ಮುದ್ದೇಬಿಹಾಳ | ಮುಸ್ಲಿಂ ಅಭ್ಯರ್ಥಿಗೆ ಪಪಂ ಅಧ್ಯಕ್ಷ ಸ್ಥಾನ ನೀಡಲು ಶಿವಾನಂದ ವಾಲಿ ಮನವಿ

Date:

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣ ಪಂಚಾಯತಿಯ ಮೊದಲ ಅವಧಿಯ ಉಳಿದ 15 ತಿಂಗಳ ಅಧ್ಯಕ್ಷ ಸ್ಥಾನವನ್ನು ಮುಸ್ಲಿಂ ಸಮಾಜದವರಿಗೆ ನೀಡಬೇಕು ಎಂದು ಯುವ ಜನ ಸೇನೆ ರಾಜ್ಯಾಧ್ಯಕ್ಷ ಶಿವಾನಂದ ವಾಲಿ ಆಗ್ರಹಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕಳೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ನಾಲತವಾಡ ಪಟ್ಟಣ ಪಂಚಾಯಿತಿಗೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವಲ್ಲಿ ಮುಸ್ಲಿಂ ಸಮುದಾಯ ನಿರ್ಣಾಯಕ ಪಾತ್ರ ವಹಿಸಿದೆ. ಕೇವಲ ಮತದಾನದಲ್ಲಷ್ಟೇ ಅಲ್ಲದೆ, ಚುನಾವಣೆಯ ಪ್ರತಿ ಹಂತದಲ್ಲೂ ಪಕ್ಷದ ಕಾರ್ಯಚಟುವಟಿಕೆಗಳಿಗೆ ಮುಸ್ಲಿಂ ಸಮಾಜ ಸಂಪೂರ್ಣ ಬೆಂಬಲ ನೀಡಿದೆ. ಇಂತಹ ಸಂದರ್ಭದಲ್ಲಿ ಅವರಿಗೆ ರಾಜಕೀಯ ಪ್ರತಿನಿಧಿತ್ವ ನೀಡುವುದು ಅವಶ್ಯಕತೆಯಷ್ಟೇ ಅಲ್ಲ, ಸಾಮಾಜಿಕ ನ್ಯಾಯದ ಪ್ರತಿಬಿಂಬವೂ ಆಗಿದೆ. ಮುಂದಿನ ದಿನಗಳಲ್ಲಿ ಪಟ್ಟಣ ಪಂಚಾಯಿತಿ ಅಭಿವೃದ್ಧಿಗೆ ಮುಸ್ಲಿಂ ಸಮಾಜದ ನಾಯಕತ್ವ ಸಕಾರಾತ್ಮಕ ಮತ್ತು ಪರಿಣಾಮಕಾರಿ ಪಾತ್ರ ವಹಿಸಲಿದೆ” ಎಂದು ತಿಳಿಸಿದರು.

ಇದನ್ನೂ ಓದಿ: ವಿಜಯಪುರ | ಪಂಚ ಗ್ಯಾರಂಟಿಗಳ ಕುರಿತು ಜನಜಾಗೃತಿ; ಎಲ್‌ಇಡಿ ಪ್ರದರ್ಶನ ವಾಹನಕ್ಕೆ ಚಾಲನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾಲತವಾಡದ ಸಮಗ್ರ ಅಭಿವೃದ್ಧಿ, ಶಾಂತಿ ಹಾಗೂ ಸಾಮಾಜಿಕ ಒಗ್ಗಟ್ಟಿಗೆ ಎಲ್ಲ ಸಮುದಾಯಗಳ ಸಹಕಾರ ಅಗತ್ಯವಾಗಿದ್ದು, ಮುಸ್ಲಿಂ ಸಮಾಜಕ್ಕೆ ಅವಕಾಶ ನೀಡುವುದರಿಂದ ರಾಜಕೀಯದಲ್ಲಿ ಸಮಾನತೆ ಮತ್ತು ವಿಶ್ವಾಸ ಮತ್ತಷ್ಟು ಬಲಗೊಳ್ಳಲಿದೆ. ರಾಜ್ಯ ಹಾಗೂ ತಾಲೂಕು ಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಮುಸ್ಲಿಂ ಸಮಾಜ ಮಹತ್ವದ ಪಾತ್ರ ವಹಿಸಿದೆ. ನಾಲತವಾಡ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿಯೂ ಒಗ್ಗಟ್ಟಿನಿಂದ ಮತದಾನ ಮಾಡಿ ಪಕ್ಷದ ಗೆಲುವಿಗೆ ಕಾರಣವಾಗಿದ್ದಾರೆ. ಆದ್ದರಿಂದ ಅವರಿಗೆ ಸೂಕ್ತ ಸ್ಥಾನಮಾನ ನೀಡುವುದು ಪಕ್ಷದ ನೈತಿಕ ಕರ್ತವ್ಯವಾಗಿದೆ. ಹೀಗಾಗಿ, ನಾಲತವಾಡ ಪಂಚಾಯಿತಿಯ ಅಧ್ಯಕ್ಷ ಸ್ಥಾನವನ್ನು ಮುಸ್ಲಿಂ ಸಮಾಜ ಕೈ ನೀಡುವಂತೆ ಸಂಬಂಧಿಸಿದ ಶಾಸಕರು ಹಾಗೂ ಪಕ್ಷದ ನಾಯಕರು ತಕ್ಷಣ ಕ್ರಮ ಕೈಗೊಳ್ಳಬೇಕು” ಎಂದು ಮನವಿ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...