ವಿಜಯಪುರ | ಪರಿಹಾರ ಸಿಗದ್ದಕ್ಕೆ ರಸ್ತೆಯಲ್ಲೇ ಕೃಷಿ ಮಾಡಿದ ಜಮೀನು ಮಾಲೀಕ: ಸಂಕಷ್ಟಕ್ಕೆ ಸಿಲುಕಿದ 30ಕ್ಕೂ ಹೆಚ್ಚು ರೈತರು!

Date:

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಅಡವಿ ಸೋಮನಾಳ ಗ್ರಾಮದಲ್ಲಿ ಸರ್ವೆ ನಂಬರ್ 30 ರಲ್ಲಿಯ ಲಾಟರಲ್ ಕಾಲುವೆ ಬಲಬದಿಯ ಸರ್ವಿಸ್ ರಸ್ತೆಯನ್ನು ಜಮೀನು ಮಾಲೀಕ ಹನುಮಂತ ಪೂಜಾರಿ ಬಂದ್ ಮಾಡಿ, ತೊಗರಿ ಬಿತ್ತನೆ ಮಾಡಿರುವುದರಿಂದ ಆ ಜಮೀನಿನ ಕೆಳಗಿರುವ 30ಕ್ಕೂ ಹೆಚ್ಚು ರೈತರು ಆತಂಕಕ್ಕೆ ಒಳಗಾಗಿದ್ದಾರೆ.

ಪರಿಹಾರ ಧನ ಸಿಗದಿದ್ದಕ್ಕೆ ಜಮೀನು ಮಾಲೀಕ ಈ ರೀತಿಯ ಸವಾಲನ್ನು ಅಧಿಕಾರಿಗಳಿಗೆ ಎಸೆದಿದ್ದಾರೆ ಎಂದು ತಿಳಿದು ಬಂದಿದೆ.

ತಮ್ಮ ಜಮೀನಿನಲ್ಲಿ ಕೃಷಿ ಚಟುವಟಿಕೆ ಮಾಡಲು ಆಗದಂತಹ ಪರಿಸ್ಥಿತಿ ಕಳೆದ ಮೂರು ವರ್ಷಗಳಿಂದ ಎದುರಿಸುತ್ತಿದ್ದು, ಅಧಿಕಾರಿಗಳ ಎಚ್ಚರಿಕೆಗೂ ಕೂಡ ಜಮೀನು ಮಾಲೀಕ ಬಗ್ಗದ್ದರಿಂದ, ಸಮಸ್ಯೆ ಅನುಭವಿಸುವಂತಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸರ್ವೆ ನಂಬರ್ 30ರ ಹಣಮಂತ ಪೂಜಾರಿ ತನ್ನ ಹೊಲದಲ್ಲಿ ಹೋಗಿರುವ ಲ್ಯಾಟರಲ್ ಸರ್ವಿಸ್ ರಸ್ತೆ ಬಂದ್ ಮಾಡಿ, ಲ್ಯಾಟರಲ್ ರಸ್ತೆಯನ್ನು ಕೃಷಿಗೆ ಬಳಕೆ ಮಾಡಿಕೊಂಡಿರುವುದರಿಂದ ಇತರೆ ರೈತರಿಗೆ ಸಮಸ್ಯೆಯಾಗುತ್ತಿದೆ.

ಇದರಿಂದ ಸತತವಾಗಿ ಮೂರು ವರ್ಷಗಳಿಂದ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಈ ಸಮಸ್ಯೆ ಎದುರಿಸುತ್ತಿರುವ ಸಂತ್ರಸ್ತ ರೈತರ ನಿಯೋಗವು ಸಾಕಷ್ಟು ಬಾರಿ ಕೆಬಿಜಿಎನ್ಎಲ್ ಅಧಿಕಾರಿಗಳಿಗೆ ಹೇಳಿದರೂ ಕೂಡ ಸಮಸ್ಯೆ ಬಗೆಹರಿದಿಲ್ಲ. ಇದರಿಂದ ಬೇಸತ್ತ ರೈತರು ಪ್ರತಿಭಟನೆ ಮಾಡುವುದಾಗಿ ಅಧಿಕಾರಿಗಳಿಗೆ ಎಚ್ಚರಿಸಿದ್ದಾರೆ.

ಸೋಮನಾಳದ ರೈತರು ಹನುಮಂತಪ್ಪ ಪೂಜಾರಿ ಅವರಿಗೆ ರಸ್ತೆಯ ವಿಷಯವಾಗಿ ಹಲವು ಬಾರಿ ಮನವರಿಕೆ ಮಾಡಿ ಕೊಟ್ಟಿದ್ದಾರೆ. ಅದರ ರೈತ ಬಗ್ಗಲಿಲ್ಲ. ಇದರಿಂದ ಅಸಹಾಯಕರಾಗಿದ್ದ ರೈತರು ಪ್ರಕರಣವನ್ನು ಪೊಲೀಸ್ ಇಲಾಖೆಗೆ ತಿಳಿಸಿದ್ದಾರೆ.

1002117480

ಈ ಬಗ್ಗೆ ಈ ದಿನ.ಕಾಮ್ ಮುದ್ದೇಬಿಹಾಳದ ಕೆಬಿಜಿಎನ್ಎಲ್ ಸಹಾಯಕ ಎಇಇ ಅವರನ್ನು ಮಾತನಾಡಿಸಿದಾಗ, “ಸರ್ವೆ ನಂಬರ್ 30ರ ರೈತ ರಸ್ತೆ ಬಂದ್ ಮಾಡಿದ್ದು ಮೊದಲ ತಪ್ಪು. ರಸ್ತೆ ಮೇಲೆ ಬಿತ್ತನೆ ಮಾಡಿರುವುದು ಇನ್ನೊಂದು ತಪ್ಪು. 2013-14ರಲ್ಲಿ ಕಾಲುವೆ ಕಾಮಗಾರಿ ಮುಗಿದಿದೆ. ಇವರು ಒಂಬತ್ತು ವರ್ಷಗಳ ನಂತರ ಕೋರ್ಟಿಗೆ ಹೋಗಿದ್ದಾರೆ. ರಸ್ತೆ ಬಂದ್ ಆದಾಗಿನಿಂದ ಇತರೆ ರೈತರಿಗೆ ತೊಂದರೆ ಮಾಡುತ್ತಿದ್ದಾರೆ. ನಾವು ಅವರಿಗೆ ಪರಿಹಾರದ ಬಗ್ಗೆ ಮಾಹಿತಿ ಕೊಟ್ಟಿದ್ದೇವೆ. ಇದಕ್ಕೂ ಮಣಿಯದ ಹೋದರೆ ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳುತ್ತೇವೆ” ಎಂದು ಮಾಹಿತಿ ನೀಡಿದರು.

ಜಮೀನು ಮಾಲೀಕ, ರೈತ ಹಣಮಂತ ಪೂಜಾರಿ ಮಾತನಾಡಿ, ನನ್ನ ಜಮೀನಿನಲ್ಲಿ ಲೆಟರ್ ಕಾಲುವೆ ಹೋಗಿದೆ. ಅದಕ್ಕೆ ಸರ್ಕಾರ ಮತ್ತು ಅಧಿಕಾರಿಗಳು ಪರಿಹಾರ ಕೊಡುವುದನ್ನು ಬಿಟ್ಟು ರೈತರ ಮಧ್ಯೆ ಜಗಳ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಮೂರು ವರ್ಷವಾದರೂ ಪರಿಹಾರ ಸಿಕ್ಕಿಲ್ಲ. ನನಗೆ ಪರಿಹಾರ ಕೊಡಬೇಕು” ಎಂದು ಸರ್ಕಾರವನ್ನು ಆಗ್ರಹಿಸಿದರು.

1002117467

ಈ ಬಗ್ಗೆ ಮುದ್ದೇಬಿಹಾಳ ತಾಲೂಕಿನ ತಹಶೀಲ್ದಾರರಾದ ಬಲರಾಮ ಕಟ್ಟಿಮನಿ ಅವರು ಮಾತನಾಡಿ, ಸಮಸ್ಯೆ ನಮ್ಮ ಗಮನಕ್ಕೆ ಬಂದಿದೆ. ರೈತನಿಗೆ ಮನವರಿಕೆ ಮಾಡಿ ರಸ್ತೆಯ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ರಸ್ತೆಯ ಸಮಸ್ಯೆಗೊಳಗಾಗಿರುವ ರೈತರು ಅಧಿಕಾರಿಗಳನ್ನು ಮತ್ತು ಪೊಲೀಸ್ ಇಲಾಖೆಯವರನ್ನು ಕರೆಸಿದ್ದು, ರಸ್ತೆಯ ಸಮಸ್ಯೆ ಇತ್ಯರ್ಥಗೊಳಿಸಿದ್ದಾರೆಂದು ಕೆಲವು ರೈತರು ಈ ದಿನದ ಕಾಂಗೆ ಮಾಹಿತಿ ನೀಡಿದ್ದಾರೆ.

ಮೂರು ವರ್ಷವಾದರೂ ಸರ್ಕಾರ ಜಮೀನು ತೆಗೆದುಕೊಂಡಿರುವುದು ಮತ್ತು ಕಾಮಗಾರಿ ಮುಗಿಸಿರುವುದು ಒಳ್ಳೆಯದು, ಆದರೆ ಪರಿಹಾರ ಇಲ್ಲಿಯವರೆಗೂ ಕೊಡದಿರುವುದು ದುರಂತವೇ ಸರಿ. ಇನ್ನಾದರೂ ಪರಿಹಾರ ಕೊಡುವರೇ ಕಾದು ನೋಡಬೇಕಾಗಿದೆ.

1002117479
ರಮೇಶ್ ಎಸ್ ಹೊಸಮನಿ
ರಮೇಶ ಎಸ್ ಹೊಸಮನಿ
+ posts

ವಿಜಯಪುರ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ರಮೇಶ ಎಸ್ ಹೊಸಮನಿ
ರಮೇಶ ಎಸ್ ಹೊಸಮನಿ
ವಿಜಯಪುರ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...