ಮುದ್ದೇಬಿಹಾಳ | ಒಳಮೀಸಲಾತಿ ವರದಿ ತಿರಸ್ಕರಿಸಲು ಆಗ್ರಹಿಸಿ ಛಲವಾದಿ ಮಹಾಸಭಾ ಪ್ರತಿಭಟನೆ

Date:

ನ್ಯಾಯಮೂರ್ತಿ ನಾಗಮೋಹನದಾಸ್ ಅವರು ಸರ್ಕಾರಕ್ಕೆ ನೀಡಿರುವ ಒಳ ಮೀಸಲಾತಿ ವರದಿಯನ್ನು ಸಂಪೂರ್ಣವಾಗಿ ತಿರಸ್ಕರಿಸಲು ಆಗ್ರಹಿಸಿ ಛಲವಾದಿ ಮಹಾಸಭಾ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಸಮಿತಿಯಿಂದ ಪ್ರತಿಭಟನೆಯನ್ನು ನಡೆಸಲಾಯಿತು.

ಮುದ್ದೇಬಿಹಾಳದ ಅಂಬೇಡ್ಕರ್ ವೃತ್ತದಿಂದ ತಹಶೀಲ್ದಾರ್ ಕಚೇರಿಯವರೆಗೂ ಜಾಥಾ ನಡೆಸಿದ ಬಳಿಕ ತಹಶೀಲ್ದಾರ್ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಸಮೀಕ್ಷೆಯು ಸಂಪೂರ್ಣ ತಾತ್ಕಾಲಿಕ,, ಅಸಂಬದ್ಧ ಮತ್ತು ತೃಪ್ತಿಕರವಾಗಿ ನಡೆದಿರುವುದಿಲ್ಲ. ಐತಿಹಾಸಿಕ ಹಾಗೂ ಕಾನೂನು ಬದ್ಧ ಮಾಹಿತಿಯ ಅಪರ್ಯಾಪ್ತತೆಯಿಂದ ಕೂಡಿದೆ. ಬಲಗೈ ಸಮುದಾಯದ ಜನಸಂಖ್ಯೆಯನ್ನು ಅಂಕಿ ಅಂಶಗಳಿಂದ ಕಡಿಮೆ ಮಾಡುವ ಉದ್ದೇಶದಿಂದ ಮಾದಿಗ ಸಮುದಾಯದ ಜನಸಂಖ್ಯೆಗೆ ಬಲಗೈ ಸಮುದಾಯ ಸೇರ್ಪಡೆಗೊಳಿಸಲಾಗಿದೆ. ಸರ್ಕಾರದ ಆದೇಶಗಳು, ನಿಯಮಾವಳಿ ಉಲ್ಲಂಘನೆಯಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 08 14 at 4.20.33 PM

ಸಮೀಕ್ಷೆಯಲ್ಲಿ ಅಪೂರ್ಣತೆ ಮತ್ತು ತಾತ್ಕಾಲಿಕ ದೋಷಗಳಿವೆ. ಐತಿಹಾಸಿಕ ಮತ್ತು ಕುಲ ಶಾಸ್ತ್ರೀಯ ಅಧ್ಯಯನದ ಕೊರತೆ ಇದೆ. ಬಲಗೈ ಸಮುದಾಯದ ವಿರುದ್ಧ ದ್ವೇಷಪೂರ್ವಕ ನಿರ್ಧಾರವಾಗಿದ್ದು ಸಮುದಾಯದ ಜನಸಂಖ್ಯೆಯನ್ನು ಕುಗ್ಗಿಸುವ ಉದ್ದೇಶವೇ ಹೊಂದಿದೆ. ನ್ಯಾಯಮೂರ್ತಿ ನಾಗಮೋಹನ ದಾಸ್ ರವರ ವರದಿಯನ್ನು ಸಂಪೂರ್ಣ ತಿರಸ್ಕರಿಸಬೇಕು. ವರದಿಯನ್ನು ಅಂಗೀಕರಿಸಿದರೆ, ಸರ್ಕಾರ, ಪರಿಶಿಷ್ಟ ಜಾತಿ ಸಚಿವರು ಮತ್ತು ಶಾಸಕರು ನಿರ್ವಹಣೆಯ ಫಲಿತಾಂಶಕ್ಕೆ ಹೊಣೆಗಾರರಾಗಬೇಕಾಗುತ್ತದೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.

ಇದನ್ನು ಓದಿದ್ದೀರಾ? ‘ಶೋಲೆ’ @ 50: ಇವತ್ತಿಗೂ ಅದೇ ತಾಜಾತನ, ಅದೇ ಆಕರ್ಷಣೆ, ಅದೇ ಕುತೂಹಲ

ಪ್ರತಿಭಟನೆಯಲ್ಲಿ ಹರೀಶ್ ನಾಟೇಕರ್, ವೈ ಎಸ್ ವಿಜಯಕರ್, ಪ್ರಕಾಶ ಸರೋವರ, ಗುಂಡಪ್ಪ ಚಲವಾದಿ, ಮಲ್ಲು ತಳವಾರ, ಬಸವರಾಜ ಸಾರೂರ, ಮಂಜುನಾಥ ಕಟ್ಟಿಮನಿ, ಶಿವಪುತ್ರ ಅಜಿಮನಿ, ಶ್ರೀಶೈಲ ಬೀದರಕುಂದಿ, ಪರಶು ಮುರಾಳ, ಎಸ್ ಎನ್ ಚಲವಾದಿ, ಈರಣ್ಣ ತಾರನಾಳ, ಸಿದ್ದಪ್ಪ ಚಲವಾದಿ ಹಾಗೂ ಭೀಮಣ್ಣ ಛಲವಾದಿ ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...