ಮುದ್ದೇಬಿಹಾಳ ಕಾಲುವೆ ದುರಂತ: ಸಂತ್ರಸ್ತ ಕುಟುಂಬಕ್ಕೆ ಕಾಂಗ್ರೆಸ್‌ ಮುಖಂಡನಿಂದ ಆರ್ಥಿಕ ನೆರವು

Date:

ಮುದ್ದೇಬಿಹಾಳ ತಾಲೂಕಿನ ಶಿರೋಳ್‌ ಬಳಿ ಚಿಮ್ಮಲಗಿ ಎಡದಂಡೆ ಕಾಲುವೆಯಲ್ಲಿ ನಡೆದ ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬವನ್ನು ಭೇಟಿ ಮಾಡಿದ ಅಸ್ಕಿ ಫೌಂಡೋಶನ್‌ ಅಧ್ಯಕ್ಷ ಹಾಗೂ ಕಾಂಗ್ರೆಸ್‌ ಮುಖಂಡ ಸಿ ಬಿ ಅಸ್ಕಿ ಅವರು ಮೃತರ ತಂದೆ ಚಿನ್ನಪ್ಪ ಕೊಣ್ಣೂರಿಗೆ ಸಾಂತ್ವನ ಹೇಳಿ ₹50,000 ಗಳ ಆರ್ಥಿಕ ನೆರವು ನೀಡಿದ್ದಾರೆ.

ಅಲೆಮಾರಿ ಸಮುದಾಯಕ್ಕೆ ಸೇರಿದ ಈ ಕುಟುಂಬವು ಆಸ್ತಿಪಾಸ್ತಿ ಇಲ್ಲದೆ ದಿನನಿತ್ಯ ಊರು ತಿರುಗಾಡಿ ಬದುಕು ನಡೆಸುವ ಸ್ಥಿತಿಯಲ್ಲಿದೆ ಎಂದು ಅಸ್ಕಿ ವಿಷಾದ ವ್ಯಕ್ತಪಡಿಸಿದರು. ʼಇದು ಹೃದಯವಿದ್ರಾವಕ ದುರಂತ. ಸಮಾಜ ಕಲ್ಯಾಣ ಇಲಾಖೆಯು ಅಲೆಮಾರಿ ನಿಗಮದ ಮೂಲಕ ಕುಟುಂಬಕ್ಕೆ ಸಿಗಬೇಕಾದ ಸರ್ಕಾರಿ ಸೌಲಭ್ಯಗಳನ್ನು ತಕ್ಷಣ ವಹಿಸಿಕೊಡಬೇಕುʼ ಎಂದು ಅವರು ಬೇಡಿಕೆ ಇಟ್ಟರು.

ಕಾಲುವೆ ಮುದ್ದೇಬಿಹಾಳ ಪಟ್ಟಣದ ವರಹಲಯದಲ್ಲಿ ಬರುವುದರಿಂದ ಜನವಸತಿ ಪ್ರದೇಶಗಳ ಮೂಲಕ ಹಾದು ಹೋಗುತ್ತದೆ. ಈ ಹಿನ್ನೆಲೆಯಲ್ಲಿ ಪದೇಪದೇ ಅವಘಡಗಳು ಸಂಭವಿಸುತ್ತಿರುವುದನ್ನು ಉಲ್ಲೇಖಿಸಿದ ಅವರು, ತಂಗಡಗಿ ರಸ್ತೆಯಿಂದ ಪಟ್ಟಣದ ಉತ್ತರ ಭಾಗ ಸುತ್ತುವರೆಗೆ, ಸೀರೋಳ್ ರಸ್ತೆಯವರೆಗೆ ಕಾಲುವೆ ಬದಿಯಲ್ಲಿ ಕಬ್ಬಿಣದ ಫೆನ್ಸಿಂಗ್ ಅಳವಡಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಇದು ಕಡಿಮೆ ವೆಚ್ಚದಾದರೂ ಪರಿಣಾಮಕಾರಿ ಕ್ರಮ. ಜೊತೆಗೆ ಅಪಾಯಕಾರಿ ಜೋನ್ ಎಂದು ಘೋಷಿಸಿ ಎಚ್ಚರಿಕೆಯ ಬೋರ್ಡ್‌ಗಳನ್ನು ಎಲ್ಲೆಲ್ಲಿ ಅಗತ್ಯವೋ ಅಲ್ಲಿ ಅಳವಡಿಸಬೇಕು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಮುದ್ದೇಬಿಹಾಳ | ಆಯತಪ್ಪಿ ಕಾಲುವೆಗೆ ಬಿದ್ದ ಯುವತಿ; ರಕ್ಷಿಸಲು ಹೋದ ಸಹೋದರರೂ ನೀರುಪಾಲು

ಈ ಸಂದರ್ಭದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕಾಮರಾಜ ಬಿರಾದಾರ, ವೈ ಎಚ್ ವಿಜಯಕರ, ಬಸಲಿಂಗಪ್ಪ ರಕ್ಕಸಿಗಿ ಸೇರಿದಂತೆ ಹಲವುರು ಉಪಸ್ಥಿತರಿದ್ದರು.

WhatsApp Image 2025 05 16 at 6.54.26 PM
Sub Editor at Eedina.com |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...