ಮುದ್ದೇಬಿಹಾಳ | ಶಾಸಕ ನಾಡಗೌಡ ಅವರಿಗೆ ಸಚಿವ ಸ್ಥಾನ ನೀಡಲು ಮಲ್ಲು ತಳವಾರ ಆಗ್ರಹ

Date:

ವಿಜಯಪುರ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಸ್ತಿತ್ವ ಉಳಿಸಲು ಹಾಗೂ ಬಲಪಡಿಸಲು ದಶಕಗಳಿಂದ ಶ್ರಮಿಸುತ್ತಿದ್ದಾರೆ. ಪಕ್ಷದ ಕಷ್ಟದ ಕಾಲದಲ್ಲೂ ತ್ಯಾಗ ಮತ್ತು ಸತ್ಯನಿಷ್ಠೆಯಿಂದ ಕಾರ್ಯನಿರ್ವಹಿಸಿದ ಗೌರವ ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದ ಹಿರಿಯ ಕಾಂಗ್ರೆಸ್ ನಾಯಕ ಸಿ ಎಸ್ ನಾಡಗೌಡ ಅವರಿಗೆ ಸಲ್ಲುತ್ತದೆ. ಹಾಗಾಗಿ ಅವರಿಗೆ ಈ ಬಾರಿ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ದೌರ್ಜನ್ಯ ತಡೆ ಸಮಿತಿ ಸದಸ್ಯ ಮಲ್ಲು ತಳವಾರ ಆಗ್ರಹಿಸಿದ್ದಾರೆ.

ಮುದ್ದೇಬಿಹಾಳ ಪಟ್ಟಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಜನರ ಹಿತಕ್ಕಾಗಿ ಕಾರ್ಯನಿರ್ವಹಿಸುತ್ತಿರುವ ಇಂತಹ ನಾಯಕರಿಗೆ ಸಚಿವ ಸ್ಥಾನ ನೀಡಲೇಬೇಕು. ಸಿಎಸ್ ನಾಡಗೌಡರ ರಾಜಕೀಯ ಜೀವನ ಶುದ್ಧ ಮತ್ತು ಪ್ರಾಮಾಣಿಕತೆ ಮಾದರಿಯಾಗಿದೆ. ತಾಲೂಕಿನ ಅಭಿವೃದ್ಧಿಗೆ ಅವರು ಅನೇಕ ಯೋಜನೆಗಳನ್ನು ತರಿಸಿದ್ದು,ರಸ್ತೆ, ವಿದ್ಯುತ್, ನೀರು ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಶಾಶ್ವತ ಬದಲಾವಣೆ ತಂದಿದ್ದಾರೆ. ಇಂತಹ ಜನಪ್ರಿಯ ನಾಯಕರಿಗೆ ಸಚಿವ ಸ್ಥಾನ ದೊರೆತರೆ ಜಿಲ್ಲೆಯ ಸಮಗ್ರ ಅಭಿವೃದ್ಧಿ ಮತ್ತಷ್ಟು ವೇಗ ಪಡೆಯುತ್ತದೆ” ಎಂದು ಒತ್ತಾಯಿಸಿದರು.

ಇದನ್ನೂ ಓದಿ: ಮುದ್ದೇಬಿಹಾಳ | ಆಯತಪ್ಪಿ ಕಾಲುವೆಗೆ ಬಿದ್ದ ಯುವತಿ; ರಕ್ಷಿಸಲು ಹೋದ ಸಹೋದರರೂ ನೀರುಪಾಲು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾಡಗೌಡರ ಹೋರಾಟ ಮನೋಭಾವ ಮತ್ತು ಜನಪರ ನೆರವುಗಳಿಂದ ಯುವ ನಾಯಕರಿಗೆ ಪ್ರೇರಣೆ ದೊರೆಯುತ್ತದೆ. ಗ್ರಾಮ ಮಟ್ಟದಿಂದಲೂ ಜನರು ಅವರ ಹೆಸರಿನಲ್ಲಿ ವಿಶ್ವಾಸ ಹೊಂದಿದ್ದಾರೆ. ಪಕ್ಷದ ಉನ್ನತ ನಾಯಕತ್ವ ಈ ಭಾವನೆ ಗೌರವಿಸಿ ಸಚಿವ ಸ್ಥಾನ ನೀಡಬೇಕು. ಇದು ಕಾಂಗ್ರೆಸ್ ಪಕ್ಷದ ಬಲವರ್ದನೆಗೆ ಸಹಕಾರಣವಾಗುತ್ತದೆ. ತಾಲೂಕಿನ ಹಲವಾರು ಹಿರಿಯ ಕಾಂಗ್ರೆಸ್ ಮುಖಂಡರು, ಯುವ ನಾಯಕರು ಮತ್ತು ಕಾರ್ಯಕರ್ತರು ಸಹ ನಾಡಗೌಡರಿಗೆ ಸಚಿವ ಸ್ಥಾನ ನೀಡುವ ಒತ್ತಾಯ ವ್ಯಕ್ತಪಡಿಸಿದ್ದು, ಜಿಲ್ಲಾ ಮಟ್ಟದಲ್ಲಿ ಸಹ ಬೆಂಬಲ ಅಭಿಯಾನ ಆರಂಭವಾಗಿದೆ. ನಾಡಗೌಡರಿಗೆ ನ್ಯಾಯ ನ್ಯಾಯ ಸಿಗಲಿ ಎಂಬ ಘೋಷಣೆಯೊಂದಿಗೆ ಕಾರ್ಯಕರ್ತರು ಸಹಿ ಅಭಿಯಾನ, ಪೋಸ್ಟರ್ ಅಭಿಯಾನ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಬೆಂಬಲ ಅಭಿಯಾನ ಶೀಘ್ರದಲ್ಲೇ ಆರಂಭಿಸಲಿದ್ದಾರೆ ಎಂದು ತಿಳಿಸಿದರು.

WhatsApp Image 2025 05 16 at 6.54.26 PM
Sub Editor at Eedina.com |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...