ಜೋಕಟ್ಟೆಯಲ್ಲಿ MRPL ನಿರ್ಮಿಸಿದ ನರಕ; ಮನೆಯೊಳಗೆ ಪೆಟ್ ಕೋಕ್ ಪೌಡರ್, ಊರು ಗಂಭೀರ ಕಾಯಿಲೆಗಳ ಗೂಡು

Date:

ಉದ್ಯೋಗ ಸೃಷ್ಟಿ, ಸಕಾರಾತ್ಮಕ ಅಭಿವೃದ್ಧಿಯ ಕನಸುಗಳನ್ನು ಬಿತ್ತಿ ತುಳು‌ನಾಡಿನ ಸಾವಿರಾರು ಎಕರೆ ಅಮೂಲ್ಯ ಜಮೀನಿನಲ್ಲಿ ಸಾಮ್ರಾಜ್ಯ ಕಟ್ಟಿಕೊಂಡಿರುವ MRPL (Mangalore Refinery and Petrochemicals Limited) ಉದ್ಯೋಗ ಸೃಷ್ಟಿಸಿದ್ದೂ ಕಡಿಮೆ, ಸ್ಥಳೀಯರಿಗೆ ನೀಡಿದ್ದು ಅತಿ ಕಡಿಮೆ. ಮೊದಲ ಹಂತಗಳಲ್ಲಿ‌ ಜಮೀನು ಕಳೆದುಕೊಂಡ ಕುಟುಂಬಗಳಿಗೆ ನಿಯಮಗಳ ಕಾರಣಕ್ಕೆ ಉದ್ಯೋಗ ಒದಗಿಸಿದ ಕಂಪೆನಿ ಈಗ ನಾಲ್ಕನೆ ಹಂತದಲ್ಲಿ ಸಾವಿರ ಎಕರೆ ಜಮೀನು‌ ಸ್ವಾಧೀನದ ಸಂದರ್ಭ ಜಮೀನು ಕಳೆದುಕೊಂಡ ಕುಟುಂಬಗಳಿಗೆ ವಿವಿಧ ತಂತ್ರಗಳನ್ನು ಪ್ರಯೋಗಿಸಿ ಉದ್ಯೋಗ ನೀಡುವುದರಿಂದ ಅಧಿಕೃತವಾಗಿಯೇ ಜಾರಿಕೊಳ್ಳುತ್ತಿದೆ ಎಂದು ಜೋಕಟ್ಟೆಯ ನಾಗರಿಕ ಹೋರಾಟ ಸಮಿತಿ ಮುಖಂಡ ಮುನೀರ್ ಕಾಟಿಪಳ್ಳ ಆರೋಪಿಸಿದ್ದಾರೆ.

ಅದೇ ಸಂದರ್ಭ ಸುತ್ತಲಿನ ಗ್ರಾಮಗಳನ್ನು ತನ್ನ ಪೆಟ್ರೋಕೆಮಿಕಲ್ ಮಾಲಿನ್ಯದಿಂದ ರೋಗಗಳ ಕೊಂಪೆಯಾಗಿಸಿದೆ. ಅಲ್ಲಿನ ಅಸಹಾಯಕ ಗ್ರಾಮಸ್ಥರ ಬದುಕನ್ನು ನರಕ ಸದೃಶಗೊಳಿಸಿದೆ. ಇಲ್ಲಿ‌ ಕೇಳುವವರೂ ಇಲ್ಲ, ಹೇಳುವವರೂ ಇಲ್ಲ. 2014ರಲ್ಲಿ ಮೂರನೆ ಹಂತದ ಪೆಟ್ ಕೋಕ್, ಸಲ್ಪರ್ ಘಟಕದಿಂದ ಚಳಿಗಾಲದ ಮಂಜಿನಂತೆ ಅಪಾಯಕಾರಿ ಕೋಕ್, ಸಲ್ಪರ್ ಹುಡಿ ಊರಿನ ಮೇಲೆ, ಬಾವಿಗಳು ಸಹಿತ ನೀರಿನ ಮೂಲಗಳ ಮೇಲೆ, ಮನೆಯ ಅಡುಗೆ ಮನೆ, ಊಟದ ಬಟ್ಟಲಿನ ಮೇಲೆ ಸುರಿಯುವುದು ಶುರುವಾದಾಗ ನಾವು ಪ್ರಬಲ ಹೋರಾಟ ನಡೆಸಿ ಕಂಪೆನಿಯನ್ನು‌ ಮಣಿಸಿದ್ದೆವು. ರಾಜ್ಯ ಸರಕಾರ 6 ಅಂಶಗಳ ಪರಿಹಾರ ಕ್ರ‌ಮಗಳ ಆದೇಶ ಹೊರಡಿಸಿತ್ತು.

ಅದರಲ್ಲಿ ಐದು ಆದೇಶಗಳನ್ನು‌ ಕಂಪೆನಿ‌ ಜಾರಿಗೆ ತಂದಿದೆ. (ಹಾಗಂತ ಹೇಳಿಕೊಳ್ಳುತ್ತಿದೆ) ಆರನೆ ಅಂಶವಾದ ಜನವಸತಿ ಹಾಗೂ ಕಂಪೆನಿಯ ನಡುವೆ ಹಸಿರು ವಲಯ ನಿರ್ಮಿಸುವ ಆದೇಶ ಜಾರಿಗೆ ತರಲು ಸತಾಯಿಸುತ್ತಿದೆ. ಐದು ಅಂಶಗಳ ಜಾರಿಯ ತರುವಾಯವೂ ಶಬ್ದ, ವಾಸನೆಯ (ವಾಯು) ಮಾಲಿನ್ಯ ತೀರಾ ಕಡಿಮೆ ಏನೂ ಆಗಿರಲಿಲ್ಲ. ಸಾಧಾರಣ ಪ್ರಮಾಣದಲ್ಲಿ ಇಳಿಕೆಯಾಗಿತ್ತು. ಆದರೆ, ಅತಿ ಅಪಾಯಕಾರಿ‌ ಕೋಕ್ ಪುಡಿ ಮಂಜಿನಂತೆ ಸುರಿಯುವುದು ನಿಂತಿತ್ತು. ಗ್ರಾಮಸ್ಥರು ಒಂದಿಷ್ಟು ನೆಮ್ಮದಿಯ ನಿಟ್ಟುಸಿರು ಬಿಟ್ಟರೂ ಚರ್ಮದ ಕಾಯಿಲೆ, ಉಸಿರಾಟದ ಸಮಸ್ಯೆ, ಶ್ವಾಸಕೋಶದ ಕಾಯಿಲೆ, ಹೃದಯದ ಸಮಸ್ಯೆಗಳ ಸಹಿತ ಪೆಟ್ ಕೋಕ್, ಸಲ್ಪರ್ ಸಂಬಂಧಿಸಿ ವಿವಿಧ ಕಾಯಿಲೆಗಳು ಜನರನ್ನು‌ ದೊಡ್ಡ ಪ್ರಮಾಣದಲ್ಲಿ‌‌ ಕಾಡುತ್ತಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಂದು‌ ಜೋಕಟ್ಟೆಯ ನಲ್ಕೆಮಾರ್ ಪ್ರದೇಶಕ್ಕೆ ಹೋರಾಟ ಸಮಿತಿಯ ಪ್ರಮುಖರ ಜೊತೆ ಭೇಟಿ‌‌‌ ನೀಡಿದಾಗ ಪೆಟ್ ಕೋಕ್‌ನ ಪೌಡರ್ ಮನೆಯ ಒಳಗಡೆ, ತೆರೆದ ಬಾವಿಗಳು,‌ ಟೆರೇಸ್ ಗಳ ಮೇಲೆ, ಕಿಟಕಿಯ ಸಂಧಿಗಳಲ್ಲಿ ದಟ್ಟವಾಗಿ ಕೂತಿರುವುದನ್ನು‌ ಸ್ಥಳೀಯರು ತೋರಿಸಿದರು. ಇದೆ ತೆರೆದ ಬಾವಿಯ ನೀರು ಕುಡಿದು “ಬದುಕು” ವ ಅಸಹಾಯಕತೆಯನ್ನು‌ ಹೇಳಿಕೊಂಡರು. ತಮ್ಮ ದೂರು‌ ಕೇಳಲು ಯಾರೂ ಸಿದ್ದರಿಲ್ಲದ ಹತಾಶ ಪರಿಸ್ಥಿತಿಯನ್ನು ನಮ್ಮ ಮುಂದಿಟ್ಟರು.

ಇದನ್ನೂ ಓದಿ: ಮಂಗಳೂರು | ಮನರೇಗಾ ಸ್ವರೂಪ ಬದಲಾವಣೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ

MRPL ಕಂಪೆನಿಗಂತು ಲಾಭ ಮಾತ್ರ ಮುಖ್ಯ. ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾಡಳಿತ, ಜಿಲ್ಲಾಧಿಕಾರಿ, ಜನಪ್ರತಿನಿಧಿಗಳಿಗೆ ಈ ಕುರಿತು ಕನಿಷ್ಟ ಕಾಳಜಿಯಾದರೂ ಇರಬೇಕಲ್ಲ? ಜನತೆಯೂ ಮೈ ಕೊಡವಿ ಮಾತಾಡಬೇಕಲ್ಲ? ಈ ಮಾರಕ ಪೆಟ್ ಕೋಕ್, ಸಲ್ಪರ್ ಮಾಲಿನ್ಯವನ್ನು ಅನ್ನ, ನೀರು, ಉಸಿರಾಟದ ಜೊತೆಗೆ ಹೊಟ್ಟೆ, ಶ್ವಾಸಕೋಶಕ್ಕೆ ಸೇರಿಸಿಕೊಂಡು ಜನರ ಆರೋಗ್ಯದ ಸ್ಥಿತಿ ಹೇಗಿರಬಹುದು, ಮಕ್ಕಳ ಆರೋಗ್ಯ ಏನಾಗಿರಬೇಡ?

ಮಾತಾಡಬೇಕಾದವರು, ಜನರ ಆರೋಗ್ಯ, ಜೀವ ರಕ್ಷಿಸಬೇಕಾದವರು ಯಾರು? MRPLನ ವೇದಿಕೆಗಳಲ್ಲಿ ಮೆರೆಯುವವರು, ಅವರ ಕೊಡುಗೆಗಳನ್ನು ಕೊಂಡಾಡುವವರಿಗೆ MRPL ಸೃಷ್ಟಿಸಿರುವ ಈ ನರಕಗಳು ಕಣ್ಣಿಗೆ ಬೀಳುವುದು ಯಾವಾಗ? ಎಂದು ಅವರು ಪ್ರಶ್ನಿಸಿದ್ದಾರೆ.


eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...