ಸಂಕ್ರಾಂತಿಯಿಂದ ಇಂದಿರಾ ಕ್ಯಾಂಟೀನ್‌ನಲ್ಲಿ ‘ಮುದ್ದೆ’ ಭಾಗ್ಯ

Date:

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ದುಡಿಯುವ ವರ್ಗ, ಬಡವರು, ನಿರ್ಗತಿಕರು, ವಿದ್ಯಾರ್ಥಿಗಳ ಹಸಿವನ್ನುಇಂದಿರಾ ಕ್ಯಾಂಟೀನ್ನೀಗಿಸುತ್ತಿದೆ. ಯಾರೊಬ್ಬರೂ ಹಸಿವಿನಿಂದ ಮಲಗಬಾರದು ಎಂಬ ಧ್ಯೇಯದೊಂದಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಆರಂಭಿಸಿದ ಮಹತ್ವಾಕಾಂಕ್ಷೆಯ ಯೋಜನೆ ಹಲವು ಜನರಿಗೆ ಅಕ್ಷಯ ಪಾತ್ರೆಯಾಗಿದೆ. ಈಗ ಈ ಯೋಜನೆ ಮತ್ತೊಂದು ಹೆಜ್ಜೆ ಮುಂದಿಟ್ಟಿದೆ.

ಕಡಿಮೆ ದರದಲ್ಲಿ ಬಡಜನರ ಹೊಟ್ಟೆ ತುಂಬಿಸುತ್ತಿದ್ದ ಇಂದಿರಾ ಕ್ಯಾಂಟೀನ್ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಲತಾಯಿ ಧೋರಣೆಗೆ ಒಳಗಾಗಿತ್ತು. ಹಲವಾರು ಕ್ಯಾಂಟೀನ್‌ಗಳಲ್ಲಿ ಇಡ್ಲಿ ಸೇರಿದಂತೆ ನಾನಾ ಬಗೆಯ ತಿಂಡಿಗಳನ್ನು ಕೊಡುವುದು ನಿಲ್ಲಿಸಲಾಗಿತ್ತು. ಇನ್ನು ರಾತ್ರಿ ವೇಳೆ ಊಟ ನೀಡುವುದನ್ನು ಕೆಲವು ಕ್ಯಾಂಟೀನ್‌ಗಳಲ್ಲಿ ಸಂಪೂರ್ಣ ನಿಲ್ಲಿಸಲಾಗಿತ್ತು. ಇದರಿಂದ ನಗರದಲ್ಲಿರುವ ಎಲ್ಲ ಕ್ಯಾಂಟೀನ್‌ಗಳನ್ನು ಮುಚ್ಚಿಸಿ, ಬೇರೆ ಹೆಸರಿನೊಂದಿಗೆ ಹೊಸ ಕ್ಯಾಂಟೀನ್ ಆರಂಭಿಸಬೇಕು ಎಂಬುದು ಬಿಜೆಪಿಯ ನಿಲುವಾಗಿತ್ತು. ಆದರೆ, ಈಗ ಮತ್ತೆ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಇಂದಿರಾ ಕ್ಯಾಂಟೀನ್‌ಗಳಿಗೆ ಮರು ಜೀವ ಬಂದತಾಗಿದೆ. ಮುಂದಿನ ವರ್ಷ ಅಂದರೆ ಮುಂಬರುವ ಸಂಕ್ರಾಂತಿ ಹಬ್ಬದಂದು ಹೊಸ ಮೆನುವಿನೊಂದಿಗೆ ಇಂದಿರಾ ಕ್ಯಾಂಟೀನ್ ಮತ್ತೆ ಹೊಸ ಚೈತನ್ಯದೊಂದಿಗೆ ತನ್ನ ಕಾರ್ಯ ಆರಂಭಿಸಲಿದೆ.

ಇಷ್ಟು ದಿನ ಕ್ಯಾಂಟೀನ್‌ನಲ್ಲಿ ಮಧ್ಯಾಹ್ನ ಮತ್ತು ರಾತ್ರಿ ಊಟಕ್ಕೆ ಕೇವಲ ರೈಸ್ಬಾತ್ಅಥವಾ ಅನ್ನ, ಸಾಂಬರ್‌, ಮೊಸರನ್ನ ಮಾತ್ರ ನೀಡಲಾಗುತ್ತಿತ್ತು. ಹಿರಿಯ ನಾಗರಿಕರು, ಸಕ್ಕರೆ ಕಾಯಿಲೆ ಇರುವವರು ಸೇರಿದಂತೆ ಹಲವರು ಮುದ್ದೆ, ಚಪ್ಪಾತಿ ನೀಡುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆ, ಸರ್ಕಾರ ಹೊಸ ವರ್ಷದಿಂದ ಇಂದಿರಾ ಕ್ಯಾಂಟೀನ್‌ನಲ್ಲಿ ಕಡ್ಡಾಯವಾಗಿ ಮುದ್ದೆ ಪೂರೈಕೆಗೆ ತೀರ್ಮಾನಿಸಿದ್ದು, ಸಂಕ್ರಾಂತಿ ವೇಳೆಗೆ ಇಂದಿರಾ ಕ್ಯಾಂಟೀನ್ನಲ್ಲಿ ಮುದ್ದೆ ದೊರೆಯುವ ಸಾಧ್ಯತೆ ಇದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸದ್ಯ ನಗರದಲ್ಲಿರುವ ಇಂದಿರಾ ಕ್ಯಾಂಟೀನ್‌ಗಳಿಗೆ ಆಹಾರ ಪೂರೈಕೆ ಮಾಡಲು ಟೆಂಡರ್‌ ಕರೆಯಲು ಸರ್ಕಾರ ಒಪ್ಪಿಗೆ ಸೂಚಿಸಿದೆ. ಬಿಬಿಎಂಪಿ ಸದ್ಯದಲ್ಲೇ ಟೆಂಡರ್ ಕರೆಯಲಿದ್ದು, ಒಂದು ತಿಂಗಳಿನಲ್ಲಿ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ತಿಳಿದುಬಂದಿದೆ.

ಬಿಬಿಎಂಪಿ ಕರೆಯುವ ಈ ಟೆಂಡರ್‌ನಲ್ಲಿ ಆಹಾರ ಪೂರೈಕೆ ಮಾಡುವ ಗುತ್ತಿಗೆದಾರರು ಕಡ್ಡಾಯವಾಗಿ ಮುದ್ದೆ ಪೂರೈಕೆ ಮಾಡಬೇಕು. ಉಪಾಹಾರಕ್ಕೆ ಎರಡು ಆಯ್ಕೆ ನೀಡಬೇಕು ಸೇರಿದಂತೆ ಹಲವು ನಿಯಮಗಳನ್ನು ಹಾಕಿದೆ. ಈ ಎಲ್ಲ ನಿಮಯಗಳಿಗೆ ಒಪ್ಪಿಗೆ ನೀಡಿದ ಗುತ್ತಿಗೆದಾರರಿಗೆ ಈ ಟೆಂಡರ್‌ ನೀಡಲು ಸರ್ಕಾರ ನಿರ್ಧರಿಸಿದೆ.

ಇನ್ನು ಇಂದಿರಾ ಕ್ಯಾಂಟೀನ್‌ನಲ್ಲಿ ಸುಳ್ಳು ಲೆಕ್ಕ ನೀಡಿ, ರಿಯಾಯಿತಿ ಹಣ ಲೂಟಿ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ. ಹೀಗಾಗಿ, ನಗರದ ಯಾವುದೇ ಇಂದಿರಾ ಕ್ಯಾಂಟೀನ್ಗೆ ಗ್ರಾಹಕ ತೆರಳಿ ಊಟ ಕೂಪನ್ ಪಡೆದರೆ ಮಾಹಿತಿ ಕೇಂದ್ರ ಕಚೇರಿಗೆ ತಲುಪುವಂತೆ ತಂತ್ರಜ್ಞಾನ ಅಭಿವೃದ್ಧಿ ಪಡಿಸಲಾಗಿದೆ. ಪ್ರತಿಯೊಂದು ಡಿಜಿಟಲೀಕರಣದ ಮೂಲಕ ಪಾರದರ್ಶಕ ವ್ಯವಸ್ಥೆ ಮಾಡಲು ಬಿಬಿಎಂಪಿ ಅಧಿಕಾರಿಗಳು ನಿರ್ಧರಿಸಿದ್ದಾರೆ.

2017ರಲ್ಲಿ ಇಂದಿರಾ ಕ್ಯಾಂಟೀನ್ ಆರಂಭ

ಅತಿ ಕಡಿಮೆ ದರದಲ್ಲಿ ಬಡವರಿಗೆ ಮೂರು ಹೊತ್ತು ಊಟ ನೀಡಲು ಕ್ಯಾಂಟೀನ್ಗಳನ್ನು 2017 ಆಗಸ್ಟ್ 16ರಂದು ಆರಂಭಿಸಲಾಯಿತು. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು ಸೇರಿದಂತೆ ರಾಜ್ಯದ ನಾನಾ ಕಡೆಗಳಲ್ಲಿ ಉದ್ಘಾಟಿಸಲಾಗಿತ್ತು. ತಮಿಳುನಾಡಿನಅಮ್ಮಾ ಕ್ಯಾಂಟೀನ್ಮಾದರಿಯಲ್ಲಿ ಯೋಜನೆ ರೂಪಿಸಲಾಗಿತ್ತು.

ಈ ಸುದ್ದಿ ಓದಿದ್ದೀರಾ? ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಎರಡು ದಿನ ‘ನಮ್ಮ ರಸ್ತೆ’ ಪ್ರದರ್ಶನ ಮತ್ತು ಕಾರ್ಯಾಗಾರ ಆಯೋಜನೆ

ಆದರೆ, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ್ಯಂತ ಚಾಲ್ತಿಯಲ್ಲಿದ್ದ ಇಂದಿರಾ ಕ್ಯಾಂಟೀನ್ಗಳನ್ನು ನಡೆಸಲು ಆಗಿನ ಬಿಜೆಪಿ ಸರ್ಕಾರ ಅನುದಾನ ನೀಡುವುದನ್ನೇ ನಿಲ್ಲಿಸಿತ್ತುಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕ್ಯಾಂಟೀನ್ ಅನ್ನು ನಿರ್ವಹಣೆ ಮಾಡುತ್ತಿತ್ತು. 2023-24ನೇ ಸಾಲಿನ  ಬಜೆಟ್ನಲ್ಲಿ ಕ್ಯಾಂಟೀನ್ಗೆ ಬಿಬಿಎಂಪಿ ₹50 ಕೋಟಿ ಮೀಸಲಿಟ್ಟಿತ್ತು. ಹೊರತಾಗಿ ಆಹಾರದ ಗುತ್ತಿಗೆಯ ಕಂಪನಿಗಳಿಗೆ ಬಾಕಿ ಬಿಲ್ ಮಾಡಲು ಕೂಡ ಬಿಬಿಎಂಪಿ ಸಂಕಷ್ಟ ಎದುರಿಸುತ್ತಿತ್ತು.

ಇಂದಿರಾ ಕ್ಯಾಂಟೀನ್ಗೆ ಮರುಜೀವ

2023 ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಬಹುಮತದೊಂದಿಗೆ ಕಾಂಗ್ರೆಸ್ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಸಿದ್ದರಾಮಯ್ಯ ಅವರು ಮೊದಲ ಬಾರಿಗೆ ಸುದ್ದಿಗಾರರೊಂದಿಗೆ ಮಾತನಾಡಿ, “ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಅವಧಿಯಲ್ಲಿ ನಿರ್ಲಕ್ಷಕ್ಕೆ ಒಳಗಾಗಿ, ಮುಚ್ಚಲ್ಪಟ್ಟಿದ ಇಂದಿರಾ ಕ್ಯಾಂಟೀನ್ಗಳನ್ನು ರಾಜ್ಯಾದ್ಯಂತ ಪುನಃ ಆರಂಭಿಸಲಾಗುವುದುಎಂದಿದ್ದರು. ಈಗ ಅದರಂತೆಯೇ ನಗರದ 250 ಕಡೆಗಳಲ್ಲಿ ಇಂದಿರಾ ಕ್ಯಾಂಟೀನ್ ಮರುಸ್ಥಾಪಿಸಲು ಯೋಜನೆ ರೂಪಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...