ಚಿಕ್ಕಬಳ್ಳಾಪುರ | ಸಂಸದರು ಮಾನಸಿಕ ಅಸ್ವಸ್ಥರಾಗಿರಬೇಕು : ಜಿಲ್ಲಾ ಉಸ್ತುವಾರಿ ಸಚಿವ ಎಂ.ಸಿ.ಸುಧಾಕರ್‌ ತಿರುಗೇಟು

Date:

ಸಂಸದರು ಮಾನಸಿಕ ಆಸ್ವಸ್ಥರಾಗಿರಬೇಕು. ಇಲ್ಲವೇ ಕೊರೋನಾ ಸಂದರ್ಭದಲ್ಲಿ ದಿಲ್ಲಿಯಿಂದ ಬರುತ್ತಿದ್ದ ಆದಾಯ ಬರದೇ ಇರುವ ಕಾರಣಕ್ಕೆ ಈ ರೀತಿಯಾಗಿ ಹೇಳಿಕೆ ಕೊಟ್ಟಿರಬಹುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್‌ ಸಂಸದ ಸುಧಾಕರ್‌ ಅವರ ಹೇಳಿಕೆಗೆ ತಿರುಗೇಟು ನೀಡಿದರು.

ಚಿಕ್ಕಬಳ್ಳಾಪುರ ನಗರದಲ್ಲಿ ಭಾನುವಾರ ಗಣರಾಜ್ಯೋತ್ಸವ ದಿನಾಚರಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸದರಿಗೆ ಕೋವಿಡ್‌ ಸಂದರ್ಭದಲ್ಲಿ ಜನರ ಪ್ರಾಣಗಳ ಮೇಲೆ ಹಣ ಲೂಟಿ ಮಾಡುತ್ತಿದ್ದ ಆದಾಯ ಕಡಿಮೆಯಾಗಿರುವ ಹಿನ್ನೆಲೆ ನೋವಿನಿಂದ ಮಾತನಾಡಿದ್ದಾರೆ ಎಂದು ಹೇಳಿದರು.

ಇಲಾಖೆಗೊಬ್ಬ ಏಜೆಂಟರನ್ನ ನೇಮಿಸುವ ಸಂಸ್ಕೃತಿ ಈ ಹಿಂದಿನ ಅವಧಿಯಲ್ಲಿತ್ತು. ಸ್ವಂತ ಕಂಪನಿಗಳಿಗೆ ಪ್ಯಾಕೇಜ್‌ ಮಾಡಿಕೊಂಡು ಗುತ್ತಿಗೆ ತೆಗೆದುಕೊಂಡಿದ್ದರು. ನಮ್ಮ ಅವಧಿಯಲ್ಲಿ ಯಾರನ್ನೂ ನೇಮಿಸಿಲ್ಲ. ಜಿಲ್ಲಾ ಮಟ್ಟದ ಅಧಿಕಾರಿಗಳನ್ನ ಕೇಳಬಹದು. ಕಾಮಾಲೆ ರೋಗ ಬಂದಿರುವವರಿಗೆ ಕಾಣೋದೆಲ್ಲ ಹಳದಿ ಎಂಬಂತೆ ಸಂಸದರು ಭ್ರಮೆಯಲ್ಲಿದ್ದಾರೆ. ಸಂಸದರಾಗಿ ಆಯ್ಕೆಯಾಗಿರುವುದು ತೃಪ್ತಿ ತಂದಿಲ್ಲ. ಜಿಲ್ಲೆಯ ಹಿಡಿತ ಕೈತಪ್ಪಿದೆ. ಬರುತ್ತಿದ್ದ ವರಮಾನ ಕೈತಪ್ಪಿದೆ. ಚಿಕ್ಕಬಳ್ಳಾಪುರ ಉತ್ಸವ ಮತ್ತು ಶಿವೋತ್ಸವಕ್ಕೆ ಎಷ್ಟು ವಸೂಲಿ ಆಯಿತು. ಜಿಪಂ, ತಾಪಂ ಚುನಾವಣೆಗಳಿಗೆ ಪೊಲೀಸ್‌ ಠಾಣೆಗಳಿಂದ ಎಲ್ಲೆಲ್ಲಿ ವಸೂಲಿ ಆಯಿತು. ಯಾವ್ಯಾವ ಗುತ್ತಿಗೆ ಕಾಮಗಾರಿಗಳಿಗೆ ಎಲ್ಲೆಲ್ಲಿ ವಸೂಲಿ ಆಯಿತು ಎಂಬ ಎಲ್ಲಾ ಮಾಹಿತಿ ಸಂಸದರಿಗೆ ಗೊತ್ತಿದೆ ಎಂದು ಕಾಲೆಳೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ : ಈ ದಿನ ಸಂಪಾದಕೀಯ | ಪ್ರಚೋದನಕಾರಿ ಭಾಷಣ – ಆಯುಧ ಹಂಚಿಕೆ ಕಾನೂನು ಉಲ್ಲಂಘನೆಯಲ್ಲವೇ?

ನರ್ಸಿಂಗ್‌ ವರ್ಗಾವಣೆ, ಡೆಂಟಲ್‌ ವೈದ್ಯರ ನೇಮಕ, ವೈದ್ಯಕೀಯ ಆಸ್ಪತ್ರೆಗೆ ಅಸಿಸ್ಟೆಂಟ್‌ ಪ್ರೊಫೆಸರ್‌ಗಳ ನೇಮಕಾತಿಯಲ್ಲಿ ಎಷ್ಟು ತಿಂಗಳ ಸಂಬಳ ನೇರವಾಗಿ ಕೇಳಿ ಪಡೆದಿರುವುದು. ಈ ರೀತಿಯ ಯಾವುದಾದರೂ ಉದಾಹರಣೆಗಳು ನಮ್ಮ ಇಲಾಖೆಯಲ್ಲಿ ನಡೆದಿದ್ದರೆ ನನ್ನ ಗಮನಕ್ಕೆ ತರಲಿ. ನಾವು ಆ ರೀತಿಯ ಸಂಸ್ಕೃತಿಯಲ್ಲಿ ಬೆಳೆದವರಲ್ಲ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...