬೂರ್, ಗುಡೂರು, ವಿಜಯವಾಡ, ವಾರಂಗಲ್, ಬಲ್ಹರಷ್ಹಾ, ನಾಗ್ಪುರ, ಇಟಾರ್ಸಿ, ಜಬ್ಬಲಪುರ, ಸತ್ನಾ, ಪ್ರಯಾಗ ರಾಜ್‌ ಛೋಕಿ, ದೀನ-ದಯಾಳ-ಉಪಾದ್ಯಯ, ಬಕ್ಸರ್, ಆರಾ ಜಂ ಈ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿವೆ.

ಈ ವಿಶೇಷ ರೈಲು (1) ಎಸಿ ಟು ಟೈಯರ್ ಬೋಗಿ,  (1) ಎಸಿ ತ್ರಿ ಟೈಯರ್ ಬೋಗಿ, (15) ಸೆಕೆಂಡ್ ಕ್ಲಾಸ್ ಸ್ಲೀಪರ್ ಬೋಗಿಗಳು, (2) ಜನರಲ್‌ ಸೆಕೆಂಡ್ ಕ್ಲಾಸ್ ಬೋಗಿಗಳು ಮತ್ತು (2) ದಿವ್ಯಾಂಗಸ್ನೇಹಿ ಕಂಪಾರ್ಟ್‌ಮೆಂಟ್‌ಗಳಿಂದ ಕೂಡಿದ ಸೆಕೆಂಡ್ ಕ್ಲಾಸ್ ಕಮ್ ಲಗೇಜ್ ಮತ್ತು ಬ್ರೇಕ್ ವ್ಯಾನ್ ಇರಲಿವೆ.

ಪ್ರಯಾಣಿಕರಿಗೆ ಈ ವಿಶೇಷ ರೈಲುಗಳ ಎಸಿ ಬೋಗಿಗಳಲ್ಲಿ ಬೆಡ್‌ ಶೀಟ್‌ ಮತ್ತು ಹೊದಿಕೆಗಳನ್ನು ಒದಗಿಸಲಾಗುವುದಿಲ್ಲ ಎಂದು ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...